ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಪ್ರತಿ ತಾಲೂಕಿನಲ್ಲಿ ತಲಾ 10 Ambulance ಮೀಸಲಿಡಬೇಕು
Team Udayavani, Jul 11, 2020, 7:34 PM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ ಕನಿಷ್ಠ 1500 ಹಾಸಿಗೆಗಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ರಚಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಸರಕಾರವನ್ನು ಒತ್ತಾಯಿಸಿದ್ದಾರೆ. ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿನಲ್ಲಿ ತಲಾ 10ರಂತೆ ಆ್ಯಂಬುಲೆನ್ಸ್ಗಳನ್ನು ಮೀಸಲಿಡಬೇಕು ಎಂದರು.