ಗೆಹ್ಲೋಟ್‌ ವಿರುದ್ಧ ಸಿಡಿದ ಪೈಲಟ್‌ ; ಪತನದ ಭೀತಿಯಲ್ಲಿ ರಾಜಸ್ಥಾನ ಕಾಂಗ್ರೆಸ್‌ ಸರಕಾರ


Team Udayavani, Jul 13, 2020, 6:16 AM IST

ಗೆಹ್ಲೋಟ್‌ ವಿರುದ್ಧ ಸಿಡಿದ ಪೈಲಟ್‌ ; ಪತನದ ಭೀತಿಯಲ್ಲಿ ರಾಜಸ್ಥಾನ ಕಾಂಗ್ರೆಸ್‌ ಸರಕಾರ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್.

ಹೊಸದಿಲ್ಲಿ/ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ರಾಜ್ಯ ಕಾಂಗ್ರೆಸ್‌ ಘಟಕ ಹೋಳಾಗುವ ಸ್ಥಿತಿ ತಲುಪಿದೆಯಲ್ಲದೆ ಸರಕಾರವೂ ಪತನ ಹೊಂದುವ ಲಕ್ಷಣಗಳು ಗೋಚರಿಸಿವೆ.

ಇದರ ಮಧ್ಯೆಯೇ ಹಾನಿ ಸರಿಪಡಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ತತ್‌ಕ್ಷಣವೇ ಜೈಪುರಕ್ಕೆ ಮರಳುವಂತೆ ಸಚಿನ್‌ ಪೈಲಟ್‌ಗೆ ಸೂಚಿಸಿದೆ. ಗೆಹ್ಲೋಟ್‌ ಅಡಿಯಲ್ಲೇ ಕೆಲಸ ಮಾಡುವಂತೆಯೂ ಹೇಳಿದೆ ಎಂದು ಮೂಲಗಳು ತಿಳಿಸಿವೆ.

ಇದರ ಜತೆಗೆ ಮೂವರು ವೀಕ್ಷಕರನ್ನು ಜೈಪುರಕ್ಕೆ ಕಳುಹಿಸಲಾಗಿದ್ದು, ಸೋಮವಾರ ಬೆಳಗ್ಗೆ 10.30ಕ್ಕೆ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದೆ.

ಸಚಿನ್‌ ಪೈಲಟ್‌ ಅವರು ರವಿವಾರ ಸಂಜೆ ರಾಹುಲ್‌ ಗಾಂಧಿ ಜತೆಗೂ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ವಾಪಸ್‌ ತೆರಳುವಂತೆ ರಾಹುಲ್‌ ಅವರೂ ಸೂಚಿಸಿದರು ಎನ್ನಲಾಗಿದೆ.

30 ಶಾಸಕರ ಬೆಂಬಲವಿದೆ: ಸಚಿನ್‌
‘ನನ್ನ ಬೆಂಬಲಕ್ಕೆ 30 ಶಾಸಕರಿದ್ದಾರೆ. ಗೆಹ್ಲೋಟ್‌ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಸಿಎಂ ಸೋಮವಾರ ಕರೆದಿರುವ ಪಕ್ಷದ ಶಾಸಕಾಂಗ ಸಭೆಗೆ ತಾವು ಹಾಜರಾಗುವುದಿಲ್ಲ’ ಎಂದೂ ಸಚಿನ್‌ ತಿಳಿಸಿದ್ದಾರೆ. ಈ ನಡುವೆ, ಪೈಲಟ್‌ ಜತೆ ದಿಲ್ಲಿಗೆ ತೆರಳಿದ್ದ ಮೂವರು ಶಾಸಕರು ರವಿವಾರ ರಾತ್ರಿ ಜೈಪುರಕ್ಕೆ ಹಿಂದಿರುಗಿದ್ದು, ಕಾಂಗ್ರೆಸ್‌ನಲ್ಲೇ ಇರುವುದಾಗಿ ತಿಳಿಸಿದ್ದಾರೆ.

ಆಂತರಿಕ ಮೂಲಗಳು ಹೇಳುವುದೇನು?
ರಾಜಸ್ಥಾನ ಸರಕಾರ ಅಸ್ತಿತ್ವಕ್ಕೆ ಬಂದಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಗೆಹ್ಲೋಟ್‌ ಜತೆಗೆ ಸಚಿನ್‌ ಸಂಬಂಧ ಉತ್ತಮವಾಗಿಲ್ಲ. ಅದರ ಪರಿಣಾಮವಾಗಿ ಮಧ್ಯಪ್ರದೇಶದಲ್ಲಿ ನಡೆದಂತೆ ರಾಜಸ್ಥಾನದಲ್ಲಿಯೂ ಕೆಲವು ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದವು ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ಆರಂಭಕ್ಕೂ ಮುನ್ನವೇ ಸಚಿನ್‌ ಪೈಲಟ್‌ ಮತ್ತು ಬಿಜೆಪಿ ನಾಯಕರ ನಡುವೆ ಮಾತುಕತೆ ನಡೆಯುತ್ತಿತ್ತು. ಆಗ ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಸರಕಾರ ಕೆಡವಿದರೆ ಸಚಿನ್‌ ಪೈಲಟ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ ಬಿಜೆಪಿ ಅದಕ್ಕೆ ಸಿದ್ಧವಿಲ್ಲ. ಬಿಜೆಪಿಯ ಈ ನಿಲುವು ಸಚಿನ್‌ಗೆ ಇಷ್ಟವಾಗಿಲ್ಲ. ಅಂಥ ಸಂದರ್ಭ ಬಂದರೆ ಪ್ರತ್ಯೇಕ ಪಕ್ಷವನ್ನು ಸ್ಥಾಪಿಸಲು ಪೈಲಟ್‌ ಆಲೋಚಿಸಿದ್ದಾರೆ ಎಂದು ರಾಜಸ್ಥಾನ ಕಾಂಗ್ರೆಸ್‌ನ ಕೆಲವು ನಾಯಕರು ಹೇಳಿದ್ದಾರೆ.

ಕಪಿಲ್‌ ಸಿಬಲ್‌ ಆತಂಕ
ಕಾಂಗ್ರೆಸ್‌ ಅಧಿಕಾರವಿರುವ ರಾಜ್ಯಗಳಲ್ಲಿ ಪಕ್ಷದೊಳಗೆ ಭಿನ್ನಮತ ತಲೆದೋರಿದಾಗ ಪಕ್ಷದ ಕೇಂದ್ರ ನಾಯಕತ್ವ ಬೇಗನೇ ಎಚ್ಚೆತ್ತುಕೊಂಡು ಅದನ್ನು ಶಮನಗೊಳಿಸಲು ಪ್ರಯತ್ನಿಸಬೇಕು. ಪರಿಸ್ಥಿತಿ ಕೈ ಮೀರಿದಾಗ ಪ್ರಯತ್ನಿಸಿದರೆ ಅದು ಸಾಧ್ಯವಾಗದು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಸಿಂಧಿಯಾ ಖೇದ
ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಭಿನ್ನಮತದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ನಾನು ಮತ್ತು ಸಚಿನ್‌ ಹಳೆಯ ಸ್ನೇಹಿತರು. ಕಾಂಗ್ರೆಸ್‌ ನನ್ನನ್ನೂ ಈ ಹಿಂದೆ ಮೂಲೆಗುಂಪಾಗಿಸಿತ್ತು. ಈಗ ಮಿತ್ರ ಸಚಿನ್‌ ಅವರನ್ನೂ ಮೂಲೆಗುಂಪಾಗಿಸಿರುವುದು ಬೇಸರ ತರಿಸಿದೆ ಎಂದಿದ್ದಾರೆ.
ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸಿಂಧಿಯಾ ಇದೇ ವರ್ಷದ ಆರಂಭದಲ್ಲಿ ಪಕ್ಷ ತೊರೆದು ಬೆಂಬಲಿಗರೊಡನೆ ಬಿಜೆಪಿ ಸೇರಿದ್ದರು. ಆ ಬೆಳವಣಿಗೆಯಿಂದಾಗಿ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಕಮಲ್‌ನಾಥ್‌ ನೇತೃತ್ವದ ಸರಕಾರ ಪತನಗೊಂಡಿತ್ತು.

ವಿವಾದದ ಕಿಡಿ ಹೊತ್ತಿಸಿದ ನೋಟಿಸ್‌?
ಇತ್ತೀಚೆಗಿನ ರಾಜ್ಯಸಭಾ ಚುನಾವಣೆ ವೇಳೆ ಮೂವರು ಪಕ್ಷೇತರ ಶಾಸಕರು ಕಾಂಗ್ರೆಸ್‌ ಶಾಸಕರಿಗೆ ಲಂಚ ನೀಡಲು ಮುಂದಾಗಿದ್ದ ವಿಚಾರ ವಿವಾದ ಸೃಷ್ಟಿಸಿತ್ತು. ಹೀಗಾಗಿ ಆ ಪ್ರಕರಣವನ್ನು ರಾಜಸ್ಥಾನ ಸರಕಾರದ ಭ್ರಷ್ಟಾಚಾರ ನಿಗ್ರಹ ದಳ ತನಿಖೆ ನಡೆಸುತ್ತಿದೆ. ಇದರ ಜತೆಯಲ್ಲೇ ರಾಜಸ್ಥಾನ ಪೊಲೀಸ್‌ ಇಲಾಖೆಯಿಂದ ವಿಶೇಷ ಕಾರ್ಯಪಡೆ (ಎಸ್‌ಪಿಜಿ) ರಚಿಸಿ ಆ ಮೂಲಕವೂ ತನಿಖೆ ನಡೆಸಲಾಗುತ್ತಿದೆ.

ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತು ಡಿಸಿಎಂ ಸಚಿನ್‌ ಪೈಲಟ್‌ ಅವರ ಹೇಳಿಕೆ ಪಡೆಯಲು ಮುಂದಾಗಿರುವ ಎಸ್‌ಪಿಜಿ ಅವರಿಬ್ಬರಿಗೂ ನೋಟಿಸ್‌ ಜಾರಿಗೊಳಿಸಿದೆ. ಅಧಿಕಾರಿಗಳು ಬಂದು ಸಚಿನ್‌ ಮನೆಯ ಬಾಗಿಲಿಗೆ ನೋಟಿಸ್‌ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದು ಸಚಿನ್‌ ಅವರ ಆಕ್ರೋಶಕ್ಕೆ ಕಾರಣ ಎನ್ನಲಾಗಿದೆ.

ಇಂದಿನ ದಿನಗಳಲ್ಲಿ ಬಿಜೆಪಿ ವಾಮಮಾರ್ಗಗಳ ಮೂಲಕ ಅಧಿಕಾರ ಪಡೆಯುವುದರಲ್ಲಿ ನಿರತವಾಗಿದೆ. ಕಳೆದ ವರ್ಷ ಕರ್ನಾಟಕದಲ್ಲಿ ಮಾಡಿದ್ದನ್ನೇ ಈ ವರ್ಷ ಮಧ್ಯಪ್ರದೇಶದಲ್ಲಿ ಮಾಡಿತ್ತು. ಈಗ ರಾಜಸ್ಥಾನದಲ್ಲೂ ಅದನ್ನೇ ಮುಂದುವರಿಸಿದೆ.
– ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Chhattisgarh ಮತ್ತೆ ಎನ್‌ಕೌಂಟರ್‌: 3 ನಕ್ಸಲರ ಹತ್ಯೆ

Chhattisgarh ಮತ್ತೆ ಎನ್‌ಕೌಂಟರ್‌: 3 ನಕ್ಸಲರ ಹತ್ಯೆ

Election Campaign ಪಿಒಕೆ ಮರಳಿ ಪಡೆದೇ ತೀರುತ್ತೇವೆ: ಅಮಿತ್‌ ಶಾ

Election Campaign ಪಿಒಕೆ ಮರಳಿ ಪಡೆದೇ ತೀರುತ್ತೇವೆ: ಅಮಿತ್‌ ಶಾ

13

Tragic: ಗುಜರಾತ್‌ ಗೇಮಿಂಗ್‌ ಜೋನ್‌ ನಲ್ಲಿ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಜೀವ ದಹನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.