ಭಾರತೀಯ ವಿದ್ಯಾರ್ಥಿಗಳಿಗೆ ಆತಂಕ ತಂದ ದೇಶ ಬಿಡಿ ಆದೇಶ


Team Udayavani, Jul 13, 2020, 12:23 PM IST

ಭಾರತೀಯ ವಿದ್ಯಾರ್ಥಿಗಳಿಗೆ ಆತಂಕ ತಂದ ದೇಶ ಬಿಡಿ ಆದೇಶ

ಹೊಸದಿಲ್ಲಿ: ಕೋವಿಡ್ ಹಿನ್ನೆಲೆಯಲ್ಲಿ ಅಮೆರಿಕದ ವಿಶ್ವವಿದ್ಯಾಲಯಗಳು ಆನ್‌ಲೈನ್‌ನಲ್ಲೇ ವರ್ಷಪೂರ್ತಿ ತರಗತಿಗಳನ್ನು ನಡೆಸಲು ತೀರ್ಮಾನಿಸಿದರೆ, ಇಲ್ಲಿ ಕಲಿಯುತ್ತಿರುವ ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಮರಳಬೇಕಾಗುತ್ತದೆ ಎಂಬ ಅಮೆರಿಕದ ವಲಸೆ ಪ್ರಾಧಿಕಾರದ ಇತ್ತೀಚಿನ ಆದೇಶ, ಅಮೆರಿಕದಲ್ಲಿನ ಭಾರತೀಯ ವಿದ್ಯಾರ್ಥಿಗಳಲ್ಲಿ ಆತಂಕ ಹುಟ್ಟು ಹಾಕಿದೆ.

ಶಿಕ್ಷಣ ಅರ್ಧಕ್ಕೆ ಮೊಟಕುಗೊಂಡರೆ ತಮ್ಮ ಮುಂದಿನ ಭವಿಷ್ಯ ಏನು?, ಶಿಕ್ಷಣಕ್ಕಾಗಿ ಮಾಡಿರುವ ಸಾಲದ ಕಥೆಯೇನು?, ಮುಂದೆ ಉದ್ಯೋಗ ಪಡೆಯುವುದಾದರೂ ಹೇಗೆ? ಎಂಬ ಚಿಂತೆ ಇವರನ್ನು ಕಾಡುತ್ತಿದೆ. ಪ್ರಸ್ತುತ ಅಮೆರಿಕದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 1,94,556 ಮಂದಿ ಭಾರತೀಯ ಮೂಲದವರು ಅಧ್ಯಯನ ನಡೆಸುತ್ತಿದ್ದಾರೆ. ಇವರೆಲ್ಲ ಈಗ ಗಡೀಪಾರಾಗುವ ಆತಂಕ ಎದುರಿಸುತ್ತಿದ್ದಾರೆ.

“ಈ ಆದೇಶ ಜಾರಿಯಾದರೆ, ಇದ್ದಕ್ಕಿದ್ದಂತೆ ನನ್ನ ವಾಸ್ತವ್ಯಕ್ಕೆ ಕಾನೂನಿನ ಮಾನ್ಯತೆ ರದ್ದಾಗುತ್ತದೆ. ಹೀಗಾಗಿ, ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಗಡೀಪಾರಾಗುವ ಭಯ ನನ್ನನ್ನು ಕಾಡುತ್ತಿದೆ. ಒಂದು ವೇಳೆ, ನನ್ನನ್ನು ಈಗ ಗಡೀಪಾರು ಮಾಡಿದರೆ, ಕೆಲ ತಿಂಗಳ ಅನಂತರ ಹಿಂದಿರುಗಿ ಬಂದು ಶಿಕ್ಷಣ ಮುಂದು ವರಿಸಲು ಸಾಧ್ಯವೇ ಎಂಬ ಬಗ್ಗೆ ನನಗೆ ಯಾವುದೇ ಖಚಿತತೆ ಇಲ್ಲ’ ಎಂದು ಆತಂಕ ವ್ಯಕ್ತಪಡಿಸುತ್ತಾರೆ ಡ್ನೂಕ್‌ ವಿವಿಯಲ್ಲಿ ಓದುತ್ತಿರುವ ಶೋಭನಾ ಮುಖರ್ಜಿ. “ಹೀಗಾದರೆ, ಈ ಸೆಮಿಸ್ಟರ್‌ನ ಕಥೆ ಏನು? ಪರೀಕ್ಷೆ ತೆಗೆದುಕೊಳ್ಳಲು ನನಗೆ ಅನುಮತಿ ದೊರೆಯುವುದೇ? ಇಲ್ಲವೇ? ಎಂಬ ಭಯ ನನ್ನನ್ನು ಕಾಡುತ್ತಿದೆ. ಶಿಕ್ಷಣಕ್ಕಾಗಿ ನಾನು ಮಾಡಿರುವ ಸಾಲದ ಕಥೆ ಏನು?. ಜತೆಗೆ, ಬೋಧನಾ ಶುಲ್ಕ ಭರಿಸಲು ವಿವಿಯಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಈ ಕೆಲಸ ಹೋದರೆ ನನ್ನ ಗತಿಯೇನು?. ಶಿಕ್ಷಣ ಮುಂದುವರಿಸಲು ಸಾಧ್ಯವಾಗದಿದ್ದರೆ, ನನಗೆ ಮುಂದೆ ಉದ್ಯೋಗ ಸಿಗುವುದಾದರೂ ಹೇಗೆ?’ ಎಂಬ ಆತಂಕ ಇಲಿನಾಯ್ಸ ವಿವಿಯ ವಿದ್ಯಾರ್ಥಿಯದು.

ಟಾಪ್ ನ್ಯೂಸ್

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.