ಯಾದಗಿರಿಯಲ್ಲಿ ಭಣ ಭಣ
Team Udayavani, Jul 13, 2020, 2:19 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ನಿತ್ಯ ಅಟ್ಟಹಾಸ ಮೆರೆಯುತ್ತಿರುವುದರಿಂದ ಜಿಲ್ಲೆಯಲ್ಲಿ ರವಿವಾರ ವಾತಾವರಣ ಭಣ ಭಣವಾಗಿತ್ತು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ ಡೌನ್ ಆದೇಶದಿಂದಾಗಿ ಬೆಳಗ್ಗೆ ಹಾಲು, ತರಕಾರಿ ಮಾತ್ರ ದೊರೆಯಿತು. ಉಳಿದೆಲ್ಲ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಾಗಿ ಮಹಾರಾಷ್ಟ್ರದಿಂದ ಹಿಂತಿರುಗಿರುವ ಜನರಲ್ಲಿಯೇ ಕೋವಿಡ್ ಸೋಂಕು ದೃಢವಾಗುತ್ತಿತ್ತು. ಇದೀಗ ಮೂರನೇ ಹಂತಕ್ಕೆ ತಲುಪಿದೆ. ಸಮುದಾಯಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಹೀಗಾಗಿ ಜನರು ಮನೆಯಿಂದ ಹೊರ ಬರುವುದಕ್ಕೆ ಹೆದರುವ ವಾತಾವರಣ ನಿರ್ಮಾಣವಾಗಿದೆ. ಸಾರಿಗೆ ಸಂಚಾರವೂ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಮುಖ್ಯ ರಸ್ತೆಗಳೆಲ್ಲ ಸ್ತಬ್ಧವಾಗಿ ಗೋಚರಿಸಿದವು. ಇನ್ನೂ ಖಾಸಗಿ ವಾಹನಗಳ ಸಂಚಾರ ಮತ್ತು ಆಟೋ ಸಂಚಾರವೂ ಬಂದ್ ಆಗಿತ್ತು. ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿತ್ತು.
ಕೋವಿಡ್ ಆತಂಕದಿಂದ ತತ್ತರಿಸಿರುವ ಜನರು ಒಂದೊಪ್ಪತ್ತು ಉಪವಾಸ ಇದ್ದರೂ ಪರ್ವಾಗಿಲ್ಲ ಹೊರಹೋಗುವುದು ಬೇಡ ಎನ್ನುವ ಮನಸ್ಥಿತಿಗೆ ಹೊಂದಾಣಿಕೆಯಾಗುತ್ತಿರುವುದು ಸ್ಪಷ್ಟವಾಗಿ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ