ನಗರದಿಂದ ಮತ್ತೂಂದು ಮಹಾವಲಸೆ

ಲಾಕ್‌ಡೌನ್‌ನಿಂದ ಊರುಗಳಿಗೆ ತೆರಳಲು ಜನ ನಿರ್ಧಾರ

Team Udayavani, Jul 14, 2020, 9:53 AM IST

BNG-TDY-1

ಬೆಂಗಳೂರು: ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಿದ ಅಲ್ಪಾವಧಿಯ ಲಾಕ್‌ಡೌನ್‌ ಸೋಂಕು ವಿಸ್ತರಣೆಗೆ ರಹದಾರಿ ಆಗಲಿದೆಯೇ? – ಲಾಕ್‌ಡೌನ್‌ ಘೋಷಣೆ ಬೆನ್ನಲ್ಲೇ ರಾಜಧಾನಿಯಲ್ಲಿ ಶುರುವಾದ ಮತ್ತೂಂದು ಸುತ್ತಿನ ಮಹಾವಲಸೆ ಈ ಆತಂಕ ಸೃಷ್ಟಿಸಿದೆ.

ಸಾವಿರಾರು ಸಂಖ್ಯೆಯಲ್ಲಿ ಜನ ನಗರ ತೊರೆದು ಸ್ವಂತ ಊರುಗಳತ್ತ ಮುಖಮಾಡುತ್ತಿದ್ದಾರೆ. ಸರ್ಕಾರ ಕೂಡ ಹೋಗುವವರು ಹೋಗಬಹುದು ಎಂದು ಹೇಳುವುದರ ಜತೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕೂಡ ಕಲ್ಪಿಸಿದೆ. ಆದರೆ ಹೀಗೆ ವಾಪಸ್‌ ಹೊರಟವರಲ್ಲಿ ಯಾರಿಗಾದರೂ ಸೋಂಕು ತಗುಲಿದ್ದರೆ, ಅಕ್ಷರಶಃ ಅವರು “ಕೋವಿಡ್ ಕ್ಯಾರಿಯರ್‌’ (ಕೋವಿಡ್ ವೈರಸ್‌ ವಾಹಕ) ಆಗಲಿದ್ದಾರೆ. ಆಗ ಸೋಂಕಿನ ಸ್ಥಾನಪಲ್ಲಟ ಆಗಲಿದೆ.

ಬೆಂಗಳೂರಿನ ಮೂಲಕವೇ ಕೋವಿಡ್ ವೈರಸ್‌ ರಾಜ್ಯಕ್ಕೆ ಕಾಲಿಟ್ಟಿತ್ತು. ನಂತರ ನಾನಾ ಮಾರ್ಗದಲ್ಲಿ ಎಲ್ಲ ಕಡೆ ವಿಸ್ತರಿಸಿತ್ತು. ಈಗ ಮತ್ತೆ ಸಿಲಿಕಾನ್‌ಸಿಟಿಯಲ್ಲಿ ಸೋಂಕು “ಪೀಕ್‌’ನಲ್ಲಿದೆ. ಈ ವೇಳೆ ಜನ ಹಳ್ಳಿಗಳತ್ತ ಮುಖಮಾಡುತ್ತಿದ್ದಾರೆ. ಅವರಲ್ಲಿ ಲಕ್ಷಣಗಳು ಇಲ್ಲದಿದ್ದರೂ, ತಮಗರಿವಿಲ್ಲದೆ ಕೆಲವರು ವೈರಸ್‌ನೊಂದಿಗೆ ಊರುಗಳನ್ನು ಪ್ರವೇಶಿಸಿದರೂ ಅಚ್ಚರಿ ಇಲ್ಲ. ಇದು ಸರ್ಕಾರದ ಮೇಲೆ ಬೇರೆ ರೀತಿಯ ಪರಿಣಾಮ ಬೀರಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಸೇರಿದಂತೆ ನಾನಾ ಭಾಗಗಳಿಗೆ ಜನ ಗಂಟುಮೂಟೆ ಕಟ್ಟಿಕೊಂಡು ಪ್ರಯಾಣ ಬೆಳೆಸಿದ್ದಾರೆ. ಇದಕ್ಕೆ ಸ್ವತಃ ಸರ್ಕಾರ ಹೆಚ್ಚುವರಿ ಬಸ್‌ ಗಳನ್ನು ನಿಯೋಜಿಸಿ, ಪೂರಕ ವಾತಾವರಣ ಕಲ್ಪಿಸುತ್ತಿದೆ. ಬಹುತೇಕರು ಸೋಮವಾರ ಸಂಜೆಯಿಂದಲೇ ಕಾಲ್ಕಿàಳುತ್ತಿದ್ದಾರೆ. ಇದರಿಂದ ಪ್ರವೇಶ ದ್ವಾರಗಳಲ್ಲಿ ವಾಹನದಟ್ಟಣೆ ಉಂಟಾಗಿ, ಹೆಜ್ಜೆ- ಹೆಜ್ಜೆಗೂ ಜನ ಪರದಾಡುವಂತಾಯಿತು. ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಮತ್ತೆ ಹಳ್ಳಿಗಳ ನಿದ್ದೆಗೆಡಿಸಿದ ವಲಸೆ: ಮತ್ತೂಂ  ದೆಡೆ ಹಳ್ಳಿಗಳಲ್ಲಿ ಜನ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಹಿಂದೆ ರಾತ್ರೋರಾತ್ರಿ ಬೆಂಗಳೂರಿನಿಂದ ವಲಸೆ ಬಂದ ಜನರಲ್ಲಿ ಕೆಲವರು ವೈರಸ್‌ ಹೊತ್ತುತಂದಿದ್ದರು. ಆದರೂ ಊರಿನವರನ್ನು ಅಪ್ಪಿಕೊಂಡರು. ಇದು ಅತಿಯಾದಾಗ ಊರು ಪ್ರವೇಶದ್ವಾರಗಳಲ್ಲಿ ಬೇಲಿ ಹಾಕಿ, ಜಾಗರಣೆ ಮಾಡಿದ ಉದಾಹರಣೆಗಳೂ ಇವೆ. ಇದಾದ ನಂತರ ಮಹಾರಾಷ್ಟ್ರ, ಗೋವಾ ಸೇರಿದಂತೆ ನಾನಾ ಭಾಗಗಳಲ್ಲಿ ನೆಲೆಸಿದ್ದ ಜನ ವಾಪಸ್‌ ಊರುಗಳಿಗೆ ಬಂದಾಗಲೂ ಈ ಸಮಸ್ಯೆ ಎದುರಾಗಿತ್ತು. ತದನಂತರದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಆಶಾ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ, ಸೋಂಕು ತಡೆಗೆ ಕಸರತ್ತು ನಡೆಸಿದರು.

ಈಗ ಮತ್ತೂಂದು ಹಂತದ ವಲಸೆ ಶುರುವಾಗಿದ್ದು, ಸೋಂಕಿನ ಪ್ರಕರಣಗಳಲ್ಲಿ ಶೇ. 50ರಷ್ಟು ರಾಜಧಾನಿಯಲ್ಲೇ ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಜನ ಸ್ವಂತ ಊರುಗಳಿಗೆ ವಾಪಸ್ಸಾಗುತ್ತಿರುವುದು ಸಹಜವಾಗಿ ಹಳ್ಳಿಗರಲ್ಲಿ ಆತಂಕ ಸೃಷ್ಟಿಸಿದೆ. ಕೆಲವು ತಾಲೂಕುಗಳಲ್ಲಿ ಅಲ್ಲಿನತಹಶೀಲ್ದಾರರು ಕ್ವಾರಂಟೈನ್‌ ಅಥವಾ ಪರೀಕ್ಷೆ ಕಡ್ಡಾಯಗೊಳಿಸಿ ಆದೇಶವನ್ನೂ ಹೊರಡಿಸಿದ್ದಾರೆ. ಆದರೆ, ಕಡ್ಡಾಯವಾಗಿ ಜಾರಿಯಲ್ಲಿಲ್ಲ. ಸರ್ಕಾರ ಕೂಡ ಈ ಸಂಬಂಧ ಮಾರ್ಗಸೂಚಿ ಹೊರಡಿಸಿಲ್ಲ.

2 ದಿನದಲ್ಲಿ 1,600 ಹೆಚ್ಚುವರಿ ಬಸ್‌! :  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಸೋಮವಾರ ಮತ್ತು ಮಂಗಳವಾರ ತಲಾ 800 ಹೆಚ್ಚುವರಿ ಬಸ್‌ಗಳ ನಿಯೋಜನೆ ಮಾಡಿದ್ದು, ಅಗತ್ಯಬಿದ್ದರೆ, ಇನ್ನೂ 200 ಬಸ್‌ ಗಳ ಕಾರ್ಯಾಚರಣೆಗೆ ಸಿದ್ಧ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 1ರವರೆಗೆ 440 ಬಸ್‌ಗಳು ಕಾರ್ಯಾಚರಣೆ ಮಾಡಿದ್ದು, ಸುಮಾರು 11,466 ಪ್ರಯಾಣಿಕರು ಸಂಚರಿಸಿದ್ದಾರೆ. ಅಷ್ಟೇ ಅಲ್ಲ, 231 ಬಸ್‌ ಗಳಲ್ಲಿ ಆಸನಗಳು ಮುಂಗಡ ಬುಕಿಂಗ್‌ ಆಗಿವೆ. ಸಾಮಾಜಿಕ ಅಂತರ ಕಾಯ್ದುಕೊಂಡು, ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ, ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ.

ಬ್ಯಾಂಕ್‌- ಎಟಿಎಂ ಕೇಂದ್ರಕ್ಕೆ ಮುಗಿಬಿದ್ದ ಜನ  :  ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ ಪರಿಣಾಮ ಜನ ಸೋಮವಾರ ಎಟಿಎಂ ಕೇಂದ್ರಗಳಿಗೆ ಮುಗಿಬಿದ್ದರು. ಮಂಗಳವಾರ ರಾತ್ರಿ 8ರಿಂದ ಜುಲೈ 22ರ ಬೆಳಗ್ಗೆ 5ರವರೆಗೆ ಲಾಕ್‌ಡೌನ್‌ ಘೋಷಣೆಯಾದ ಬೆನ್ನಲ್ಲೇ ಜನ ಬ್ಯಾಂಕಿಂಗ್‌ ವ್ಯವಹಾರಕ್ಕಾಗಿ ಬ್ಯಾಂಕ್‌ಗಳು ಹಾಗೂ ಹಣ ಡ್ರಾ ಮಾಡಲು ಎಟಿಎಂ ಕೇಂದ್ರಗಳ ಮುಂದೆ “ಕ್ಯೂ’ ನಿಂತಿರುವುದು ಸರ್ವೆಸಾಮಾನ್ಯವಾಗಿತ್ತು. ಹಲವು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಘೋಷಣೆಯಾಗುವ ನಿರೀಕ್ಷೆಯಲ್ಲಿ ರಾಜ್ಯದ ಇತರೆಡೆಯೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕ್‌ಗಳತ್ತ ಮುಖ ಮಾಡಿದ್ದರು. ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಆಕ್ಷೇಪವೂ ವ್ಯಕ್ತವಾಯಿತು. ಎರಡನೇ ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಕಾರಣಕ್ಕೆ ಹಲವು ಎಟಿಎಂ ಕೇಂದ್ರಗಳಲ್ಲಿ ಹಣ ಖಾಲಿಯಾಗಿದ್ದರಿಂದ ಸೋಮವಾರ ಬೆಳಗ್ಗೆ ಹಣ ಪಡೆಯಲಾಗದೆ ಪರದಾಡುವಂತಾಗಿತ್ತು.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.