ಸಂಕಷ್ಟದಲ್ಲಿದ್ದವರ ನೆರವಿಗಾಗಿ ಯೋಜನೆ ಜಾರಿ


Team Udayavani, Jul 14, 2020, 11:18 AM IST

ಸಂಕಷ್ಟದಲ್ಲಿದ್ದವರ ನೆರವಿಗಾಗಿ ಯೋಜನೆ ಜಾರಿ

ಮಂಡ್ಯ/ಮದ್ದೂರು: ಭಾರತದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗುವ ಉದ್ದೇಶದಿಂದ ಸಮರೋಪಾದಿಯಲ್ಲಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಆತ್ಮನಿರ್ಭರ ಯೋಜನೆ ಜಾರಿಗೊಳಿಸಿದ್ದು, ಶಾಸಕರು ಹಾಗೂ ಜನಪ್ರತಿನಿಧಿಗಳು ಅರ್ಹ ಫ‌ಲಾನುಭಗಳಿಗೆ ತಲುಪಿಸಲು ಸಹಕಾರ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಡಾ. ಸಿದ್ದರಾಮಯ್ಯ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾವಲಂಬಿ ಭಾರತಕ್ಕಾಗಿ ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ ಅತ್ಯಗತ್ಯ. ದೇಶದಲ್ಲಿ ಹಿಂದೆಂದೂ ಸೃಷ್ಟಿಯಾಗದ ಪರಿಸ್ಥಿತಿ ಹಿನ್ನೆಲೆಯಲ್ಲಿ 2020-21ರ ಅವಧಿಯಲ್ಲಿ ರಾಜ್ಯಗಳ ಸಾಲದ ಮಿತಿಯನ್ನು ಶೇ.3ರಿಂದ 5ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ರಾಜ್ಯಗಳಿಗೆ 4.28 ಲಕ್ಷ ಕೋಟಿ ರೂ. ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸಲಿದೆ ಎಂದು ಹೇಳಿದರು.

ಮೂಲ ಸೌಕರ್ಯಕ್ಕಾಗಿ ಹಣ ಬಿಡುಗಡೆ: 9ರಿಂದ 10 ಕೋಟಿ ವಲಸೆ ಕಾರ್ಮಿಕರಿದ್ದು, ಅವರ ಮೂಲ ಸೌಕರ್ಯಕ್ಕಾಗಿ 610 ಕೋಟಿ ಹಣವನ್ನು ಪ್ರಥಮ ಹಂತದಲ್ಲಿ ಬಿಡುಗಡೆ ಮಾಡಿದೆ. 2 ತಿಂಗಳ ಕಾಲ ಅಕ್ಕಿ, ಬೇಳೆ ವಿತರಿಸಲಾಗಿದ್ದು, ಇದನ್ನು ನವೆಂಬರ್‌ ವರೆಗೂ 80 ಕೋಟಿ ಜನರಿಗೆ ವಿತರಿಸಲು ನಿರ್ಧರಿಸಲಾಗಿದೆ. ದೇಶದ ಶೇ.75ರಷ್ಟು ಜನತೆಗೆ ಈ ಯೋಜನೆ ಸಿಗಲಿದೆ. ಎಂಎಸ್‌ ಎಂಇಗಳ ಪುನಶ್ಚೇತನಕ್ಕಾಗಿ 5ರಿಂದ 100 ಕೋಟಿ ಸಾಲ ಸೌಲಭ್ಯದ ಮಿತಿ ಮಾಡಲಾಗಿದೆ. ಇದಕ್ಕಾಗಿ 11.29 ಸಾವಿರ ಕೋಟಿ ಮೀಸಲಿಡಲಾಗಿದೆ. 65 ಲಕ್ಷ ಯೂನಿಟ್‌ಗಳು ದೇಶದಲ್ಲಿವೆ. ಎಲ್ಲರಿಗೂ ವಸತಿ ಕಲ್ಪಿಸುವ ಉದ್ದೇಶದಿಂದ 3.20 ಲಕ್ಷ ಕೋಟಿ ಯೋಜನೆ ಘೋಷಿಸಲಾಗಿದೆ. ಬ್ಯಾಂಕ್‌ಗಳಿಗೆ 1 ಕೋಟಿ ರೂ.ವರೆಗೆ ಗ್ಯಾರಂಟಿ ನೀಡಬೇಕಾಗಿಲ್ಲ. ಈ ಯೋಜನೆಯಲ್ಲಿ 3.26 ಲಕ್ಷ ಕೋಟಿ ಹಣವನ್ನು 75 ಸಾವಿರ ಯೂನಿಟ್‌ಗೆ ವಿತರಿಸಲು ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ ಎಂದರು.

ಕೇಂದ್ರ ಸರ್ಕಾರಿ ನೌಕರರಿಗೆ ಶೇ.24ರಷ್ಟು ಕೊಡುಗೆ ನೀಡಲಾಗಿದೆ. ದೇಶದ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧನೆಗೆ ಶೇ.74ರಷ್ಟು ಹೆಚ್ಚಳ ಮಾಡಲಾಗಿದೆ. ಸಣ್ಣಪುಟ್ಟ ಬ್ಯಾಂಕ್‌ಗಳು, ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳ ಪುನಶ್ಚೇತನಕ್ಕೆ 30 ಸಾವಿರ ಕೋಟಿ ನೀಡಲಾಗಿದೆ ಎಂದರು.

ವಿದ್ಯುತ್‌ ಕ್ಷೇತ್ರದಲ್ಲಿ ಕ್ರಾಂತಿ: ವಿದ್ಯುತ್‌ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಉತ್ತೇಜನ ನೀಡಲಾಗಿದೆ. ವಿದ್ಯುತ್‌ ವಿತರಣಾ ಕಂಪನಿಗಳಿಗೆ 90 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಏಷ್ಯಾದಲ್ಲೇ ಮೊದಲ ಬಾರಿಗೆ 700 ಎಕರೆ ಪ್ರದೇಶದಲ್ಲಿ 4500 ಕೋಟಿ ರೂ. ವೆಚ್ಚದಲ್ಲಿ ದೊಡ್ಡ ಪ್ರಮಾಣ ಹೈಡ್ರೋ ಥರ್ಮಲ್‌ ಘಟಕ ಸ್ಥಾಪನೆಗೆ ಚಾಲನೆ ನೀಡಿದ್ದು, 2023ಕ್ಕೆ ದೇಶ ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿ ಸಾಧಿಸಲಿದೆ ಎಂದರು.

ಕಿಸಾನ್‌ ಸಮ್ಮಾನ್‌ ಕಾರ್ಡ್‌ಗೆ 2 ಲಕ್ಷ ಕೋಟಿ ಸಾಲ ನೀಡಲು ನಿರ್ಧರಿಸಲಾಗಿದೆ. ಬೃಹತ್‌ ಕೈಗಾರಿಕೆಗೆ 14 ಲಕ್ಷ ಕೋಟಿ ಕಾಯ್ದಿರಿಸಲಾಗಿದೆ. ಕೋವಿಡ್‌-19 ಸಂಕಷ್ಟದ ಹಿನ್ನೆಲೆಯಲ್ಲಿ 6100 ಕೋಟಿ ರೂ.ಗಳನ್ನು ಕರ್ನಾಟಕಕ್ಕೆ ಅನುದಾನ ನೀಡಲಾಗಿದೆ. ನರೇಗಾ ಕೂಲಿ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಿದ್ದು, ಕೂಲಿ ಹಣವನ್ನು 180ರಿಂದ 225 ರೂ.ಗೆ ಏರಿಸಲಾಗಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ. ಜಯಕುಮಾರ್‌, ನಗರಸಭೆ ಸದಸ್ಯ ಎಂ.ಪಿ. ಅರುಣ್‌ಕುಮಾರ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.