ಮುದಗಲ್ಲ: ಮತ್ತಿಬ್ಬರಿಗೆ ಮಹಾಮಾರಿ ಸೋಂಕು
Team Udayavani, Jul 14, 2020, 2:31 PM IST
ಮುದಗಲ್ಲ: ಪಟ್ಟಣದ ಬೇಗಂಪುರ ಪೇಟೆಯ ಮೌಲಾಲಿ ದರ್ಗಾ ಹತ್ತಿರದ ಒಬ್ಬ ಯುವಕ (20) ಹಾಗೂ ಸರ್ಕಾರಿ ಆಸ್ಪತ್ರೆ ಪ್ರಯೋಗ ಶಾಲೆ ಸಿಬ್ಬಂದಿ (33) ಸೇರಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ರಾಯಚೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೇಗಂಪುರಪೇಟೆ ಸೋಂಕಿತ ಯುವಕನ ಪ್ರಾಥಮಿಕ 14 ಜನ ಸಂಪರ್ಕಿತರು, ದ್ವಿತೀಯ ಸಂಪರ್ಕಿತ 34 ಜನರನ್ನು ಹೋಂ ಕ್ವಾರಂಟೈನ್ನಲ್ಲಿರಿಸಲಾಗಿದೆ. ಯುವಕನ ಮನೆ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದ್ದು, ಪುರಸಭೆ ಸಿಬ್ಬಂದಿ ಸೋಂಕಿತನ ಮನೆ ಸುತ್ತಮುತ್ತ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ್ದಾರೆ. ಇನ್ನು ಮುದಗಲ್ಲ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಗಂಟಲು ದ್ರವವನ್ನು ಲಿಂಗಸುಗೂರ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿತ್ತು. ಜು.12ರಂದು ಸೋಂಕು ದೃಢಪಟ್ಟಿದೆ.
ತಾಲೂಕು ವೈದ್ಯರನ್ನು ಕೇಳಿ ಸರ್ಕಾರಿ ಆಸ್ಪತ್ರೆ ಸೀಲ್ಡೌನ್ ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ನರಸಿಂಹಮೂರ್ತಿ ತಿಳಿಸಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ನರಸಿಂಹಮೂರ್ತಿ, ಸರ್ಕಾರಿ ಆಸ್ಪತ್ರೆಯ ಡಾ| ಅನಂತಕುಮಾರ, ಡಾ| ರಾಘವಾಂಕ ಶರ್ಮಾ, ಡಾ| ಶಂಕರಾಚಾರ್ಯ, ಪಿಎಸ್ಐ ಡಾಕೇಶ ಯು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!