ಉಡುಪಿ ದ್ವಿತೀಯ ಪಿಯುಸಿ ಫಲಿತಾಂಶ: 6 ಪ್ರಮುಖ ರ್ಯಾಂಕ್, ವಿಜ್ಞಾನದಲ್ಲಿ ಅಭಿಜ್ಞಾ ಪ್ರಥಮ
Team Udayavani, Jul 14, 2020, 4:15 PM IST
ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ಈ ಬಾರಿಯೂ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಗಮನಾರ್ಹವಾಗಿ 6 ಪ್ರಮುಖ ರ್ಯಾಂಕ್ ಗಳನ್ನು ಜಿಲ್ಲೆಯ ವಿದ್ಯಾರ್ಥಿನಿಯರು ಪಡೆದುಕೊಂಡಿದ್ದು ಹೆಮ್ಮೆಯ ವಿಚಾರವಾಗಿದೆ.
ವಿದ್ಯೋದಯ ಪಪೂ ಕಾಲೇಜಿನ ಕಾಲೇಜಿನ ವಿದ್ಯಾರ್ಥಿನಿ ಅಭಿಜ್ಞಾ ರಾವ್ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ, ಇವರು ವಿಠ್ಠಲ್ ರಾವ್ ಮತ್ತು ಆಶಾ ರಾವ್ ಅವರ ಪುತ್ರಿಯಾಗಿದ್ದು ಪಿಸಿಎಂಸಿ ಹಾಗೂ ಸಂಸ್ಕೃತದಲ್ಲಿ 100 ಅಂಕ ಹಾಗೂ ಇಂಗ್ಲೀಷ್ ನಲ್ಲಿ 96 ಅಂಕ ಪಡೆದಿದ್ದಾರೆ.
ವಿದ್ಯೋದಯ ಪಪೂ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿನಿ, ಕರುಣಾಕರ್ ಮತ್ತು ಚಂದ್ರಿಕಾ ಅವರ ಪುತ್ರಿಯಾಗಿರುವ ಗ್ರೀಷ್ಮಾ ಕೆ. ವಿಜ್ಞಾನ ವಿಭಾಗದಲ್ಲಿ 593 ಅಂಕಗಳನ್ನು ಪಡೆದಿದ್ದು ರಾಜ್ಯದಲ್ಲಿ 4ನೇ ಸ್ಥಾನಿಯಾಗಿದ್ದಾರೆ.
ಮಹಾತ್ಮ ಗಾಂಧೀಜಿ ಮೆಮೋರಿಯಲ್ ಕಾಲೇಜು ಉಡುಪಿ, ಇಲ್ಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೇಧಾ ಎನ್ ಭಟ್ ಕೂಡ 593 ಅಂಕ ಪಡೆದು ರಾಜ್ಯದಲ್ಲಿ 4 ಸ್ಥಾನ ಗಳಿಸಿಕೊಂಡಿದ್ದಾರೆ. ಇವರು ನರಸಿಂಹ ಭಟ್ ಹಾಗೂ ಶಶಿಕಲಾ ಭಟ್ ಅವರ ಪುತ್ರಿ.
ವಿದ್ಯೋದಯ ಪಪೂ ಕಾಲೇಜಿನ ಪದ್ಮಿಕಾ ಕೆ ಶೆಟ್ಟಿ ಕೂಡ ವಾಣಿಜ್ಯ ವಿಭಾಗದಲ್ಲಿ 592 ಅಂಕ ಪಡೆದು 5ನೇ ಸ್ಥಾನ ಗಳಿಸಿ ಕೀರ್ತಿ ಪಡೆದಿದ್ದಾರೆ. ಇವರು ಕುಶಾಲ ಶೆಟ್ಟಿ ಮತ್ತು ನಿಶ್ಚಲ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸುಧೀರ್ ಕಾಮತ್ ಮತ್ತು ಗೀತಾ ಕಾಮತ್ ದಂಪತಿಯ ಪುತ್ರಿಯಾಗಿರುವ ರಿತಿಕಾ ಕಾಮತ್ 594 ಅಂಕ ಪಡೆದಿದ್ದಾರೆ. ಇವರು ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ.
ಶ್ರೀ ವೆಂಕಟರಮಣ ಪಿಯು ಕಾಲೇಜು ಕುಂದಾಪುರ, ಇಲ್ಲಿನ ವಿದ್ಯಾರ್ಥಿನಿ ಸ್ವಾತಿ ಪೈ ವಾಣಿಜ್ಯ ವಿಭಾಗದಲ್ಲಿ 594 ಅಂಕ ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ. ಇವರು ಶಿವಾನಂದ ಪೈ ಮತ್ತು ಶಿಲ್ಪ ಪೈ ದಂಪತಿಯ ಪುತ್ರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ