ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಗೆ ಕೋವಿಡ್ 19 ಸೋಂಕು ದೃಢ; 3 ಸಾವು
Team Udayavani, Jul 15, 2020, 6:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 91 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು 3 ಮಂದಿ ಮೃತಪಟ್ಟಿದ್ದಾರೆ.
ಇದೇ ಸಂದರ್ಭದಲ್ಲಿ ಒಟ್ಟು 47 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಅಸ್ತಮಾ, ಮಧುಮೇಹ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಹಾಸನ ಜಿಲ್ಲೆಯ ಸಕಲೇಶಪುರದ 65 ವಯಸ್ಸಿನ ಮಹಿಳೆ, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಉಡುಪಿ ಜಿಲ್ಲೆಯ ಕುಂದಾಪುರದ 55 ವರ್ಷದ ಪುರುಷ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ 70ರ ವೃದ್ಧೆ ಮೃತಪಟ್ಟವರು.
ಸೋಮವಾರ ವರದಿಯಾಗಿರುವ ಒಟ್ಟು 91 ಪ್ರಕರಣಗಳ ಪೈಕಿ 20 ಪ್ರಾಥಮಿಕ ಸಂಪರ್ಕ, 29 ಮಂದಿ ಇನ್ಫ್ಲೂಯೆನ್ಝಾ ಲೈಕ್ ಇಲ್ನೆಸ್ (ಐಎಲ್ಐ), ಐದು ಮಂದಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ (ಸಾರಿ) ಪ್ರಕರಣಗಳಾಗಿವೆ. ಸಂಪರ್ಕವೇ ಪತ್ತೆಯಾಗದ 35 ಮಂದಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
ವಿದೇಶದಿಂದ ಬಂದ ಒಬ್ಬರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಶಸ್ತ್ರಚಿಕಿತ್ಸೆ ನಡೆಸುವ ಮೊದಲು ನಡೆಸಿದ ಪರೀಕ್ಷೆಯಲ್ಲಿ ಒಬ್ಬರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. 35 ಮಂದಿ ಸೋಂಕಿತರ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ ಇಲ್ಲಿವರೆಗೆ 2452 ಮಂದಿಗೆ ಕೋವಿಡ್ 19 ಸೋಂಕು ಧೃಡಪಟ್ಟಿದ್ದು 985 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 1414 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರು: 2 ಪಾಸಿಟಿವ್
ತಾಲೂಕಿನಲ್ಲಿ ಮಂಗಳವಾರ 2 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ 70ರ ವೃದ್ಧ ಮತ್ತು ಪುತ್ತೂರು ನಗರಸಭಾ ವ್ಯಾಪ್ತಿಯ ಮೊಟ್ಟೆತ್ತಡ್ಕ ನಿವಾಸಿ 62 ವರ್ಷ ವಯಸ್ಸಿನ ವ್ಯಕ್ತಿ ಬಾಧಿತರು. ಇಬ್ಬರು ಕೂಡ ಜ್ವರದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಪರೀಕ್ಷೆಯಲ್ಲಿ ಸೋಂಕು ದೃಢವಾಗಿದೆ.
ಬಂಟ್ವಾಳ: 6 ಮಂದಿಗೆ ಪಾಸಿಟಿವ್
ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ 6 ಮಂದಿಗೆ ಕೋವಿಡ್ 19 ಸೋಂಕು ದೃಢ ಪಟ್ಟಿದ್ದು, ಬಿ.ಮೂಡದ 66 ವರ್ಷದ ಪುರುಷ, ತೆಂಕಕಜೆಕಾರಿನ 32 ವರ್ಷದ ಮಹಿಳೆ, ಬಂಟ್ವಾಳ ಕಸ್ಬಾದ 62 ವರ್ಷದ ಮಹಿಳೆ, ಸಿದ್ಧಕಟ್ಟೆಯ 29 ವರ್ಷದ ಯುವಕ, ನರಿಕೊಂಬಿನ 54 ವರ್ಷದ ಪುರುಷ ಹಾಗೂ ಕೊಡ್ಮಾಣ್ನ 70 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.
ಉಳ್ಳಾಲ: 14 ಮಂದಿಗೆ ಸೋಂಕು
ಉಳ್ಳಾಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಂಟು ವರ್ಷದ ಬಾಲಕ ಸೇರಿ ಸುಮಾರು 14 ಜನರಿಗೆ ಸೋಂಕು ತಗುಲಿದ್ದು, ಇವರಲ್ಲಿ 10 ಮಂದಿ ಉಳ್ಳಾಲ ನಗರಸಭಾ ವ್ಯಾಪ್ತಿಯವರಾಗಿದ್ದು, ಉಳಿದವರು ಮುನ್ನೂರು, ಕುಂಪಲ, ಕಿನ್ಯ ನಿವಾಸಿಗಳಾಗಿದ್ದಾರೆ.
ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಅರೆಕೆರೆಯ 20, 16, 53, 39, 18 ವರ್ಷದ ವ್ಯಕ್ತಿ ಮತ್ತು 23 ಮತ್ತು 35 ವರ್ಷದ ಮಹಿಳೆಯರಿಗೆ ಸೋಂಕು ತಗುಲಿದ್ದರೆ ಉಳ್ಳಾಲ ಕೋಟೆಪುರದ 14ರ ಬಾಲಕ, ಮಾಸ್ತಿಕಟ್ಟೆ ಅಝಾದ್ ನಗರದ 8ರ ಬಾಲಕ, 65ರ ಮಹಿಳೆ. ಮುನ್ನೂರು ಗ್ರಾಮದ 24ರ ಯುವತಿ ಪಂಡಿತ್ಹೌಸ್ನ 46ರ ಮಹಿಳೆ ಮತ್ತು ಕಿನ್ಯ ಗ್ರಾಮದ 22ರ ಯುವತಿ ಮತ್ತು ಸೋಮೇಶ್ವರ ಕುಂಪಲದ 20ರ ಯುವಕನಿಗೆ ಸೊಂಕು ತಗುಲಿದೆ.
ಕಾಪು: ಕುಟುಂಬದ 7 ಮಂದಿಗೆ ಪಾಸಿಟಿವ್
ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ಕುಟುಂಬದ ಏಳು ಮಂದಿ, ಪೊಲೀಸ್ ಕಾನ್ಸ್ಟೆಬಲ್ ಸಹಿತ 9 ಮಂದಿಗೆ ಕೋವಿಡ್ 19 ಪಾಸಿಟಿವ್ ಧೃಢಪಟ್ಟಿದೆ. ಕಾಪು ಠಾಣೆಗೆ ಸಮೀಪದ ಹೊಟೇಲ್ವೊಂದರಲ್ಲಿ ಕ್ವಾರಂಟೈನ್ನಲ್ಲಿದ್ದ ಕಾನ್ಸ್ಟೆಬಲ್ ಇದೀಗ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಂಜೆ ನಿವಾಸಿ, ಮಣಿಪಾಲ ಖಾಸಗಿ ಆಸ್ಪತ್ರೆಯ ಸಿಬಂದಿಯಲ್ಲೂ ಪಾಸಿಟಿವ್ ಕಂಡು ಬಂದಿದೆ.
ವಧುವಿನ ಮನೆಯವರಿಗೂ ಪಾಸಿಟಿವ್
ಮಲ್ಲಾರು ಕೊಂಬಗುಡ್ಡೆಯ ಒಂದೇ ಮನೆಯ ಏಳು ಮಂದಿಯಲ್ಲಿ ಪಾಸಿಟಿವ್ ಕಂಡು ಬಂದಿದೆ. ಹೊಸನಗರಕ್ಕೆ ಮದುವೆ ಮಾಡಿಕೊಡಲಾಗಿದ್ದ ವಧುವಿಗೆ ಜು. 6ರಂದು ದೃಢಪಟ್ಟಿದ್ದು, ಆ ಬಳಿಕ ಆಕೆಯ ಮೆಹಂದಿ ಕಾರ್ಯಕ್ರಮ ನಡೆದ ಮನೆಯವರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದ್ದು ಎಲ್ಲರ ವರದಿ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ