ಪಿಯುಸಿ ಫ‌ಲಿತಾಂಶ ಗುಣಾತ್ಮಕ ಮನಸ್ಥಿತಿ ಮುಖ್ಯ


Team Udayavani, Jul 15, 2020, 6:10 AM IST

ಪಿಯುಸಿ ಫ‌ಲಿತಾಂಶ ಗುಣಾತ್ಮಕ ಮನಸ್ಥಿತಿ ಮುಖ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜುಲೈ 18ರ ಹೊತ್ತಿಗೆ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳ ಫ‌ಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ.

ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿರುವ ಪಿಯುಸಿ ಫ‌ಲಿತಾಂಶವು ಈ ಬಾರಿ ಕೋವಿಡ್‌-19 ಬಿಕ್ಕಟ್ಟಿನ ನಡುವೆಯೇ ಬಂದಿದೆ.

ಗಮನಾರ್ಹ ಸಂಗತಿಯೆಂದರೆ, ಕಳೆದ ಬಾರಿಗಿಂತ ಈ ವರ್ಷ ಫ‌ಲಿತಾಂಶದಲ್ಲಿ ಹೆಚ್ಚಳ ಕಂಡುಬಂದಿರುವುದು. ಮತ್ತೆ ಎಂದಿನಂತೆ ಬಾಲಕಿಯರೇ ಪಿಯುಸಿಯಲ್ಲಿ ಮೇಲುಗೈ ಸಾಧಿಸಿದ್ದಾರೆ.

ಉಡುಪಿ ಈ ಬಾರಿಯೂ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಮತ್ತು ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಅದರಲ್ಲೂ ಗಮನಾರ್ಹವಾಗಿ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರು ಆರು ಪ್ರಮುಖ ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆನ್ನುವುದು ಶ್ಲಾಘನೀಯ ವಿಚಾರ.

ಇನ್ನೊಂದೆಡೆ ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಕೊನೆಯ ಮೂರು ಸ್ಥಾನಗಳಲ್ಲಿರುವುದು ಬೇಸರದ ವಿಷಯ. ಅಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಾದ ಅಗತ್ಯವನ್ನು ಇದು ಸಾರುತ್ತಿದೆ.

ಇದೇ ವೇಳೆಯಲ್ಲೇ, ಅನೇಕ ವಿದ್ಯಾರ್ಥಿಗಳು ಯಾವುದೋ ಕಾರಣಕ್ಕೆ ನಪಾಸಾಗಿದ್ದಾರೆ ಅಥವಾ ಅವರು ನಿರೀಕ್ಷಿಸಿದಷ್ಟು ಫ‌ಲಿತಾಂಶ ಸಿಗದಿರಬಹುದು. ಆದರೆ, ಈ ವಿಚಾರದಲ್ಲಿ ಅಧೀರರಾಗಬೇಕಾದ ಅಗತ್ಯವಿಲ್ಲ. ಪರೀಕ್ಷೆಯಲ್ಲಿ ನಪಾಸಾದಾಕ್ಷಣ ಎಲ್ಲಾ ಮುಗಿದುಹೋಯಿತು ಎಂದು ಚಿಂತಿಸುವುದರಲ್ಲಿ ಅರ್ಥವೇ ಇಲ್ಲ. ಮತ್ತೆ ಮರುಪರೀಕ್ಷೆಯ ಅವಕಾಶವಿದ್ದೇ ಇರುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ನೆನಪಿಡಬೇಕಾದ ಸಂಗತಿಯೆಂದರೆ, ಬದುಕು ಎಲ್ಲರಿಗೂ ಬೆಳೆಯುವ, ಬೆಳಗುವ ಅವಕಾಶಗಳನ್ನು ಖಂಡಿತ ಕಲ್ಪಿಸುತ್ತದೆ. ನಪಾಸಾದಾಕ್ಷಣ ಏನೋ ದೊಡ್ಡ ತಪ್ಪಾಗಿಬಿಟ್ಟಿದೆ ಎಂಬ ಭಾವನೆ, ಕೀಳರಿಮೆ ಖಂಡಿತ ಬೇಡ. ಜೀವನದಲ್ಲಿ ಎದುರಾಗುವ ಅಡ್ಡಿಗಳು ನಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿಸುವುದಕ್ಕೇ ಬಂದಿರುತ್ತವೆ ಎನ್ನುವುದನ್ನು ಮರೆಯದಿರಿ.

ನಿಮ್ಮೆಲ್ಲರ ಮುಂದೆ ಮತ್ತೆ ಅವಕಾಶವಿದ್ದು, ಈ ಬಾರಿ ಗುಣಾತ್ಮಕ ಮನಃಸ್ಥಿತಿಯೊಂದಿಗೆ ಸಜ್ಜಾಗಿ. ಆಪ್ತರೊಂದಿಗೆ ಮಾತನಾಡಿ, ಮನಸ್ಸನ್ನು ಹಗುರಾಗಿಸಿಕೊಳ್ಳಿ. ಪೋಷಕರೂ ಸಹ ತಮ್ಮ ಮಕ್ಕಳ ಮೇಲೆ ಈ ಫ‌ಲಿತಾಂಶಗಳಿಂದಾಗಿ ಋಣಾತ್ಮಕ ಪರಿಣಾಮ ಉಂಟಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ.

ಇನ್ನು, ಫ‌ಲಿತಾಂಶ ಬಂದಾಯಿತು, ಮುಂದೇನು? ಎಂದು ಕೆಲವು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸುತ್ತಿರುವ ವರದಿಗಳು ಬರುತ್ತಿವೆ. ಕೋವಿಡ್‌-19 ಬಿಕ್ಕಟ್ಟು ಮುಂದುವರಿದಿರುವುದರಿಂದ, ಅವರಲ್ಲಿ ಇಂಥ ಪ್ರಶ್ನೆ ಎದುರಾಗಿರುವುದು ಸಹಜವೇ.

ಆದರೆ, ಶಿಕ್ಷಣ ಇಲಾಖೆ ಆ ಬಗ್ಗೆ ಚಿಂತನೆ ನಡೆಸುತ್ತಿರುವ ಕಾರಣ, ನಿಮಗೆ ಆ ಬಗ್ಗೆ ಅನಗತ್ಯ ಚಿಂತೆ ಬೇಡ. ಎಲ್ಲವೂ ಸರಿಯಾಗುತ್ತದೆ. ಈ ಬಗ್ಗೆ ಹೆಚ್ಚು ನಿಮ್ಮಲ್ಲಿರಲಿ.

ಮುಂದಿನ ಪಯಣಕ್ಕೆ ಎಲ್ಲರಿಗೂ ಆಲ್‌ ದಿ ಬೆಸ್ಟ್‌!

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.