ಗಮನ ಸೆಳೆಯಲು ಆನ್ಲೈನ್ ಚಳವಳಿ
Team Udayavani, Jul 15, 2020, 8:34 AM IST
ದೇವನಹಳ್ಳಿ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಜಯಣ್ಣ ನೇತೃತ್ವದಲ್ಲಿ ಸರಕಾರದ ಗಮನ ಸೆಳೆಯಲು ಆನ್ಲೈನ್ ಭಿತ್ತಿಪತ್ರ ಚಳವಳಿ ನಡೆಸಿದರು.
ಪ್ರಜಾಸತ್ತಾತ್ಮಕ ಯುವಜನ ಸಂಘಟನೆ ಜಿಲ್ಲಾ ವ್ಯವಸ್ಥಾಪಕಿ ರಮ್ಯಾ ಮಾತನಾಡಿ, ಮತ್ತೂಬ್ಬ ಮಹಿಳಾ ಉಪನ್ಯಾಸಕಿ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಲವರು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಸಾಕಷ್ಟು ಜನ ಶಿಕ್ಷಕರು ಮತ್ತು ಉಪನ್ಯಾಸಕರು ಹೇಳಲಾಗದ ನೋವು ಒಳಗೊಳಗೆ ಅನುಭವಿಸುತ್ತ, ಮಾನಸಿಕವಾಗಿ ಜರ್ಜರಿತವಾಗಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ಕುಗ್ಗಿಹೋಗಿದ್ದಾರೆ. ಕಳೆದ 3-4 ತಿಂಗಳಿನಿಂದ ಸಂಸಾರ ನಡೆಸಲಾಗದೇ ಎಷ್ಟೋ ಜನರು ಅನಿವಾರ್ಯವಾಗಿ ಬೇರೆ ಕೆಲಸ ಹುಡುಕಿಕೊಂಡಿದ್ದಾರೆ. ಎಷ್ಟೇ ಕಷ್ಟ ಬಂದರೂ ನುಂಗಿಕೊಂಡು ತಮ್ಮ ಸೇವೆ ಒದಗಿಸಿದ್ದಾರೆ. ನೆಟ್, ಸೆಟ್, ಪಿಎಚ್ಡಿ ಇನ್ನಿತರ ಎಲ್ಲ ಅರ್ಹತೆ ಪಡೆದರೂ ಈಗ ಬೀದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಬಂದೊದಗಿದೆ. ಉನ್ನತ ವ್ಯಾಸಂಗ ಮಾಡಿಕೊಂಡು ಉದ್ಯೋಗ ಖಾತ್ರಿ ಕೆಲಸ, ತರಕಾರಿ ಮಾರಾಟ ಮಾಡುತ್ತಿದ್ದಾರೆ ಎಂಬ ವರದಿಗಳು ಪ್ರಕಟವಾಗಿವೆ.
ಈ ಎಲ್ಲ ಬೆಳವಣಿಗೆಗಳು ಬಹಳ ನೋವುಂಟು ಮಾಡುತ್ತವೆ. ರಾಜ್ಯ ಸರ್ಕಾರ ಈ ಕೂಡಲೇ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸ ಕರು ಹಾಗೂ ಶಿಕ್ಷಕರ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಜಯಣ್ಣ ಮಾತನಾಡಿ, ಸರಕಾರ, ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸರಕಾರ ಬಾಕಿ ಉಳಿಸಿಕೊಂಡಿರುವ ವೇತನ ಹಾಗೂ “ವಿಶೇಷ ಪರಿಹಾರ ಪ್ಯಾಕೇಜ್’ ಶೀಘ್ರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ