ಕೋವಿಡ್ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ, ನಮ್ಮನ್ನು ದೇವರೇ ಕಾಪಾಡಬೇಕು: ರಾಮುಲು
Team Udayavani, Jul 15, 2020, 1:26 PM IST
ಚಿತ್ರದುರ್ಗ: ಕೋವಿಡ್-19 ಸೋಂಕು ವಿಚಾರದಲ್ಲಿ ಸಚಿವರ ನಿರ್ಲಕ್ಷ್ಯ ಎನ್ನುವುದು ಸರಿಯಲ್ಲ. ಕೋವಿಡ್ ನಿಯಂತ್ರಣ ಯಾರ ಕೈಲಿದೆ ಹೇಳಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದರು.
ಮುಂದಿನ ಎರಡು ತಿಂಗಳಲ್ಲಿ ಕೋವಿಡ್ ಸೋಂಕು ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನ ಇಲ್ಲ. ನಮ್ಮನ್ನು ದೇವರೇ ಕಾಪಾಡಬೇಕು. ಇಲ್ಲವೇ ಜನರೇ ಜಾಗೃತರಾಗಬೇಕು ಎಂದರು.
ಕಾಂಗ್ರೆಸ್ ನಾಯಕರು ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ನಾವೇನಾದರು ತಪ್ಪು ಮಾಡಿದ್ದರೆ ಶಿಕ್ಷೆ, ಪ್ರಾಯಶ್ಚಿತ್ತಕ್ಕೆ ಸಿದ್ಧ ಎಂದು ರಾಮುಲು ಹೇಳಿದರು.
ಇಂತಹ ಸಂದಿಗ್ಧ ಸಮಯದಲ್ಲಿ ಕಾಂಗ್ರೆಸ್ ನಾಯಕರಲ್ಲಿ ನನ್ನ ಮನವಿ. ಯಾವುದೇ ಮಾತಾಡುವ ವೇಳೆ ಎಲ್ಲವನ್ನೂ ಬಿಗಿಯಿಡಿದು ಮಾತಾಡಬೇಕು ಎಂದು ತಿರುಗೇಟು ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಲೋಪ ಆದಲ್ಲಿ ಕ್ರಿಮಿನಲ್ ಕೇಸ್ ಹಾಕುತ್ತೇವೆ. ಎರಡು ಮೂರು ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೆಟ್ಟ ಹೆಸರು ಬರುತ್ತದೆ. ಎರಡು ಮೂರು ಆಸ್ಪತ್ರೆಗಳನ್ನು ಲಾಕ್ ಡೌನ್ ಮಾಡಿ ಚುರುಕು ಮುಟ್ಟಿಸುತ್ತೇವೆ ಎಂದರು.
30 ನಿಮಿಷದಲ್ಲಿ ಕೋವಿಡ್ ಟೆಸ್ಟ್ ಮಾಡುವ ರ್ಯಾಪಿಡ್ ಆ್ಯಂಟಿಜನ್ 2 ಲಕ್ಷ ಕಿಟ್ ಆರ್ಡರ್ ಮಾಡಿದ್ದು ಈಗಾಗಲೇ 1 ಲಕ್ಷ ಕಿಟ್ ಬಂದಿವೆ ಎಂದು ಮಾಹಿತಿ ನೀಡಿದರು.
ಆಯುಷ್ ಇಲಾಖೆ ವೈದ್ಯರ ಬೇಡಿಕೆ ಈಡೇರಿಕೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಈ ಸಂದರ್ಭದಲ್ಲಿ ಯಾರೂ ಮುಷ್ಕರ ಮಾಡಬಾರದು. ಎಂಬಿಬಿಎಸ್ ವೈದ್ಯರಂತೆ ಆಯುಷ್ ವೈದ್ಯರಿಗೂ ವೇತನ ಹೆಚ್ಚಳಕ್ಕೆ ಕ್ರಮ ವಹಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ