ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರ ಅಪರಿಚಿತರಿಂದ ಅಪಹರಿಲ್ಪಟ್ಟ ಬಿಜೆಪಿ ಮುಖಂಡನ ರಕ್ಷಣೆ
ಮೆಹ್ರಾ ಅವರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ತಿಳಿಸಿತ್ತು.
Team Udayavani, Jul 15, 2020, 10:48 PM IST
ಜಮ್ಮು-ಕಾಶ್ಮೀರ:ಅಪರಿಚಿತ ವ್ಯಕ್ತಿಗಳಿಂದ ಬುಧವಾರ ಅಪಹರಿಸಲ್ಪಟ್ಟಿದ್ದ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಬಿಜೆಪಿ ಮುಖಂಡ ಮೆಹ್ರಾಜುದ್ದಿನ್ ಮಲ್ಲಾ ಅವರನ್ನು ಜಮ್ಮು-ಕಾಶ್ಮೀರ ಪೊಲೀಸರು ರಕ್ಷಿಸಿರುವುದಾಗಿ ವರದಿ ತಿಳಿಸಿದೆ.
ವರದಿಯ ಪ್ರಕಾರ, ಮೆಹ್ರಾಜಿದ್ದಿನ್ ಅವರನ್ನು ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ ಎಂದು ವರದಿ ವಿವರಿಸಿದೆ.
ಏನಿದು ಘಟನೆ:
ಜಮ್ಮು-ಕಾಶ್ಮೀರ್ ಸೋಪೋರ್ ಜಿಲ್ಲೆಯ ವಾಟರ್ ಗಾಮ್ ಮುನ್ಸಿಪಲ್ ಸಮಿತಿಯ ಉಪಾಧ್ಯಕ್ಷ, ಬಿಜೆಪಿ ಮುಖಂಡ ಮೆಹ್ರಾಜುದೀನ್ ಮಲ್ಲಾ ಅವರನ್ನು ಬುಧವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದು, ಮೆಹ್ರಾ ಅವರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ತಿಳಿಸಿತ್ತು.
ಮೆಹ್ರಾಜುದೀನ್ ಅಪಹರಣವನ್ನು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದು, ಮೆಹ್ರಾ ಅವರು ಮನೆ ಸಮೀಪದ ರಸ್ತೆ ಬಳಿ ನಿಂತಿದ್ದಾಗ ಬೆಳಗ್ಗೆ 8-30ರ ಹೊತ್ತಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆಗಮಿಸಿ ಬಲವಂತವಾಗಿ ಎಳೆದೊಯ್ದಿದ್ದು, ಈವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು.
ಮೆಹ್ರಾ ಅವರನ್ನು ಕಿಡ್ನಾಪ್ ಮಾಡಿರುವ ಆರೋಪಿಗಳ ಬಂಧನಕ್ಕಾಗಿ ಭದ್ರತಾ ಪಡೆಯ ನೆರವು ಕೋರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ನಾಪತ್ತೆಯಾದ ಮೆಹ್ರಾ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!