ರಾಜಸ್ಥಾನ ಬಿಕ್ಕಟ್ಟು: ಬದಲಾಗಲಿ ಮನಸ್ಥಿತಿ


Team Udayavani, Jul 16, 2020, 7:56 AM IST

ರಾಜಸ್ಥಾನ ಬಿಕ್ಕಟ್ಟು: ಬದಲಾಗಲಿ ಮನಸ್ಥಿತಿ

ಕೋವಿಡ್‌-19 ಸಮಯದಲ್ಲಿ ರಾಜಸ್ಥಾನ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ನಿಜಕ್ಕೂ ಬೇಸರ ಹುಟ್ಟಿಸುವಂಥದ್ದು. ಅಶೋಕ್‌ ಗೆಹಲೋಟ್ ‌ಮತ್ತವರ ತಂಡ ಸಚಿನ್‌ ಪೈಲಟ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ, ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲು ಸಫ‌ಲವಾಗಿದೆ. 2014ರಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೇರುಮಟ್ಟದಲ್ಲಿ ಗಟ್ಟಿಯಾಗಿಸಿದ ಸಚಿನ್‌ ಪೈಲಟ್‌, 2018ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಲು ಪ್ರಮುಖವಾಗಿ ಕಾರಣವಾದವರು.

ಆ ಸಮಯದಲ್ಲೇ ಅವರನ್ನು ಮುಖ್ಯಮಂತ್ರಿಯಾಗಿಸಬೇಕು ಎಂಬ ಧ್ವನಿಗಳು ಜೋರಾಗಿದ್ದವು. ಆದರೆ ಸಿಎಂ ಕುರ್ಚಿ ಗೆಹಲೋಟ್‌ ಅವರ ಪಾಲಾಯಿತು. ಈಗ ಗೆಹಲೋಟ್‌ ಅವರಿಗೆ ಪಕ್ಷದಲ್ಲಿ ಪ್ರಬಲ ಪ್ರತಿಸ್ಪರ್ಧಿಯಾಗಿರುವವರೆಂದರೆ ಸಚಿನ್‌ಪೈಲಟ್‌ ಮಾತ್ರ, ಹೀಗಾಗಿ ಏನಕೇನ ಅವರನ್ನು ಪಕ್ಷದಿಂದ ದೂರಮಾಡಬೇಕೆಂಬ ಇರಾದೆ ಮುಖ್ಯಮಂತ್ರಿಗಳಿಗಿದೆ ಎಂಬ ವಾದವೂ ಇದೆ.  ಇದೇ ವೇಳೆಯಲ್ಲೇ ಸಚಿನ್‌ ಪೈಲಟ್‌ ತಾವು ಮಾತ್ರ ಕಾಂಗ್ರೆಸ್‌ ಬಿಡುವುದಿಲ್ಲವೆಂದು ಹೇಳಿದ್ದಾರೆ. ಸಚಿನ್‌ ನಿಜಕ್ಕೂ ಪಕ್ಷದಲ್ಲೇ ಇರುತ್ತಾರಾ, ಬಿಜೆಪಿ ಸೇರುತ್ತಾರಾ ಅಥವಾ ಸ್ವಂತ ಪಕ್ಷ ಸ್ಥಾಪಿಸುತ್ತಾರಾ ಎನ್ನುವುದು ಬೇರೆ ವಿಷಯ. ಆದರೆ ಅದೇಕೆ ಕಾಂಗ್ರೆಸ್‌ ತನ್ನ ಕಾಲಿಗೆ ತಾನೇ ಕೊಡಲಿ ಪೆಟ್ಟು ಕೊಟ್ಟುಕೊಳ್ಳುತ್ತಿದೆ ಎನ್ನುವುದು ಮಾತ್ರ ಅಚ್ಚರಿ ಹುಟ್ಟಿಸುವ ಸಂಗತಿ. ಮಧ್ಯಪ್ರದೇಶದಲ್ಲಿ ಕಮಲ್‌ನಾಥ್‌ ಬೆನ್ನಿಗೆ ನಿಂತ ಕಾಂಗ್ರೆಸ್‌ ಹೈಕಮಾಂಡ್‌, ಪಕ್ಷ ಅಧಿಕಾರ ಕ್ಕೇರಲು ಹಗಲಿರುಳು ಶ್ರಮಿಸಿದ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾರನ್ನು ದೂರ ಮಾಡಿಕೊಂಡಿತು.

ಈಗ ರಾಜಸ್ಥಾನದಲ್ಲಿ ಗೆಹಲೋಟ್‌ ಅವರ ಮಾತನ್ನಷ್ಟೇ ಕೇಳಿಸಿಕೊಳ್ಳುತ್ತಾ ಪೈಲಟ್‌ ಅವರನ್ನು ಅವಗಣಿಸುತ್ತಿದೆ. ಎಲ್ಲವೂ ತಹಬದಿಗೆ ಬರಬಹುದು ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರಾದರೂ ಪರಿಸ್ಥಿತಿ ಯಾವಾಗ ತಿರುವುಮುರುವಾಗುತ್ತದೋ ತಿಳಿಯದು. ಕಾಂಗ್ರೆಸ್‌ನ ಈ ತಪ್ಪುಹೆಜ್ಜೆಗಳ ಬಗ್ಗೆ ಈಗ ಖುದ್ದು ಆ ಪಕ್ಷದ ಕೆಲವು ಹಿರಿಯ ನಾಯಕರೂ ಸಹ ಎಚ್ಚರಿಕೆ ನೀಡಲಾರಂಭಿಸಿದ್ದಾರೆ. ದೇಶಾದ್ಯಂತ ಕಾಂಗ್ರೆಸ್‌ ಪಕ್ಷದ ಸ್ಥಿತಿ ಹೇಳಿಕೊಳ್ಳುವಂತೇನೂ ಇಲ್ಲ. ಯಾವ ರಾಜ್ಯಗಳಲ್ಲಿ ಆ ಪಕ್ಷ ಬಹಳ ಸಮಯದಿಂದ ಅಧಿಕಾರದಿಂದ ದೂರವಿದೆಯೋ ಅಲ್ಲಿ ಅದರ ಪರಿಸ್ಥಿತಿ ಹದಗೆಟ್ಟಿದೆ. ಇನ್ನು ಯಾವ ರಾಜ್ಯದಲ್ಲಿ ಅದು ಯಾವುದೇ ರೀತಿಯಲ್ಲಿ ಅಧಿಕಾರದಲ್ಲಿ ದೆಯೋ ಅಲ್ಲಿಯೂ ಅದಕ್ಕೆ ಸಂಕಷ್ಟವಿದೆ. ಇಂಥ ರಾಜ್ಯಗಳಲ್ಲಿ ಸರಕಾರವನ್ನು ಉಳಿಸುವುದು, ನಾಯಕರನ್ನು ಹಿಡಿದಿಡುವುದೇ ಅದಕ್ಕೆ ಬೃಹತ್‌ ಸವಾಲಾಗಿಬಿಟ್ಟಿದೆ. ಕಾಂಗ್ರೆಸ್‌ ನಾಯಕರ ರಾಜೀನಾಮೆಗಳು ಈಗಾಗಲೇ ಅನೇಕ ರಾಜ್ಯಗಳಲ್ಲಿ ರಾಜ್ಯಸಭೆ ಚುನಾವಣೆಯ ಸಮೀಕರಣವನ್ನೇ ಹಾಳು ಮಾಡಿದ್ದನ್ನು ನೋಡಿದ್ದೇವೆ.

2014ರಿಂದ ದೇಶದಲ್ಲಿ ರಾಜಕೀಯ ಶಕ್ತಿ ಸಮೀಕರಣದ ಸ್ವರೂಪವೇ ಬದಲಾಗಿದೆ. ಇವಿಷ್ಟೂ ವರ್ಷಗಳಲ್ಲಿ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳಲ್ಲಿ ಯುವ ನಾಯಕತ್ವಕ್ಕೆ ಬಲ ತುಂಬುವ ಕೆಲಸಗಳಾಗುತ್ತಿವೆ. ಆದರೆ ಕಾಂಗ್ರೆಸ್‌ ಮಾತ್ರ, ಏಕೆ ತನ್ನಲ್ಲಿನ ಯುವ ನಾಯಕರನ್ನು ಹೀಗೆ ನಡೆಸಿಕೊಳ್ಳುತ್ತಿದೆಯೋ ತಿಳಿ ಯದು. ಪಕ್ಷದಲ್ಲಿ ಬೇರೆ ಯಾವ ಯುವ ನಾಯಕತ್ವವೂ ಪರ್ಯಾಯವಾಗಿ ಬೆಳೆಯ ಬಾರದೆಂಬ ಕಾರಣಕ್ಕೇನು?, ಅಲ್ಲ ಎನ್ನುವುದು ಉತ್ತರವಾಗಿದ್ದರೆ ಈ ವಿಚಾರದಲ್ಲಿ ಕಾಂಗ್ರೆಸ್‌ ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.