ಗಡಿ ನಾಡಿನಲ್ಲಿ ಉತ್ತಮ ಮಳೆ-ಹಳ್ಳಗಳಿಗೆ ಕಳೆ
Team Udayavani, Jul 16, 2020, 2:16 PM IST
ಸಾಂದರ್ಭಿಕ ಚಿತ್ರ
ಬೀದರ: ಕಳೆದ ಹಲವು ದಿನಗಳಿಂದ ಮಳೆ-ಬಿಸಿಲಿನ ಕಣ್ಣಾ ಮುಚ್ಚಾಲೆಯಲ್ಲಿದ್ದ ಗಡಿ ನಾಡು ಬೀದರನಲ್ಲಿ ಈಗ ಮುಂಗಾರಿನ ವಾತಾವರಣ ಮೂಡಿದೆ. ಬೀದರ ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ.
ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದ ಜಿಲ್ಲೆಯಲ್ಲಿ ರೈತರು ಬಿತ್ತನೆ ಮುಗಿಸಿ ಕಳೆ ತೆಗೆಯುವ ಚಟುವಟಿಕೆಯಲ್ಲಿ ತೊಡಗಿದ್ದರು. ಜುಲೈ ಆರಂಭದಲ್ಲಿ ಹೇಳಿಕೊಳ್ಳುವಂಥ ಮಳೆಯಾಗಿರಲಿಲ್ಲ. ಆದರೆ, ಮಂಗಳವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಮತ್ತೆ ಮರು ದಿನ ಬುಧವಾರ ಮಧ್ಯಾಹ್ನ 1ರಿಂದ ಸಂಜೆ 7ರವರೆಗೆ ಭರ್ಜರಿ ಮಳೆಯಾಗಿದೆ. ಹಳ್ಳ- ಕೊಳ್ಳಗಳು ತುಂಬಿಕೊಂಡಿವೆ.
ಮಳೆಯಿಂದಾಗಿ ದಿಢೀರ್ ಆಗಿ ಹವಾಗುಣ ಬದಲಾಗಿದ್ದು, ಸಾಧಾರಣ ಗಾಳಿ ಸಹಿತ ತುಂತುರು ಮಳೆ ಮುಂದುವರಿದಿದೆ. ಬೀದರ ನಗರದ ಪ್ರಮುಖ ವೃತ್ತ, ರಸ್ತೆಗಳು ಮಳೆಯಿಂದಾಗಿ ಜಲಾವೃತಗೊಂಡಿವೆ. ಚರಂಡಿಗಳು ಕಸ-ಕಡ್ಡಿಗಳು ತುಂಬಿಕೊಂಡಿದ್ದರಿಂದ ನೀರು ಹರಿದು ಹೋಗದೇ ನಿಂತುಕೊಂಡು ಜನರ ಸಂಚಾರಕ್ಕೆ ಅಡ್ಡಿಯಾಯಿತು. ಬುಧವಾರ ರಾತ್ರಿಯಿಂದ ಲಾಕ್ಡೌನ್ ಜಾರಿ ಹಿನ್ನಲೆಯಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗಾಗಿ ಮಾರುಕಟ್ಟೆಗೆ ಆಗಮಿಸಿದ್ದ ಜನರು ಕಿರಿಕಿರಿ ಅನುಭವಿಸಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ