ಈ ಬಾರಿ ಆನ್‌ಲೈನ್‌ನಲ್ಲಿ ಮೂಡಿಬರಲಿದೆ ಕುಂದಾಪ್ರ ಕನ್ನಡದ ಕಂಪು


Team Udayavani, Jul 18, 2020, 11:49 AM IST

ಈ ಬಾರಿ ಆನ್‌ಲೈನ್‌ನಲ್ಲಿ ಮೂಡಿಬರಲಿದೆ ಕುಂದಾಪ್ರ ಕನ್ನಡದ ಕಂಪು

ಕುಂದಾಪುರ: ಕುಂದ ಗನ್ನಡದ ಭಾಷೆ, ಸಂಸ್ಕೃತಿಯ ಸೊಬ ಗನ್ನು ವಿಶ್ವದೆಲ್ಲೆಡೆ ಪಸರಿಸುವ, ಮುಂದಿನ ಪೀಳಿಗೆಗೆ ತಲುಪಿಸುವ ಸಲುವಾಗಿ ಕಳೆದ ವರ್ಷದಿಂದ ಕುಂದಾಪ್ರ ಕನ್ನಡ ದಿನಾಚರಣೆ ಎನ್ನುವ ವಿಶಿಷ್ಟ ಕಾರ್ಯಕ್ರಮ ಕುಂದಗನ್ನಡಿಗರಿಂದ ಆಯೋಜಿಸಲ್ಪ ಡುತ್ತಿದೆ. ಆಸಾಡಿ ಅಮಾಸಿ ಬಂತು ಎಂದರೆ ಈಗ ನೆನಪಾಗೋದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ. ಈ ಬಾರಿ ಕೊರೊನಾ ಲಾಕ್‌ಡೌನ್‌, ಗಡಿ ಸೀಲ್‌ಡೌನ್‌, ಸೆಕ್ಷನ್‌ 144 ಜಾರಿ ಮೊದಲಾದ ನಿರ್ಬಂಧಗಳು ಇರುವ ಕಾರಣ ಆನ್‌ಲೈನ್‌ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜು.20ರಂದು ಜಾಲತಾಣ ಗಳಲ್ಲಿ ನಡೆಯಲಿದೆ.

ಹೇಗಾಯ್ತು
ಕಳೆದ ವರ್ಷ ಒಂದಷ್ಟು ಮಂದಿ ಯುವಕರು ತಮ್ಮ ತಮ್ಮಲ್ಲೇ ಚರ್ಚಿಸಿ ಹೀಗೊಂದು ದಿನಾಚರಣೆ ಮಾಡುವ ಬಗೆಯನ್ನು ಮಾತನಾಡಿಕೊಂಡರು. ದಿನ ಹೋದಂತೆ ಅದು ಬೃಹದಾಕಾರವಾಯಿತು. ಪ್ರಪಂಚದ ನಾನಾ ಕಡೆಗಳಿಂದ, ಕುಂದಾಪುರದ ಬೇರಿ ನಿಂದ ಹೊರಟು ಎಲ್ಲೆಡೆ ಚದುರಿದ ಚಟು ವಟಿಕೆ ನಿರತರಿಂದ, ಸೆಲೆಬ್ರಿಟಿಗಳಿಂದ, ಸಂಘಟನೆಗಳಿಂದ ಅಭೂತಪೂರ್ವ ಬೆಂಬಲ ದೊರೆಯಿತು. ಉಡುಪಿ ಜಿಲ್ಲೆಯ ನಾನಾ ಕಡೆ ಮಾತ್ರವಲ್ಲ ದ.ಕ., ಬೆಂಗಳೂರು, ಮುಂಬಯಿ, ಪುಣೆ, ಬಹ್ರೈನ್‌, ದುಬಾೖ ಹೀಗೆ ವಿಶ್ವದ ನಾನಾ ಕಡೆ ವಿಶ್ವ ಕುಂದಾಪ್ರ ಕನ್ನಡ ದಿನದ ಆಚರಣೆ ನಡೆಯಿತು. ಕುಂದಾಪ್ರ ಕನ್ನಡದ ಕುರಿತು ಚರ್ಚೆಗಳು ನಡೆದವು. ಭಾಷಾ ಸೊಗಡಿನ ಗಾದೆ, ಸಾಹಿತ್ಯ, ಕಥೆ, ಕವನ, ಪ್ರೇಮಪತ್ರ, ಅಬ್ಬಿಗೊಂದು ಪತ್ರ, ಲೇಖನ, ಮಾತು, ಹಳೆಯದಾದ ಬಳಕೆಯಲ್ಲಿಲ್ಲದ ಶಬ್ದಗಳು ಚಾಲನೆಗೆ ಬಂದವು. ಅನಂತರದ ದಿನಗಳಲ್ಲಿ ಕುಂದಗನ್ನಡ ನಿಘಂಟು ಆ್ಯಪ್‌ ಬಂತು. ಯಾವುದೇ ಒಂದು ನಿರ್ದಿಷ್ಟ ಸಂಘಟನೆಯಿಲ್ಲದೆ, ಎಲ್ಲರೂ ಮುಕ್ತವಾಗಿ, ಸಾಮೂಹಿಕವಾಗಿ ಆಚರಿಸುವ ದಿನವಾಗಿ ಮಾರ್ಪಾಡಾಯಿತು.

ಆಸಾಡಿ ಅಮಾಸಿ
ಮಳೆಗಾಲದಲ್ಲಿ ಹಬ್ಬಗಳು ಇರುವುದಿಲ್ಲ, ಜಾತ್ರೆಯಂತಹ ಆಚರಣೆ ಕೆಲವು ಕಡೆಗಷ್ಟೇ ಸೀಮಿತ. ಆಸಾಡಿ ಅಮಾವಾಸ್ಯೆ ಅಂದರೆ ಕರ್ಕಾಟಕ ಅಮಾವಾಸ್ಯೆ ಇಲ್ಲಿನ ಜನರ ಪಾಲಿಗೆ ಶ್ರೇಷ್ಠ ದಿನ. ಹಾಗಾಗಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂದೇ ಪ್ರತಿವರ್ಷ ನಡೆಸುವುದು ಎಂದು ಆರಂಭಿಸಲಾಗಿದೆ.
ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಎಲ್ಲಿಯೂ ಸಭಾ ಕಾರ್ಯಕ್ರಮ ನಡೆಯುವುದಿಲ್ಲ. ಆದರೆ ಆನ್‌ಲೈನ್‌ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಸಂಘಟಕರು ಹಮ್ಮಿಕೊಂಡಿದ್ದಾರೆ. ಕುಂದಾಪ್ರ ಕನ್ನಡದ ಮೇಲೆ ಅಭಿಮಾನ ಉಳ್ಳ ಯಾರು ಬೇಕಾದರೂ ಎಲ್ಲಿ ಬೇಕಾದರೂ ಅವರದ್ದೇ ಮಾದರಿಯಲ್ಲಿ ಅನುಸರಿಸಬಹುದಾದ ಕಾರ್ಯಕ್ರಮವಾಗಿದೆ. ಕುಂದಾಪ್ರ ಕನ್ನಡ ನಮ್ಮದು ಎಂಬ ಹೆಮ್ಮೆಯಿಂದ ಮೆರೆಸುವ ಕಾರ್ಯವಾಗಬೇಕು ಎಂಬ ನಿಟಿ rನಲ್ಲಿ ಈ ದಿನ ಆಚರಿಸಲು ಜನರೆಲ್ಲ ಮುಂದಾಗಿದ್ದಾರೆ.

ಈ ಬಾರಿ ಏನೆಲ್ಲ ವಿಶೇಷ ?
ಕುಂದಗನ್ನಡವನ್ನು ಬರಹದ ಭಾಷೆಯಾಗಿ ಬಳಕೆ ಮಾಡಬೇಕು ಹಾಗೂ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ನೆನಪಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಅಬ್ಬಿಗೊಂದು ಪತ್ರ ಎನ್ನುವ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಕುಂದಾಪ್ರದ ಖಾದ್ಯಗಳನ್ನು ಮನೆಯಲ್ಲೇ ಮಾಡಿ ಅದನ್ನು ತಯಾರಿಸುವ ವಿಧಾನ ಹೇಗೆ ಎನ್ನುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಸ್ಪರ್ಧೆ ಹಾಗೂ ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳಾದ ಚೆನ್ನಮಣೆ, ಪೇಡಗಾ ಮುಂತಾದ ಆಟಗಳನ್ನು ಮಕ್ಕಳ ಮೂಲಕ ಆಡಿಸಿ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದು, ಕುಂದಾಪ್ರ ಭಾಷೆಯ ಡಬ್‌ಮ್ಯಾಶ್‌, ವೀಡಿಯೋಗಳನ್ನು ಹಂಚಿಕೊಳ್ಳುವ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಟಾಪ್ ನ್ಯೂಸ್

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.