ಲಾಕ್‌ಡೌನ್‌: ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಬೇಡಿಕೆ ಇಳಿಕೆ


Team Udayavani, Jul 18, 2020, 11:53 AM IST

ಲಾಕ್‌ಡೌನ್‌: ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಬೇಡಿಕೆ ಇಳಿಕೆ

ಸಾಂದರ್ಭಿಕ ಚಿತ್ರ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.23ರ ವರೆಗೆ ಲಾಕ್‌ಡೌನ್‌ ಘೋಷಿಸಿದ್ದು, ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಸದ್ಯ ಪಾರ್ಸೆಲ್‌ಗೆ ಬೇಡಿಕೆ ಕಡಿಮೆಯಾಗಿದ್ದು, ಬಹಳಷ್ಟು ಹೊಟೇಲ್‌ಗ‌ಳು ಮುಚ್ಚುವ ಭೀತಿಯಲ್ಲಿವೆ.

ಜಿಲ್ಲೆಯ ಕೆಲವು ಹೊಟೇಲ್‌ಗ‌ಳು ನಾಲ್ಕು ತಿಂಗಳುಗಳಿಂದ ತೆರೆದಿಲ್ಲ. ಕೆಲವು ಹೊಟೇಲುಗಳಲ್ಲಿ ಕೇವಲ ಉಪಾಹಾರ ಮಾತ್ರ ಇದ್ದು, ಊಟದ ವ್ಯವಸ್ಥೆ ಮಾಡಿಲ್ಲ. ಪಾರ್ಸೆಲ್‌ ಅವಕಾಶ ನೀಡಿದ ಕಾರಣ ಲಾಭಕ್ಕಿಂತ ನಷ್ಟವೇ ಹೆಚ್ಚು ಎನ್ನುತ್ತಿದ್ದಾರೆ ಮಾಲಕರು. ಸಾರ್ವಜನಿಕರು ಸಾಮಾನ್ಯವಾಗಿ ಯಾವ ರೀತಿಯ ತಿಂಡಿಯನ್ನು ಬಯಸುತ್ತಾರೆ ಎಂಬುದನ್ನು ತಿಳಿಯುವಲ್ಲಿ ಮಾಲಕರು ಸೋಲುತ್ತಿದ್ದು, ಪ್ರತಿದಿನ ಹೆಚ್ಚಿನ ಉಪಾಹಾರ ಹಾಳಾಗುತ್ತಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ರಾತ್ರಿ ಸುಮಾರು 8 ಗಂಟೆಯವರೆಗೆ ಮಾತ್ರ ಹೊಟೇಲುಗಳನ್ನು ತೆರೆದಿಡಲು ಅವಕಾಶ ನೀಡಲಾಗಿದೆ. ಸಾಮಾನ್ಯವಾಗಿ ರಾತ್ರಿ 9 ಗಂಟೆಯ ವೇಳೆಗೆ ಊಟಕ್ಕೆ ಬೇಡಿಕೆ ಬರುವ ಕಾರಣ 8 ಗಂಟೆಗೆ ಮುಚ್ಚುವುದರಿಂದ ಕಷ್ಟವಾಗುತ್ತಿದೆ ಎನ್ನುತ್ತಿದ್ದಾರೆ ಮಾಲಕರು. ಜಿಲ್ಲೆಯಲ್ಲಿ ಸುಮಾರು 1,000ಕ್ಕೂ ಮಿಕ್ಕಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಹೊಟೇಲುಗಳಿವೆ. ಸಾವಿರಾರು ಮಂದಿ ಇದನ್ನೇ ಅವಲಂಬಿಸಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲೂ ಕೆಲವು ಮಾಲಕರು ಕಾರ್ಮಿಕರಿಗೆ ತಿಂಗಳು ಪೂರ್ತಿ ಸಂಬಳ ನೀಡಿದ್ದಾರೆ.

ಮಂಗಳೂರಿನ ಕೆಲವು ಹೊಟೇಲ್‌ ಮಾಲಕರು ಉತ್ತರ ಭಾರತದ ಕಾರ್ಮಿಕರನ್ನು ಅವಲಂಬಿಸಿಕೊಂಡಿದ್ದಾರೆ. ಕ್ಲೀನಿಂಗ್‌, ಚೈನೀಸ್‌ ಫುಡ್‌, ಚಾಟ್ಸ್‌ ತಿಂಡಿ ತಯಾರಿಯಲ್ಲಿ ಹೆಚ್ಚಾಗಿ ಅವರೇ ಕೆಲಸ ಮಾಡುತ್ತಿದ್ದಾರೆ. ಆದರೆ ಸದ್ಯ ಶೇ. 70ರಷ್ಟು ಕಾರ್ಮಿಕರು ಊರುಗಳಿಗೆ ತೆರಳಿದ್ದಾರೆ. ಅವರು ಸದ್ಯಕ್ಕೆ ಮಂಗಳೂರಿಗೆ ಬರುವುದೂ ಅನುಮಾನವಾದ್ದರಿಂದ ಹೊಟೇಲುಗಳನ್ನು ತೆರೆದರೂ, ಕಾರ್ಮಿಕರ ಕೊರತೆ ಉಂಟಾಗಬಹುದು ಎನ್ನುತ್ತಾರೆ ಮಾಲಕರು.

ಹೊಟೇಲ್‌ ಉದ್ಯಮ ನಷ್ಟದಲ್ಲಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೊಟೇಲ್‌ ಉದ್ಯಮ ನಷ್ಟ ಅನುಭವಿಸುತ್ತಿದೆ. ಸದ್ಯ ಕೆಲವು ಹೋಟೆಲುಗಳಷ್ಟೇ ತೆರೆದಿವೆ. ಸಾರ್ವಜನಿಕರಿಗೆ ಬೆಳಗ್ಗೆ 11 ಗಂಟೆವರೆಗೆ ಮಾತ್ರ ಪಾರ್ಸೆಲ್‌ಗೆ ಅವಕಾಶ ನೀಡಲಾಗಿದೆ. ಆಹಾರ ಸರಬರಾಜು ಸಂಸ್ಥೆಗಳಿಗೆ ಅವಕಾಶ ಇದ್ದರೂ, ಜನರು ಪಾರ್ಸೆಲ್‌ಗೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.
ಕುಡ್ಪಿ ಜಗದೀಶ ಶೆಣೈ, ಅಧ್ಯಕ್ಷರು, ಹೊಟೇಲ್‌ ಮಾಲಕರ ಸಂಘ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.