ಬಾವಿಗೆ ಚಿರತೆ ಬಿದ್ದ ಶಂಕೆ! 100 ಅಡಿ ಆಳದ ಬಾವಿಗೆ ಇಳಿದು ಪರಿಶೀಲಿಸಿದ ಅರಣ್ಯಾಧಿಕಾರಿ
Team Udayavani, Jul 19, 2020, 10:56 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಕಾರಪುರ ಗ್ರಾಮದ ಪುರಾತನ ಬಾವಿಯೊಂದರಲ್ಲಿ ಚಿರತೆವೊಂದು ಬಿದ್ದಿದೆ ಎಂಬ ಗ್ರಾಮಸ್ಥರ ಮಾತಹಿತಿಯನ್ನು ಆಧರಿಸಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬಾವಿಯನ್ನು ಪರಿಶೀಲನೆ ನಡೆಸಿದ್ದಾರೆ ಬಾವಿಯಲ್ಲಿ ಚಿರತೆ ಕಾಣದ ಹಿನ್ನೆಲೆಯಲ್ಲಿ ಆರ್.ಎಫ್.ಓ ಸಿದ್ದರಾಜು ಅವರು 100 ಅಡಿ ಆಳದ ಬಾವಿಗೆ ಇಳಿದು ಚಿರತೆ ಇಲ್ಲವೆಂಬುದನ್ನು ಖಚಿತಪಡಿಸಿದ್ದಾರೆ.
ಚಿರತೆಯೊಂದು ಬಾವಿಗೆ ಬಿದ್ದಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಅರಣ್ಯ ಇಲಾಖೆಯ ನಾಗರಹೊಳೆ ಉದ್ಯಾನವನದ ಅಂತರ ಸಂತೆ ವನ್ಯಜೀವಿ ವಲಯದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಚಿರತೆಗಾಗಿ ಹುಡುಕಾಟ ನಡೆಸಿದರು. ಆದರೆ ಅದೃಷ್ಟವಶಾತ್ ಬಾವಿಯಲ್ಲಿ ಯಾವುದೇ ಚಿರತೆಯಾಗಲಿ ಅಥವಾ ಅದರ ಕುರುಹುಗಳು ಕಂಡುಬಾರದಿದ್ದರಿಂದ ಚಿರತೆ ಬಾವಿಯಲ್ಲಿ ಇಲ್ಲ ಎಂಬುದನ್ನು ಅರಣ್ಯ ಇಲಾಖೆಯವರು ಖಚಿತ ಪಡಿಸಿದರು.
ಆದರೂ ಒಮ್ಮೆ ಬಾವಿಯ ಒಳಗೆ ಇಳಿದು ಪರಿಶೀಲಿಸುವ ಪ್ರಯತ್ನ ಮಾಡಿದ ಅಂತರಸಂತೆ ವಲಯ ಅರಣ್ಯಧಿಕಾರಿ ಎಸ್.ಎಸ್.ಸಿದ್ದರಾಜು ಸುಮಾರು 100 ಅಡಿ ಬಾವಿಯ ಒಳಗೆ ಬೋನಿನ ಸಹಾಯದಿಂದ ಇಳಿದು ಚಿರತೆಯ ಸುಳಿವಿನ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಚಿರತೆ ಬಾವಿಯಲ್ಲಿ ಇಲ್ಲ ಎಂಬುದನ್ನು ಖಚಿತ ಪಡಿಸಿದರು.
ಈ ವೇಳೆ ನಾಗರಹೊಳೆ ಹುಲಿಯೋಜನೆ ನಿರ್ಧೇಶಕ ಮಹೇಶ್ ಕುಮಾರ್, ಎಸಿಎಫ್ ಪೌಲ್ ಆಟೋಂನಿ, ಪಶು ವೈದ್ಯ ಡಾ.ಮುಜೀಬ್ ರೆಹಮಾನ್, ಆರ್ ಎಫ್ಒ ಎಸ್.ಎಸ್.ಸಿದ್ದರಾಜು, ಸಿಬ್ಬಂದಿಗಳಾದ ಆಂತೊನಿ ಶ್ರೀಧರ್ ಸೇರಿದಂತೆ 50 ಕ್ಕೂ ಹೆಚ್ಚು ಗ್ರಾಮಸ್ಥರು. ಅರಣ್ಯ ಇಲಾಖೆ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್