ಕೋವಿಡ್ ನಿಂದ ಮೃತರಾದವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಡಿ.ಕೆ ಸುರೇಶ್
Team Udayavani, Jul 19, 2020, 5:52 PM IST
ರಾಮನಗರ: ಕೋವಿಡ್ 19 ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಕನಕಪುರದಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
ಜಿಲ್ಲೆಯ ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಮೃತರ ಅಂತ್ಯಸಂಸ್ಕಾರ ನಡೆಸಲಾಯಿತು. ಈ ವೇಳೆ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಇತ್ತೀಚೆಗೆ ಡಿಕೆ ಸುರೇಶ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಜತೆ ಮಾತನಾಡಿ ಆತ್ಮವಿಶ್ವಾಸ ತುಂಬಿಸುವ ಕೆಲಸ ಮಾಡಿದ್ದರು.
ಈ ವಿಚಾರವಾಗಿ ಇತ್ತೀಚೆಗಷ್ಟೇ ಬಹಿರಂಗ ಪತ್ರ ಬರೆದಿದ್ದ ಸಂಸದರು, ‘ಕೋವಿಡ್ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಈ ವಿಷಯದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿಡ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕು’ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ