ಉಡುಪಿ: 5 ಕಡೆ ಕೋವಿಡ್‌ ಡೇ ಕೇರ್‌ ಸೆಂಟರ್‌ ಪ್ರಾರಂಭ; 870 ಹಾಸಿಗೆ


Team Udayavani, Jul 20, 2020, 9:52 AM IST

ಉಡುಪಿ: 5 ಕಡೆ ಕೋವಿಡ್‌ ಡೇ ಕೇರ್‌ ಸೆಂಟರ್‌ ಪ್ರಾರಂಭ; 870 ಹಾಸಿಗೆ

ಉಡುಪಿ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಸೋಂಕಿನ ಲಕ್ಷಣ ಇರದ ರೋಗಿಗಳಿಗಾಗಿ ಜಿಲ್ಲೆಯ 5 ಕಡೆಗಳಲ್ಲಿ ಕೋವಿಡ್‌ 19 ಕೇರ್‌ ಸೆಂಟರ್‌ ತೆರೆಯಲಾಗಿದೆ. ದಿನೇ ದಿನೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿರ್ವಹಣೆಗೆ ಜಿಲ್ಲಾಡಳಿತ ಮತ್ತಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಮುಂದಿನ ಹಂತವಾಗಿ ಜಿಲ್ಲೆಯ ಕಾರ್ಕಳದಲ್ಲಿ 1, ಉಡುಪಿಯಲ್ಲಿ 3, ಕುಂದಾಪುರದಲ್ಲಿ 1 ಸೇರಿದಂತೆ 5 ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 870 ಹಾಸಿಗೆಯನ್ನು ಸಿದ್ಧಪಡಿಸಲಾಗಿದೆ. ಪ್ರಸ್ತುತ ಸುಮಾರು 100ಕ್ಕೂ ಅಧಿಕ ಮಂದಿ ಇಲ್ಲಿ ಇದ್ದಾರೆ.

ಯಾರಿಗೆ ಚಿಕಿತ್ಸೆ?
ಜಿಲ್ಲೆಯಲ್ಲಿ ಕೊರೊನಾ ಲಕ್ಷಣವಿಲ್ಲದ ಪ್ರಕರಣಗಳು ಹೆಚ್ಚಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಕೊರೊನಾ ಕೇರ್‌ ಸೆಂಟರ್‌ ತೆರೆಯಲಾಗಿದೆ. ಸುಮಾರು 10ಕ್ಕೂ ಅಧಿಕ ಸ್ಥಳಗಳನ್ನು ಕೊರೊನಾ ಸೋಂಕಿತರ ಕ್ವಾರಂಟೈನ್‌ಗೆ ಗುರುತಿಸಲಾಗಿದೆ. ಮನೆ ಐಸೋಲೇಶನ್‌ಗೆ ಒಪ್ಪದ ಕೋವಿಡ್‌ ಸೋಂಕಿತರನ್ನು ಈ ಕೇರ್‌ ಸೆಂಟರ್‌ನಲ್ಲಿ ಇಡಲಾಗುತ್ತಿದೆ. ಪ್ರತಿ ಸೆಂಟರ್‌ನ ಉಸ್ತುವಾರಿಯನ್ನು ಓರ್ವ ದಾದಿ ಹಾಗೂ ಓರ್ವ ವೈದ್ಯ ನೋಡಿಕೊಳ್ಳಲಿದ್ದಾರೆ. ವೈದ್ಯರು ದಿನಕ್ಕೆ ಎರಡು ಬಾರಿ ರೋಗಿಗಳ ಆರೋಗ್ಯ ತಪಾಸಣೆ ಮಾಡಲಿದ್ದಾರೆ.

7 ಕಡೆ ಕೋವಿಡ್‌ ಚಿಕಿತ್ಸೆ
ಜಿಲ್ಲೆಯಲ್ಲಿ ಕೊರೊನಾ ಲಕ್ಷಣ ಇರುವವರಿಗೆ (ಅಧಿಕ ಆನಾರೋಗ್ಯ) ಚಿಕಿತ್ಸೆಗೆ ಡಾ| ಟಿಎಂಎ ಪೈ ಆಸ್ಪತ್ರೆ ಬಳಸಲಾಗುತ್ತಿದೆ. ಕಡಿಮೆ ಲಕ್ಷಣವಿರುವ ರೋಗಿಗಳನ್ನು ಉಡುಪಿ ಜಿಲ್ಲಾಸ್ಪತ್ರೆ, ಆದರ್ಶ ಆಸ್ಪತ್ರೆ, ಕಾರ್ಕಳ ತಾಲೂಕು ಆಸ್ಪತ್ರೆ ಹಾಗೂ ಭುವನೇಂದ್ರ ಕಾಲೇಜು ವಸತಿ ನಿಲಯ, ಕುಂದಾಪುರ ತಾಲೂಕು ಆಸ್ಪತ್ರೆ ಮತ್ತು ಹಳೆಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

800 ಹಾಸಿಗೆ ಮೀಸಲು
ಜಿಲ್ಲೆಯಲ್ಲಿ ಸದ್ಯ ಒಟ್ಟು 16ರಷ್ಟು ವೆಂಟಿಲೇಟರ್‌ ಹಾಗೂ 1,200 ಬೆಡ್‌ ಚಿಕಿತ್ಸೆಗೆ ಸಿದ್ಧವಿದೆ. ಪ್ರಸ್ತುತ 584 ಮಂದಿ ರೋಗಿಗಳಿದ್ದು, ಲಕ್ಷಣವಿರುವವರು ಆಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ತುರ್ತಾಗಿ ಅಗತ್ಯಕ್ಕಾಗಿ ವಿವಿಧ ಡೇ ಕೇರ್‌ ಸೆಂಟರ್‌ನಲ್ಲಿ 800 ಹಾಸಿಗೆ ಕಾದಿರಿಸಲಾಗಿದೆ.

ದೂರುಗಳು!
ಉಡುಪಿ ತಾಲೂಕಿನ ಡೇ ಕೇರ್‌ ಸೆಂಟರ್‌ನಲ್ಲಿ ರೋಗಿಗಳಿಗೆ ಸರಿಯಾದ ಆಹಾರ ನೀಡುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. “ದೂರುಗಳ ಬಗ್ಗೆ ಗಮನಕ್ಕೆ ಬಂದಿವೆ. ಇದನ್ನು ಪರಿಹರಿಸುತ್ತೇವೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ರಹಿತ ಕೋವಿಡ್‌ ರೋಗಿಗಳಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಕೆಲವು ಮನೆಗಳಲ್ಲಿ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಅಂತಹ ವ್ಯಕ್ತಿಗಳನ್ನು ಡೇ ಕೇರ್‌ ಸೆಂಟರ್‌ನಲ್ಲಿ ಇಡಲಾಗುತ್ತಿದೆ.
– ಡಾ| ಸುಧೀರ್‌ ಚಂದ್ರ ಸೂಡ, ಡಿಎಚ್‌ಒ, ಉಡುಪಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.