ರಾಜ್ಯದಲಿ ಧಾರ್ಮಿಕ ಕೂಟಗಳಿಗೆ ಅವಕಾಶವಿಲ್ಲ: ಸಿಎಂ


Team Udayavani, Jul 20, 2020, 4:48 PM IST

ರಾಜ್ಯದಲಿ ಧಾರ್ಮಿಕ ಕೂಟಗಳಿಗೆ ಅವಕಾಶವಿಲ್ಲ: ಸಿಎಂ

ಮುಂಬಯಿ, ಜು. 19: ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕೂಟಗಳನ್ನು ನಿಷೇ ಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪುನರುಚ್ಚರಿಸಿದ್ದಾರೆ.

ಆನ್‌ಲೈನ್‌ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮನಪಾ ಆಯುಕ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಧಾರಾವಿ ಮಾದರಿ ಕಾರ್ಯಾಚರಣೆ ನಡೆಸಲು ಕರೆ ನೀಡಿದರು. ಹೊಸ ಕಂಟೈನ್‌ಮೆಂಟ್‌ ವಲಯ ಸೃಷ್ಟಿಯಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಿದರು. ಕೋವಿಡ್‌ ಆಸ್ಪತ್ರೆಗಳಿಗೆ ಲೆಕ್ಕಪರಿಶೋಧಕರನ್ನು ನೇಮಕ ಮಾಡುವಂತೆಯೂ ಸಿಎಂ ಅಧಿಕಾರಿಗಳಿಗೆ ತಿಳಿಸಿದರು. ಪ್ರತಿ ಜಿಲ್ಲೆಯ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಸಮರ್ಪಕ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಂತೆಯೇ, ಮಹಾತ್ಮಾ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆಯ ಅನುಷ್ಠಾನ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆಯ ಬಗ್ಗೆ ನಿಗಾ ವಹಿಸಬೇಕು ಎಂದು ಸಿಎಂ ಕರೆ ನೀಡಿದರು.

ಪ್ರಸ್ತುತ ರಾಜ್ಯದಲ್ಲಿ 540 ಸೋಂಕಿತರು ವೆಂಟಿಲೇಟರ್‌ನಲ್ಲಿದ್ದಾರೆ ಎಂದ ಅವರು, ಇನ್ನು ಮುಂದೆ ರಾಜ್ಯದ ಪ್ರತಿ ಜಿಲ್ಲೆಗಳಿಗೆ ನೋಡಲ್‌ ಪರೀಕ್ಷಾ ಅಧಿಕಾರಿಯನ್ನು ನೇಮಿಸಲಾಗುವುದು ಎಂದರು. ಸರಕಾರವು ಸ್ವಾಬ್‌ ಸಂಗ್ರಹದ ಜತೆಗೆ ಕ್ವಿಕ್‌ ಜೆನ್‌ ಪರೀಕ್ಷೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದವರು ಹೇಳಿದರು. ಪ್ಲಾಸ್ಮಾ ದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ದಾನಿಗಳಿಗೆ 2,000 ರೂ. ನೀಡಲಾಗುವುದು ಎಂದರು. ಸಭೆಯಲ್ಲಿ ಭಾಗವಹಿಸಿದ್ದ ಬಿಎಂಸಿ ಆಯುಕ್ತ ಐ. ಎಸ್‌. ಚಾಹಲ್‌ ಅವರು ಮಾತನಾಡಿ, ಮುಂಬಯಿ ಮಹಾನಗರ ಪ್ರದೇಶಕ್ಕೆ (ಎಂಎಂಆರ್‌) ಏಕೀಕೃತ ಕಮಾಂಡ್‌ ಸೆಂಟರ್‌ ಸ್ಥಾಪಿಸಬೇಕು ಮತ್ತು ಅಲ್ಲಿ ಎಲ್ಲ ಸೌಲಭ್ಯಗಳ ಬಗ್ಗೆ ಮಾಹಿತಿ ಲಭ್ಯವಾಗುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸಲಹೆಯನ್ನು ನೀಡಿದರು. ಎಂಎಂಆರ್‌ನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರೋಗಲಕ್ಷಣವಿಲ್ಲದ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿಲ್ಲ ಎಂದು ಆಯುಕ್ತರು ಹೇಳಿದರು.

ಆರೋಗ್ಯ ಸಚಿವ ರಾಜೇಶ್‌ ಟೋಪೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಅಮಿತ್‌ ದೇಶ್ಮುಖ್‌ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.