ಆಶಾಗಳ ಹೋರಾಟಕ್ಕೆ ಮಹಿಳಾ ಕಾಂಗ್ರೆಸ್ ಬೆಂಬಲ
Team Udayavani, Jul 21, 2020, 9:48 AM IST
ಕಲಬುರಗಿ: ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆರಂಭಿಸಿರುವ ಅನಿರ್ಧಿಷ್ಟಾವಧಿ ಹೋರಾಟ ಬೆಂಬಲಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಆಶಾ ಕಾರ್ಯಕರ್ತೆಯರು ಅತೀ ಹೆಚ್ಚು ಜವಾಬ್ದಾರಿ ಹೊತ್ತು ಮನೆ, ಮನೆಗೆ ತೆರಳಿ ಕೋವಿಡ್ ಪೀಡಿತರನ್ನು ಗುರುತಿಸುವಲ್ಲಿ ಸರ್ಕಾರಕ್ಕೆ ನೆರವಾಗಿದ್ದಾರೆ. ಆದರೆ, ಆಶಾ ಕಾರ್ಯಕರ್ತೆಯರ ಸುರಕ್ಷತೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಗೌರವ ಮತ್ತು ಪೋತ್ಸಾಹಧನ ಸೇರಿ ಕೇವಲ ಆರು ಸಾವಿರ ರೂ. ನೀಡಲಾಗುತ್ತಿದ್ದು, ಕುಟುಂಬ ನಿರ್ವಹಣೆಗೂ ಕಷ್ಟಪಡುವಂತಾಗಿದೆ. ಆಶಾ ಕಾರ್ಯಕರ್ತೆಯರ ಸೇವೆಗೆ ತಕ್ಕಂತೆ ಗೌರವ ಧನ ಹೆಚ್ಚಿಸಬೇಕೆಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಒತ್ತಾಯಿಸಿದರು.
ಸರ್ಕಾರದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮತ್ತು ಮಹಿಳಾ ಪೌರ ಕಾರ್ಮಿಕರಿಗೆ ಸರಿಯಾದ ರಕ್ಷಾ ಕವಚಗಳನ್ನು ಸರ್ಕಾರ ಒದಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇತ್ತೀಚೆಗೆ ಸರ್ಕಾರದ ಮೇಲೆ ಒತ್ತಡ ತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಶಾ ಕಾರ್ಯಕರ್ತೆಯರು ಭೇಟಿ ಮಾಡಿದ್ದು, ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ವಿರೋಧ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಆಶಾ ಕಾರ್ಯಕರ್ತೆಯರು ಪರವಾಗಿ ಸರ್ಕಾರದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ. ಸರ್ಕಾರ ಈಗಲಾದರೂ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರ ಮನವಿ ಸಲ್ಲಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಲತಾ ರವಿ ರಾಠೊಡ, ಕಾರ್ಯಕರ್ತೆರಾದ ಶಿಲ್ಪಾ, ಗೀತಾ ರಾಠೊಡ, ಸುಮಂಗಳಾ ಪೂಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್