ಚೆಸ್‌ ರಂಗದ ಅದ್ಭುತ ಪ್ರತಿಭೆ ಸಮರ್ಥ್ ರಾವ್‌ !


Team Udayavani, Jul 21, 2020, 1:42 PM IST

ಚೆಸ್‌ ರಂಗದ ಅದ್ಭುತ ಪ್ರತಿಭೆ ಸಮರ್ಥ್ ರಾವ್‌ !

ಹುಟ್ಟುವಾಗಲೇ “ಸೆಲೆಬ್ರಲ್‌ ಪಾಲ್ಸಿ’ ಎಂಬ ಅಂಗವೈಕಲ್ಯಕ್ಕೆ ತುತ್ತಾಗಿ ಬೆಳೆದ ಬಾಲಕ. ಶೇ. 75ಕ್ಕಿಂತಲೂ ಅಧಿಕ ಅಂಗವೈಕಲ್ಯ ಆವರಿಸಿದ ಕಾರಣ ಸ್ವತಂತ್ರವಾಗಿ ನಿಲ್ಲಲು ಅಥವಾ ನಡೆಯಲು ಅಸಾಧ್ಯವಾದ ಸ್ಥಿತಿ. ದೈನಂದಿನ ಚಟುವಟಿಕೆಗಳಿಗೆ ಮನೆಯವರನ್ನು ಅವಲಂಬಿಸಬೇಕಾಗಿದೆ. ಈ ಎಲ್ಲವನ್ನು ಮೆಟ್ಟಿನಿಂತು ತನ್ನ ಅವಿರತ ಪರಿಶ್ರಮದಿಂದ ಇಂದು ಚದುರಂಗ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾರೆ.

ಇವರ ಹೆಸರು ಸಮರ್ಥ್ ಜೆ. ರಾವ್‌. ಮೂಲತಃ ಕುಂದಾಪುರದ ಬಸ್ರೂರಿನವರು. ಸದ್ಯ ಹೊನ್ನಾವರದಲ್ಲಿ ನೆಲೆಸಿರುವ ಸಿಂಡಿಕೇಟ್‌ ಬ್ಯಾಂಕ್‌ ಉದ್ಯೋಗಿ ಜಗದೀಶ್‌ ರಾವ್‌ ಬಿ.ಎಸ್‌. ಹಾಗೂ ವಿನುತಾ ಭಟ್‌ ದಂಪತಿ ಪುತ್ರ. ಹೊನ್ನಾವರದ ಎಸ್‌ಡಿಎಂ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ವ್ಯಾಸಂಗ ನಡೆಸುತ್ತಿರುವ ಸಮರ್ಥ್ ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾನೆ.

ಅಪರಿಮಿತ ಜ್ಞಾಪಕ ಶಕ್ತಿ
ಸಮರ್ಥ್ ಅವರಿಗೆ ನಾಲ್ಕು ವರ್ಷ ತುಂಬುತ್ತಿದ್ದಂತೆ ಪಾಲಕರು ಎಲ್‌ಕೆಜಿಗೆ ಸೇರಿಸಿದರು. ಬರೆಯಲು ಕಷ್ಟವಾದರೂ ಜ್ಞಾಪಕ ಶಕ್ತಿ ಉತ್ತಮವಾಗಿತ್ತು. ಕ್ಯಾಲೆಂಡರ್‌ನಲ್ಲಿನ 12 ತಿಂಗಳುಗಳ ದಿನಾಂಕ, ದಿನ, ರಜಾದಿನಗಳನ್ನು ಗಮನಿಸಿದ ಬಳಿಕ ಯಾವುದೇ ದಿನಾಂಕವನ್ನು ಕೇಳಿದರೆ ವಾರವನ್ನು ಹೇಳುವ ಚಾಕಚಕ್ಯತೆ ಇವರದ್ದು.

ಮಗ ಆಟ ಆಡಲಿ ಎಂಬ ಕಾರಣಕ್ಕೆ ಕೇರಂ ಮತ್ತು ಚೆಸ್‌ ಎರಡನ್ನೂ ಮುಂದಿಟ್ಟಾಗ ಸಮರ್ಥ್ ಆಯ್ಕೆ ಮಾಡಿಕೊಂಡಿದ್ದು ಚೆಸ್‌. ಇದರಲ್ಲಿ ಪಳಗಿದ ಸಮರ್ಥ್ ಎಸ್‌ಜಿಎಫ್ಐನ ಕ್ಲಸ್ಟರ್‌ ಮಟ್ಟದ ಚೆಸ್‌ ಪಂದ್ಯಾವಳಿಯಲ್ಲಿ ಭಾಗವಹಿಸಿದರು. “ಸೋಲೇ ಗೆಲುವಿನ ಸೋಪಾನ’ ಎಂದು ತಿಳಿದುಕೊಂಡು ಎದೆಗುಂದದೆ ಮುನ್ನುಗ್ಗಿದರು. ಚೆಸ್‌ನಲ್ಲಿನ ಆತನ ಆಸಕ್ತಿಯನ್ನು ಗಮನಿಸಿ ಪೋಷಕರು ಎಸ್‌ಡಿಎಂ ಕಾಲೇಜಿನ ನಿವೃತ್ತ ದೈಹಿಕ ನಿರ್ದೇಶಕರಾಗಿದ್ದ ದಿ| ವಿ. ಆರ್‌. ಶಾಸ್ತ್ರಿ ಅವರಿಂದ ಮಾರ್ಗದರ್ಶನ ಕೊಡಿಸಿದರು. ಹಲವಾರು ಸ್ಪರ್ಧೆಗಳಲ್ಲಿ ಬಹುಮಾನಗಳನ್ನೂ ಪಡೆದರು.

ವಿಶ್ವಮಟ್ಟದಲ್ಲಿ ಸಾಧನೆ
2017ರಲ್ಲಿ ಸ್ಲೋವಾಕಿಯಾ ಆಯೋಜಿಸಿದ್ದ ಒಎಂಡಿ ಡಿಸ್ಟ್ರೋ ಒಪೆ-ನೆಟ್‌ ವಿಶ್ವಮಟ್ಟದ ಚೆಸ್‌ ಚಾಂಪಿಯನ್‌ ಶಿಪ್‌ನಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ತನ್ನದಾಗಿಸಿಕೊಂಡಿದ್ದಾರೆ. 2018ರಲ್ಲಿ ಸ್ಲೋವಾಕಿಯಾ ಆಯೋಜಿಸಿದ್ದ ಚೆಸ್‌ ಚಾಂಪಿಯನ್‌ ಶಿಪ್‌ನಲ್ಲಿ ಇತರ ಇಬ್ಬರು ಅಂಗವಿಕಲರೊಂದಿಗೆ ಭಾಗವಹಿಸಿ ಪಂದ್ಯಾವಳಿಯ ಚಾಂಪಿಯನ್‌ ಆಗಿದ್ದಲ್ಲದೇ ಭಾರತೀಯ ತಂಡ ಪ್ರಥಮ ಬಹುಮಾನ ಪಡೆಯಿತು.

ಈ ವರೆಗೆ ಸಮರ್ಥ್ 80ಕ್ಕೂ ಅಧಿಕ ಚೆಸ್‌ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ 30 ತಾಲೂಕು, ಜಿಲ್ಲಾ ಮತ್ತು ಅಂತರ್‌ ಜಿಲ್ಲಾ ಮಟ್ಟ, 26 ರಾಜ್ಯಮಟ್ಟ, 8 ರಾಷ್ಟ್ರೀಯ ಮಟ್ಟ, 2 ಅಂತಾರಾಷ್ಟ್ರೀಯ ಮಟ್ಟ, 4 ಐಪಿಸಿಎ ವಿಶ್ವ ಚೆಸ್‌, ಯುಎಸ್‌ಎಯಲ್ಲಿ ನಡೆದ ಅಂಗವಿಕಲರಿಗಾಗಿ ಚಾಂಪಿಯನ್‌ಶಿಪ್‌ ಮತ್ತು ಒಂದು ವಿಶ್ವ ಜೂನಿಯರ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾರೆ. ತನ್ನ ಮಗನನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಬ್ಯಾಂಕಿನಲ್ಲಿ ಉನ್ನತ ಹುದ್ದೆಗೆ ಬಡ್ತಿ ದೊರೆತರೂ ಬಡ್ತಿ ಪಡೆಯದೆ ಮಗನಿಗೆ ಉತ್ತಮ ಶಿಕ್ಷಣ ಮತ್ತು ತರಬೇತಿ ಕೊಡಿಸುತ್ತಾ ಹಲವಾರು ಪಂದ್ಯಾವಳಿಗಳಿಗೆ ತಾವೇ ಸ್ವತಃ ಕರೆದೊಯ್ಯುತ್ತಿದ್ದಾರೆ.

ವಿಶ್ವನಾಥನ್‌ ಆನಂದ್‌ ಜತೆ ಆಡುವಾಸೆ
5 ಬಾರಿ ವಿಶ್ವ ಚಾಂಪಿಯನ್‌ ಗ್ರ್ಯಾಂಡ್‌ ಮಾಸ್ಟರ್‌ ವಿಶ್ವನಾಥ ಆನಂದ ಅವರು ನನಗೆ ಆದರ್ಶ. ಒಂದು ದಿನ ಅವರ ಜೊತೆ ಆಡುವುದಲ್ಲದೇ ಅವರಂತೆಯೇ ಆಗಬೇಕೆಂಬ ಆಸೆ ಇದೆ ಎನ್ನುತ್ತಾರೆ ಸಮರ್ಥ್.


ಎಂ.ಎಸ್‌.ಶೋಭಿತ್‌, ಮೂಡ್ಕಣಿ, ಹೊನ್ನಾವರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.