ಗ್ರಾಮೀಣ ಪ್ರದೇಶಗಳತ್ತ ಚಿತ್ತ ಕೋವಿಡ್ 19‌ ಪ್ರಸರಣ


Team Udayavani, Jul 22, 2020, 5:44 AM IST

ಗ್ರಾಮೀಣ ಪ್ರದೇಶಗಳತ್ತ ಚಿತ್ತ ಕೋವಿಡ್ 19‌ ಪ್ರಸರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕವು ಸಮುದಾಯ ಪ್ರಸರಣ ಚರಣವನ್ನು ತಲುಪಿಬಿಟ್ಟಿದೆಯೇ ಎನ್ನುವ ಬಗ್ಗೆ ಕೆಲವು ದಿನಗಳಿಂದ ಜೋರಾಗಿ ಚರ್ಚೆ ನಡೆಯುತ್ತಿದೆ.

ಈ ಪ್ರಶ್ನೆಗೆ ಸಾಂಕ್ರಾಮಿಕ ರೋಗ ತಡೆ ವಿಶೇಷಜ್ಞರು ಮತ್ತು ಸರಕಾರಗಳ ನಡುವೆ ಸಹಮತವಂತೂ ಇಲ್ಲ.

ಆದರೆ ದೇಶದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯನ್ನು ಪರಿಗಣಿಸಿದಾಗ ನಿಜಕ್ಕೂ ರೋಗ ಸಮುದಾಯ ಪ್ರಸರಣ ಹಂತವನ್ನು ತಲುಪಿಬಿಟ್ಟಿತೇ ಎನ್ನುವ ಅನುಮಾನ ಕಾಡದಿರದು.

ಒಟ್ಟು ಪ್ರಕರಣಗಳ ಸಂಖ್ಯೆ ಈಗಾಗಲೇ 11.71 ಲಕ್ಷ ದಾಟಿದ್ದರೆ, ಇದರಲ್ಲಿ 4 ಲಕ್ಷ ಸಕ್ರಿಯ ಪ್ರಕರಣಗಳು ಇವೆ. ಕಳವಳದ ಅಂಶವೆಂದರೆ, ಈಗ ನಿತ್ಯ ಸೋಂಕಿತರ ಸಂಖ್ಯೆ 40 ಸಾವಿರ ದಾಟಿರುವುದು!

ಇಂದು ದೇಶದಲ್ಲಿ ಟೆಸ್ಟ್‌ಗಳ ಪ್ರಮಾಣದಲ್ಲಿ ಹೆಚ್ಚಳವಾಗಿರುವ ಕಾರಣದಿಂದಾಗಿಯೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಾಣಿಸಿದೆ ಎನ್ನಲಾಗುತ್ತದೆ. ಆದರೆ ಮತ್ತಷ್ಟು ಪರೀಕ್ಷೆಗಳನ್ನು ನಡೆಸಿದರೆ, ನಿತ್ಯ ಸೋಂಕಿತರ ಸಂಖ್ಯೆಯಲ್ಲಿ ಮಗದಷ್ಟು ಏರಿಕೆ ಕಾಣುತ್ತದೆ ಎಂದರ್ಥ ಅಲ್ಲವೇ? ಈ ಕಾರಣಕ್ಕಾಗಿಯೇ ನಿತ್ಯ ಟೆಸ್ಟ್‌ಗಳ ಸಂಖ್ಯೆ ಈ ತಿಂಗಳಾಂತ್ಯಕ್ಕೆ ಕನಿಷ್ಠ ನಾಲ್ಕು ಲಕ್ಷದಷ್ಟಾದರೂ ನಡೆಯಬೇಕು ಎನ್ನುತ್ತಾರೆ ತಜ್ಞರು.

ದೇಶದಲ್ಲಿ ಜುಲೈ 15ರಿಂದ ಪ್ರತಿ ನಿತ್ಯ 3 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳು ನಡೆಯಲಾರಂಭಿಸಿವೆ. ಗಮನಾರ್ಹ ಸಂಗತಿಯೆಂದರೆ ಇತ್ತ ರಾಜ್ಯದಲ್ಲೂ ಸಹ ಟೆಸ್ಟಿಂಗ್‌ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿರುವುದು.

ಜೂನ್‌ ತಿಂಗಳ ವೇಳೆ 15-18 ಸಾವಿರದ ಆಸುಪಾಸು ನಡೆಯುತ್ತಿದ್ದ ನಿತ್ಯ ಟೆಸ್ಟಿಂಗ್‌ಗಳ ಸಂಖ್ಯೆ ಈಗ ಕೆಲವು ದಿನಗಳಿಂದ 35 ಸಾವಿರದ ಗಟಿ ದಾಟಿದೆ. ಈಗ ಕರ್ನಾಟಕವು ಸಕ್ರಿಯ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದ್ದು, ಮೊದಲೆರಡು ಹಾಟ್‌ಸ್ಪಾಟ್‌ಗಳಲ್ಲಿ ಮಹಾರಾಷ್ಟ್ರ ಹಾಗೂ ತಮಿಳುನಾಡು ಇವೆ.

ರಾಜ್ಯದಲ್ಲಷ್ಟೇ ಅಲ್ಲದೇ ಅನ್ಯ ರಾಜ್ಯಗಳಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಅನೇಕ ರಾಜ್ಯಗಳು ತಮ್ಮಲ್ಲಿ ಹಲವು ಭಾಗಗಳಲ್ಲಿ ಅರೆ ಅಥವಾ ಪೂರ್ಣ ಲಾಕ್‌ ಡೌನ್‌ ಜಾರಿಮಾಡಿವೆ.

ಇವನ್ನೆಲ್ಲ ಗಮನಿಸಿದಾಗ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಎಲ್ಲಿಗೆ ಹೋಗಿ ತಲುಪಲಿದೆ, ಎಷ್ಟು ಪಸರಿಸಲಿದೆ, ಯಾವಾಗ ನಿಲ್ಲಲಿದೆ ಎನ್ನುವ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇದೇ ವೇಳೆಯಲ್ಲೇ ಈ ರೋಗ ಮಾರಣಾಂತಿಕವಲ್ಲ ಎನ್ನುವುದು ನಿಜವಾದರೂ ಪ್ರತಿಯೊಂದು ಜೀವವೂ ಅಮೂಲ್ಯವಾದ್ದರಿಂದ ಸಾವನ್ನು ಅಂಕಿಯಲ್ಲಿ ಅಳೆಯುವುದು ತರವಾಗದು. ಈಗಾಗಲೇ ದೇಶದಲ್ಲಿ 7 ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ ಎನ್ನುವುದು ನೆಮ್ಮದಿಯ ವಿಷಯವೇ ಆದರೂ ನಿತ್ಯ ಸೋಂಕಿತರ ಸಂಖ್ಯೆ 40 ಸಾವಿರ ದಾಟುತ್ತಿರುವುದು ಖಂಡಿತ ಚಿಂತೆಯ ವಿಷಯವೇ ಸರಿ.

ಈಗ ಗ್ರಾಮೀಣ ಭಾಗಗಳಲ್ಲೂ ಸೋಂಕಿತರ ಸಂಖ್ಯೆ ಏರುತ್ತಿದೆ. ಈ ಕಾರಣಕ್ಕಾಗಿಯೇ, ಎಲ್ಲ ರಾಜ್ಯ ಸರಕಾರಗಳೀಗ ತಮ್ಮ ಗಮನವನ್ನು ಗ್ರಾಮೀಣ ಭಾಗಗಳತ್ತ ಹೆಚ್ಚು ಹರಿಸಬೇಕಾದ ಅಗತ್ಯವಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.