ದೇವಸ್ಥಾನ ಕಾಯ್ದೆ ಪ್ರಶ್ನಿಸಿದ್ದ ಸ್ವಾಮಿ ಅರ್ಜಿ ವಜಾ
Team Udayavani, Jul 22, 2020, 6:20 AM IST
ಡೆಹ್ರಾಡೂನ್: ಬದರಿನಾಥ್, ಕೇದಾರನಾಥ್ ಸೇರಿದಂತೆ 51 ದೇಗುಲಗಳ ನಿರ್ವಹಣೆ ಸಂಬಂಧ ಉತ್ತರಾಖಂಡ ಸರಕಾರ ರೂಪಿಸಿದ್ದ ದೇವಸ್ಥಾನ ಕಾಯ್ದೆ ಪ್ರಶ್ನಿಸಿ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ.
ದೇಗುಲ ಆಡಳಿತವನ್ನು ವೃತ್ತಿಪರಗೊಳಿಸುವ ಉದ್ದೇಶದಿಂದ ತ್ರಿವೇಂದ್ರ ಸಿಂಗ್ ರಾವತ್ ಸರಕಾರ ಈ ಕಾಯ್ದೆ ಜಾರಿ ಮಾಡಿತ್ತು.
ಸ್ವಾಮಿ ತಮ್ಮ ಅರ್ಜಿಯಲ್ಲಿ, ಧಾರ್ಮಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಸರಕಾರಕ್ಕೆ ಯಾವುದೇ ಹಕ್ಕಿಲ್ಲ.
ಈ ಕಾಯ್ದೆ ಅಸಾಂವಿಧಾನಿಕ, ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಆಕ್ಷೇಪಿಸಿದ್ದರು.
ಹೈಕೋರ್ಟ್ ಅರ್ಜಿ ವಜಾಗೊಳಿಸುತ್ತಿದ್ದಂತೆ ಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ‘ಹೈಕೋರ್ಟ್ ನಲ್ಲಿ ಸೋತ ಅನಂತರ ನನ್ನ ಹಿಂದಿನ ವಿಜಯಗಳಂತೆ ನಾನು ಸುಪ್ರೀಂ ಮೆಟ್ಟಿಲನ್ನು ಏರಿ ಗೆದ್ದುಬರುವೆ’ ಎಂದು ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು