ಯುನೆಸ್ಕೋ ಜೀವವಿಜ್ಞಾನದ ಮುಖ್ಯಸ್ಥರಾಗಿ ವಿಜಯಪುರದ ಡಾ. ಕುಶಾಲದಾಸ್ ನೇಮಕ
ಈ ಪ್ರತಿಷ್ಠಿತ ಹುದ್ದೆಗೆ ನೇಮಕಗೊಂಡ ಏಷ್ಯಾದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾದ ಕನ್ನಡಿಗ ಡಾ. ಕುಶಾಲ ದಾಸ್
Team Udayavani, Jul 22, 2020, 6:22 PM IST
ವಿಜಯಪುರ: ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥರಾಗಿ ವಿಜಯಪುರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಕುಶಾಲ ದಾಸ್ ನೇಮಕಗೊಂಡಿದ್ದಾರೆ.
ಇದರೊಂದಿಗೆ ಏಷ್ಯಾ ಖಂಡದಲ್ಲೇ ಈ ಸ್ಥಾನದ ಗೌರವ ಪಡೆದ ಮೊದಲಿಗ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ
ಜೀವ ವಿಜ್ಞಾನ ಪೀಠದಡಿ ಅಮೇರಿಕಾ, ಇಂಗ್ಲೆಂಡ್ ಸೇರಿದಂತೆ 18 ದೇಶಗಳ ವಿವಿಧ ವಿಶ್ವವಿದ್ಯಾನಿಲಯಗಳಿಗೆ ಸ್ನಾತಕೋತ್ತರ ಮತ್ತು ಪಿ.ಎಚ್.ಡಿ ಪಠ್ಯಕ್ರಮವನ್ನು ಸಿದ್ಧಪಡಿಸುವುದು ಸೇರಿದಂತೆ ಜೀವ ವಿಜ್ಞಾನ ಕ್ಷೇತ್ರದಲ್ಲಿ ಯುನೆಸ್ಕೋ ಕೈಗೊಳ್ಳಬೇಕಾದ ಹಲವು ಕ್ರಮಗಳನ್ನು ನೋಡಿಕೊಳ್ಳುವುದು ಈ ಹುದ್ದೆಯ ಜವಾಬ್ದಾರಿಯಾಗಿರಲಿದೆ.
ಈ ಹುದ್ದೆಗೆ ನೇಮಕಗೊಂಡ ಏಷ್ಯಾದ ಮೊದಲ ವ್ಯಕ್ತಿ ಡಾ.ಕುಶಾಲ ದಾಸ್ ಆಗಿದ್ದು, ಪಠ್ಯಕ್ರಮದ ಜೊತೆಗೆ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಮಸ್ಯೆಗಳನ್ನು ಪರಿಹರಿಸಲು ಈ ಪೀಠ ಮಾರ್ಗದರ್ಶನ ಮಾಡುತ್ತಲಿದೆ.
ಡಾ.ಕುಶಾಲ ದಾಸ್ ನೇಮಕ ಭಾರತೀಯ ವಿಜ್ಞಾನಿಯೊಬ್ಬರಿಗೆ ನೀಡಿದ ಗೌರವ ಎಂದು ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ, ಡೀಮ್ಡ್ ವಿಶ್ವವಿದ್ಯಾಲಯದ ಉಪಕುಪತಿ ಡಾ.ಎಂ.ಎಸ್.ಬಿರಾದಾರ ಅವರು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ