ಸೋಂಕು 75 ಸಾವಿರ, ಸಾವು 1,500 : ಬುಧವಾರ ದಾಖಲೆಯ 4,764 ಮಂದಿಗೆ ಸೋಂಕು 55 ಸಾವು


Team Udayavani, Jul 23, 2020, 6:05 AM IST

ಸೋಂಕು 75 ಸಾವಿರ, ಸಾವು 1,500 : ಬುಧವಾರ ದಾಖಲೆಯ 4,764 ಮಂದಿಗೆ ಸೋಂಕು 55 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಬುಧವಾರ ದಾಖಲೆಯ 4,764 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 55 ಸೋಂಕಿತರು ಸಾವಿಗೀಡಾಗಿದ್ದಾರೆ.

ಒಟ್ಟಾರೆ ಸೋಂಕು ಪ್ರಕರಣಗಳು 75 ಸಾವಿರದ ಗಡಿ ದಾಟಿದ್ದು, ಸಾವು ಕೂಡ 1,500ಕ್ಕೆ ತಲುಪಿವೆ. ಸಮಾಧಾನಕರವೆಂಬಂತೆ ಅತಿ ಹೆಚ್ಚು, ಅಂದರೆ 1,780 ಸೋಂಕಿತರು ಗುಣಮುಖರಾಗಿದ್ದಾರೆ.

ಸದ್ಯ ಸೋಂಕು ಪ್ರಕರಣಗಳ ಸಂಖ್ಯೆ 75,833, ಸಾವಿಗೀಡಾದವರು 1,519 ಹಾಗೂ ಗುಣಮುಖರಾದವರ ಸಂಖ್ಯೆ 27,239 ಆಗಿದೆ. 47,069 ಮಂದಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 618 ಮಂದಿ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ.

ಜು. 18ರಂದು 4,537 ಮಂದಿಗೆ ಸೋಂಕು ದೃಢಪಟ್ಟಿತ್ತು. ಆ ಬಳಿಕ ಒಂದೇ ದಿನ ಅತಿ ಹೆಚ್ಚು ಸೋಂಕು ಪ್ರಕರಣಗಳು ಬುಧವಾರ ದೃಢ ಪಟ್ಟಿವೆ. ಸೋಂಕು ಹೆಚ್ಚಳಕ್ಕೆ ಪರೀಕ್ಷೆ ಪ್ರಮಾಣ ಹೆಚ್ಚಳವಾಗಿರುವುದು ಪ್ರಮುಖ ಕಾರಣವಾಗಿದೆ.

ಮಂಗಳವಾರ 43 ಸಾವಿರ ಇದ್ದ ಸೋಂಕು ಪರೀಕ್ಷೆಗಳು ಒಂದೇ ದಿನದಲ್ಲಿ 48 ಸಾವಿರಕ್ಕೆ ಹೆಚ್ಚಳವಾಗಿವೆ. ದಿನದ ಅತಿ ಹೆಚ್ಚು ಸೋಂಕು ಪ್ರಕರಣಗಳು ಬೆಂಗಳೂರಿನಲ್ಲಿ 2,050 ಪತ್ತೆಯಾಗಿದ್ದು, 15 ಸೋಂಕಿತರ ಸಾವಾಗಿದೆ. ಬೆಂಗಳೂರಿನ ಒಟ್ಟಾರೆ ಪ್ರಕರಣಗಳು 36 ಸಾವಿರ ಹಾಗೂ ಸಾವು 735ಕ್ಕೆ ಏರಿದೆ.

ಎರಡು ಜಿಲ್ಲೆಯಲ್ಲಿ ದ್ವಿಶತಕ, ಎಂಟರಲ್ಲಿ ಶತಕ
ಬೆಂಗಳೂರು ಹೊರತುಪಡಿಸಿದರೆ ದಕ್ಷಿಣ ಕನ್ನಡ, ಕಲಬುರಗಿ, ಮೈಸೂರು, ಧಾರವಾಡ, ರಾಯಚೂರು ಬಳ್ಳಾರಿ, ಉಡುಪಿ, ಬಳ್ಳಾರಿಯಲ್ಲಿ ಸೋಂಕು ತೀವ್ರಗೊಂಡಿದೆ. ಈ ಜಿಲ್ಲೆಗಳಲ್ಲಿ ನಿತ್ಯ 100ಕ್ಕೂ ಹೆಚ್ಚು ಮಂದಿ ಸೋಂಕಿತರಾಗುತ್ತಿದ್ದಾರೆ.

ಬುಧವಾರ ಬೆಳಗಾವಿ ಮತ್ತು ಉಡುಪಿಯಲ್ಲಿ 200ಕ್ಕೂ ಹೆಚ್ಚು, ಕಲಬುರಗಿ, ದಕ್ಷಿಣ ಕನ್ನಡ, ಧಾರವಾಡ, ಮೈಸೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಹೆಚ್ಚು ಗುಣಮುಖ
ಎರಡು ದಿನಗಳಿಂದ ದಾಖಲೆ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಮಂಗಳವಾರ 1,664, ಬುಧವಾರ 1,780 ಮಂದಿ ಗುಣಮುಖರಾಗಿದ್ದಾರೆ. ಇವರಲ್ಲಿ ಅರ್ಧದಷ್ಟು  ಬೆಂಗಳೂರಿನವರು.

ವಾರದಲ್ಲಿ 28,000 ಸೋಂಕು
ರಾಜ್ಯದಲ್ಲಿ ಒಂದು ವಾರದಲ್ಲಿ ನಿತ್ಯ ಸರಾಸರಿ 4 ಸಾವಿರ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 28,580 ಜನರಿಗೆ ಸೋಂಕು ದೃಢಪಟ್ಟಿದೆ. ಜು.16ಕ್ಕೆ 50 ಸಾವಿರ ಗಡಿದಾಟಿದ್ದ ಸೋಂಕು ಆರು ದಿನದಲ್ಲಿಯೇ 75 ಸಾವಿರ ಗಡಿದಾಟಿದೆ. ಮೊದಲ 25 ಸಾವಿರ ಪ್ರಕರಣಗಳು ದೃಢಪಡಲು 119 ದಿನ ಹಿಡಿದಿತ್ತು. ಎರಡನೇ 25 ಸಾವಿರ ಪ್ರಕರಣಗಳು 10 ದಿನ ಮತ್ತು ಮೂರನೇ 25 ಸಾವಿರ ಪ್ರಕರಣಗಳು ಕೇವಲ ಆರು ದಿನದಲ್ಲಿ ದೃಢಪಟ್ಟಿವೆ.

ಸೋಂಕು ವಿವರ
1000   –    ಮೇ 15

10,000 –   ಜೂನ್‌ 24

25,000 –   ಜುಲೈ 6

50,000 –   ಜುಲೈ 16

75,000 –   ಜುಲೈ 22

ಸಾವಿನ ವಿವರ
100   –   ಜೂನ್‌ 17

500   –   ಜುಲೈ 10

1000 –   ಜುಲೈ 16

1500 –   ಜುಲೈ 22

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.