ಬೆಳ್ತಂಗಡಿ: ಕೋವಿಡ್ ಸೋಂಕಿಗೆ ಚಾರ್ಮಾಡಿ ಮಹಿಳೆ ಮೃತ, ತಾಲೂಕಿನಲ್ಲಿ 7ಕ್ಕೇರಿದ ಮೃತರ ಸಂಖ್ಯೆ
Team Udayavani, Jul 23, 2020, 12:45 PM IST
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಪಾಂಡಿಕಟ್ಟೆ ನಿವಾಸಿ 60 ವರ್ಷದ ಮಹಿಳೆಯೋರ್ವರು ಗುರುವಾರ ಕೋವಿಡ್-19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ.
ಇವರಿಗೆ ಉಸಿರಾಟದ ಸಮಸ್ಯೆ ಇದ್ದಿದ್ದರಿಂದ ಕಳೆದ ಮೂರು ದಿನಗಳ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಮನೆಯಲ್ಲೆ ಐಸೋಲೇಶನ್ ಗೆ ಒಳಪಡಿಸಲಾಗಿತ್ತು. ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮಹಿಳೆ ಮನೆಯಲ್ಲೆ ಮೃತಪಟ್ಟಿದ್ದಾರೆ.
ಗುರುವಾರ ಬೆಳಗ್ಗೆ ಕೋವಿಡ್ ವರದಿಯಲ್ಲಿ ಪಾಸಿಟಿವ್ ಎಂಬುದು ದೃಢಪಟ್ಟ ಹಿನ್ನೆಲೆ ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಸಹಿತ ಆರೋಗ್ಯ ಸಿಬಂದಿ ಭೇಟಿ ನೀಡಿದ್ದಾರೆ.
ಈ ಮೂಲಕ ತಾಲೂಕಿನಲ್ಲಿ ಒಟ್ಟು ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 7 ಕ್ಕೇರಿದೆ. ವೇಣೂರು ಚಾಲಕ, ಮಲವಂತಿಗೆ ಕೊಲ್ಲಿ ಧಾರ್ಮಿಕ ಮುಖಂಡ, ನೆರಿಯಾ ಚಾಲಕ, ಪಡಂಗಡಿ ನಿವಾಸಿ, ಕಣಿಯೂರು ನಿವಾಸಿ, ನಾರಾವಿ ಸೇರಿದಂತೆ ಇದೀಗ ಚಾರ್ಮಾಡಿ ಮಹಿಳೆ ಮೃತರಾಗಿದ್ದಾರೆ.
ರಾಜ್ಯ, ಹೊರರಾಜ್ಯ, ತಾಲೂಕು, ಹೊರ ದೇಶಗಳಿಂದ ಬಂದವರು ಸೇರಿ ಒಟ್ಟು 130 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ