ಕರಾವಳಿಯಲ್ಲಿ ನಿಷೇಧಿತ ‘ತುರಾಯಾ’ ಸ್ಯಾಟಲೈಟ್ ಫೋನ್ ಕರಿನೆರಳು ?
ಬೆಳಾಲು, ಕಿಲ್ಲೂರು, ಕಾರ್ಕಳದಲ್ಲಿ ಸಂಪರ್ಕ ಸಾಧಿಸಿದ ಅನುಮಾನ
Team Udayavani, Jul 23, 2020, 4:01 PM IST
ಬೆಳ್ತಂಗಡಿ: ಕರಾವಳಿಯಲ್ಲಿ ಸ್ಲೀಪರ್ ಸೆಲ್ ಗಳು ಸದ್ದಿಲ್ಲದೆ ಕಾರ್ಯಪ್ರಯತ್ನ ನಡೆಸುತ್ತಿದೆಯಾ ಎಂಬ ಅನುಮಾನಕ್ಕೆ ಮತ್ತಷ್ಟು ಸಾಕ್ಷೀಕರಿಸುವಂತೆ ಇದೀಗ ನಿಷೇಧಿತ ಸ್ಯಾಟಲೈಟ್ ಫೋನ್ಗಳು ಆಕ್ಟಿವ್ ಆಗಿರುವ ಕುರಿತು ರಾ ಏಜಿನ್ಸಿ ಸಿಗ್ನಲ್ ಪತ್ತೆಹಚ್ಚಿದೆ.
ಕಳೆದ ಮೂರು ದಿನಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು, 15 ದಿನಗಳ ಹಿಂದೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಕಿಲ್ಲೂರು ಹಾಗೂ ಕಾರ್ಕಳದ ಬಜಗೋಳಿ ಭಾಗಗಳಲ್ಲಿ ಆಗಾಗ ಸಾಟಲೈಟ್ ಫೋನ್ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತವೆ ಎಂದು ಗುಪ್ತಚರ ಸಂಸ್ಥೆ ಮಾಹಿತಿ ನೀಡಿದೆ.
ಕೊರಿಯಾ ದೇಶದ ತುರಾಯಾ ಬ್ರಾಂಡ್ನ ಸೆಟೆಲೈಟ್ ಫೋನ್ ಆ್ಯಕ್ಟಿವ್ ಆಗಿದ್ದು, ಕಳೆದ 6 ದಿನಗಳಲ್ಲಿ 2 ಬಾರಿ ಸ್ಯಾಟಲೈಟ್ ಫೋನ್ ಸಂಪರ್ಕವನ್ನ ಸಾಧಿಸುವ ಪ್ರಯತ್ನ ನಡೆದಿದೆ. ಈ ಸಂಬಂಧ ಗುಪ್ತಚರ ಹಾಗೂ ಆಂತರಿಕ ಭದ್ರತಾ ಇಲಾಖೆಯ ಅಧಿಕಾರಿಗಳು ತಮ್ಮ ತನಿಖೆಯನ್ನ ಮುಂದುವರಿಸಿವೆ.
2019 ರಲ್ಲಿ ಜೂನ್ ನಿಂದ ಆಗಸ್ಟ್ ಮಧ್ಯದಲ್ಲಿ ಬೆಳ್ತಂಗಡಿ ತಾಲೂಕಿನ ಗೋವಿಂದೂರಿನಲ್ಲಿ ಇಂತಹ ಘಟನೆ ನಡೆದಿತ್ತು. ಇಲ್ಲಿಗೆ ಅಧಿಕಾರಿಗಳು ಬಂದು ತನಿಖೆ ನಡೆಸಿ ಹೋಗಿದ್ದರು.
2008ರ ಮುಂಬೈ ದಾಳಿ ವೇಳೆ ಭಯೋತ್ಪಾದಕರು ‘ತುರಾಯಾ’ ಸ್ಯಾಟಲೈಟ್ ಫೋನ್ ಬಳಸಿದ್ದರು. ಈ ದಾಳಿ ನಂತರ ಭಾರತದಾದ್ಯಂತ ‘ತುರಾಯಾ’ ಸ್ಯಾಟಲೈಟ್ ಫೋನ್ ಗಳನ್ನು ನಿಷೇಧ ಮಾಡಲಾಗಿದೆ. ಇದೀಗ ಮಗದೊಮ್ಮೆ ಸ್ಯಾಟಲೈಟ್ ಫೋನ್ ಗಳು ಚಾಲೂ ಆಗಿರುವ ಕುರಿತು ಆಂತರಿಕ ಭದ್ರತಾ ದಳ ತನಿಖೆ ಮುಂದುವರೆಸಿರುವ ಕುರಿತು ಬಲ್ಲಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?
Online ವಂಚಕರಿದ್ದಾರೆ ಹುಷಾರ್..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ
ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ದಾಂಪತ್ಯದಲ್ಲಿ ಬಿರುಕು: ಶೀಘ್ರದಲ್ಲಿ ವಿಚ್ಚೇದನ?
Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ
CM ನಿವಾಸದಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕನಿಂದ ಹಲ್ಲೆ: ಸ್ವಾತಿ ಮಲಿವಾಲ್ ಆರೋಪ