ವರದಿ ಪಾಸಿಟಿವ್ ಬಂತು, ಇದನ್ನು ಕೇಳಿ ಆಘಾತಗೊಂಡು ವ್ಯಕ್ತಿ ಸಾವು ; ಆಮೇಲೆ ನೆಗೆಟಿವ್ ಬಂತು!


Team Udayavani, Jul 23, 2020, 8:07 PM IST

ವರದಿ ಪಾಸಿಟಿವ್ ಬಂತು, ಇದನ್ನು ಕೇಳಿ ಆಘಾತಗೊಂಡು ವ್ಯಕ್ತಿ ಸಾವು ; ಆಮೇಲೆ ನೆಗೆಟಿವ್ ಬಂತು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಗುರುವಾರ ವಿಚಿತ್ರ ಘಟನೆಯೊಂದು ನಡೆದಿರುವುದು ಇದೀಗ ವರದಿಯಾಗಿದೆ.

ತನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂಬ ಸುದ್ದಿ ಕೇಳಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು‌, ನಂತರ ಮರಣೋತ್ತರವಾಗಿ ನಡೆಸಿದ ಆಂಟಿಜನ್ RAPID ಪರೀಕ್ಷೆಯಲ್ಲಿ ಆ ವ್ಯಕ್ತಿಗೆ ಕೋವಿಡ್ ನೆಗೆಟಿವ್ ಎಂದು ವರದಿ ಬಂದಿದೆ.

ಇಲ್ಲಿನ ಭವಾನಿ ನಗರದ ನಿವಾಸಿ, 55 ವರ್ಷದ ಆಟೋ ಚಾಲಕರೊಬ್ಬರು ಜು.8ರಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಗುರುವಾರ ಬೆಳಿಗ್ಗೆ, ಅಂದರೆ 15 ದಿನಗಳ ನಂತರ ಆರೋಗ್ಯ ಇಲಾಖೆಯವರು ವ್ಯಕ್ತಿಗೆ ಕರೆ ಮಾಡಿ ನಿಮಗೆ ಪ್ರಯೋಗಾಲಯದ ವರದಿಯಲ್ಲಿ ಕೋವಿಡ್ 19 ಸೋಂಕು ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ ಮಾತ್ರವಲ್ಲದೇ ಎಲ್ಲಿಗೂ ಹೊರಹೋಗಬೇಡಿ ಮನೆಯಲ್ಲಿ ಇರಿ ಎಂದು ಹೇಳಿದ್ದಾರೆ.

ಇತ್ತ, ತನಗೆ ಪಾಸಿಟಿವ್ ಬಂದಿದೆ ಎಂದು ವಿಷಯ ತಿಳಿಯುತ್ತಲೇ ಗಾಬರಿಗೊಂಡ ಆ ವ್ಯಕ್ತಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಮತ್ತು ಒದ್ದಾಡುತ್ತಾ ಸ್ವಲ್ಪ ಹೊತ್ತಿನಲ್ಲೇ ಸಾವಿಗೀಡಾಗಿದ್ದಾರೆ. ಅಷ್ಟರಲ್ಲಿ ಕೋವಿಡ್ ಯೋಧರೂ ಸಹ ಈ ವ್ಯಕ್ತಿಯ ಮನೆಗೆ ತಲುಪಿದ್ದು, ಈ ಘಟನೆ ನೋಡಿ ಅವರೂ ಗಾಬರಿಗೊಂಡಿದ್ದಾರೆ.

ಇದನ್ನೂ ಓದಿ: ಜು.23: ರಾಜ್ಯದಲ್ಲಿ ನಿತ್ಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕೇರಿಕೆ; 97 ಸಾವು, 2071 ಚೇತರಿಕೆ

ಮೃತ ದೇಹವನ್ನು ಜಿಮ್ಸ್ ಆಸ್ಪತ್ರೆಗೆ ಸಾಗಿಸಿದ ಬಳಿಕ ಅಲ್ಲಿ ಮತ್ತೊಮ್ಮೆ ಆಂಟಿಜನ್ RAPID ಪರೀಕ್ಷೆ ನಡೆಸಲಾಗಿದೆ. ‌ಆಗ ಕೋವಿಡ್ ನೆಗೆಟಿವ್ ವರದಿ ತೋರಿಸಿದೆ ಎಂದು ಕಲಬುರಗಿ ತಾಲೂಕ ವೈದ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ತಿಳಿಸಿದ್ದಾರೆ.

ಹಿನ್ನೆಲೆ ಏನು?: ಈ ಹಿಂದೆ ಮೃತ ವ್ಯಕ್ತಿಯ ಅಳಿಯನಿಗೆ ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಹೀಗಾಗಿ ಇಡೀ ಕುಟುಂಬದದವರು ಜು.8ರಂದು ಗಂಟಲು ದ್ರವದ ಮಾದರಿ ನೀಡಿ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದರು. ಆದರೆ, 15 ದಿನಗಳಾದರೂ ವರದಿ ಬಗ್ಗೆ ಯಾರೂ ಏನೂ ಹೇಳಿರಲಿಲ್ಲ.‌

ಇದೀಗ ತನಗೆ ಕೋವಿಡ್ ಸೋಂಕು ಇದೆ ಎಂದು ಕೇಳಿಯೇ ಆಘಾತಗೊಂಡು ಸಾವಿಗೀಡಾದ ವ್ಯಕ್ತಿಯ ಮರಣೋತ್ತರ ಸೋಂಕು ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದು ಅವರ ಕುಟುಂಬ ಸದಸ್ಯರನ್ನು ಆಘಾತಕ್ಕೀಡುಮಾಡಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.