ಒತ್ತುವರಿ ರಸ್ತೆ ಸಂಚಾರಕ್ಕೆ ಮುಕ್ತ
Team Udayavani, Jul 24, 2020, 8:09 AM IST
ಶಿಡ್ಲಘಟ್ಟ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಾರ್ವಜನಿಕ ರಸ್ತೆಯ ಅಕ್ರಮ ಒತ್ತುವರಿಯನ್ನು ತಹಶೀಲ್ದಾರ್ ಕೆ.ಅರುಂಧತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿದೆ.
ತಾಲೂಕಿನ ಜಂಗಮಕೋಟೆ ಹೋಬಳಿ ಕಲ್ಯಾಪುರದಲ್ಲಿ ಕೆಲವರು ಸಾರ್ವಜನಿಕ ರಸ್ತೆಯನ್ನು ಅತಿಕ್ರಮಣ ಮಾಡಿ ಬೆಳೆಗಳನ್ನು ಇಡುತ್ತಿದ್ದರು. ಈ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳು, ತಹಶೀಲ್ದಾರ್ಗೆ ದೂರು ಸಲ್ಲಿಸಿ ಸಾರ್ವಜನಿಕ ರಸ್ತೆ ತೆರವುಗೊಳಿಸ ಬೇಕೆಂದು ಮನವಿ ಮಾಡಿದರು. ಅತಿಕ್ರಮಣಕಾರರು ತಮ್ಮ ಪ್ರಭಾವದಿಂದಾಗಿ ರಸ್ತೆ ತೆರವು ಗೊಳಿಸಲು ಮುಂದಾಗದಿರುವುದನ್ನು ಗಮನಿಸಿದ ಗ್ರಾಮಸ್ಥರು, ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ರಸ್ತೆ ಒತ್ತುವರಿ ತೆರವುಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ಮೇರೆಗೆ ತಹಶೀಲ್ದಾರ್ ಕೆ.ಅರುಂಧತಿ ಅಂತಿಮ ನೋಟಿಸ್ ನೀಡಿದರು. ಅತಿ ಕ್ರಮಣಕಾರರು ಯಾವುದೇ ಉತ್ತರ ನೀಡದ ಕಾರಣ, ಪೊಲೀಸ್ ರಕ್ಷಣೆಯಲ್ಲಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸಿದರು. ಕೆಲವರು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಿದರೆ, ಮುನಿಕೃಷ್ಣಪ್ಪ ಎಂಬುವರು ಅತಿಕ್ರಮಣದ ಜಾಗದಲ್ಲಿ ಬೆಳೆದಿದ್ದ ಅರ್ಧ ಟನ್ಗಳಷ್ಟು ಹಿಪ್ಪುನೇರಳೆ ಮಹಜರ್ ಮಾಡಿ ಕಟಾವು ಮಾಡಿ ಜೆಸಿಬಿಯಿಂದ ಅತಿಕ್ರಮಣ ಮಾಡಿದ್ದ ರಸ್ತೆಯನ್ನು ಅಧಿಕಾರಿಗಳು ತೆರವುಗೊಳಿಸಿದರು.
ಕಲ್ಯಾಪುರ ಮತ್ತು ರಾಳ್ಳಕುಂಟೆ ಮಧ್ಯೆ ಅತಿಕ್ರಮಣವಾಗಿದ್ದ ರಸ್ತೆಯನ್ನು ಸಾರ್ವ ಜನಿಕರ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಸಿಪಿಐ ಸುರೇಶ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಲಿಯಾ ಖತುಲ್ಲಾ, ಜಂಗಮಕೋಟೆ ರಾಜಸ್ವ ನಿರೀಕ್ಷಕ ಸುಪ್ರೀತ್ ಹಾಗೂ ಭೂಮಾಪನ ಇಲಾ ಖೆಯ ಅಧಿಕಾರಿಗಳು ಕಾರ್ಯಾಚರಣೆಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ