ಅರಬ್‌ ದೇಶಗಳಿಂದ ಕರಾವಳಿಗೆ ವಾಪಸು; 6,533 ಮಂದಿಯಲ್ಲಿ 435 ಪ್ರಯಾಣಿಕರಿಗೆ ಕೋವಿಡ್ ದೃಢ

ಎರಡೂವರೆ ತಿಂಗಳಲ್ಲಿ 40 ವಿಮಾನ ಆಗಮನ ; ಬಂದವರನ್ನು ಕ್ವಾರಂಟೈನ್‌ ಮಾಡಲಾಗಿದೆ

Team Udayavani, Jul 24, 2020, 1:21 PM IST

ಅರಬ್‌ ದೇಶಗಳಿಂದ ಕರಾವಳಿಗೆ ವಾಪಸು; 6,533 ಮಂದಿಯಲ್ಲಿ 435 ಪ್ರಯಾಣಿಕರಿಗೆ ಕೋವಿಡ್ ದೃಢ

ಸಾಂದರ್ಭಿಕ ಚಿತ್ರ

ಮಹಾನಗರ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಎಪ್ರಿಲ್‌ನಲ್ಲಿ ದೈನಂದಿನ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಂಡ ಬಳಿಕ ಮಧ್ಯ ಪ್ರಾಚ್ಯದ ಅರಬ್‌ ದೇಶಗಳಲ್ಲಿ ಸಿಲುಕಿದ್ದ ರಾಜ್ಯದ ಕರಾವಳಿ ಕನ್ನಡಿಗರನ್ನು ವಾಪಸ್‌ ಕರೆ ತರುವ ಕೇಂದ್ರ ಸರಕಾರದ “ವಂದೇ ಭಾರತ್‌ ಮಿಶನ್‌’ ಮತ್ತು ಖಾಸಗಿ ವೈಮಾನಿಕ ಸೇವೆಯಡಿ ಸುಮಾರು ಎರಡೂವರೆ ತಿಂಗಳಲ್ಲಿ ಮಂಗಳೂರಿಗೆ 40 ವಿಮಾನಗಳು ಬಂದಿದ್ದು, ಒಟ್ಟು 6,533 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.

ಸೌದಿ ಅರೇಬಿಯಾ, ದುಬಾೖ, ಕುವೈಟ್‌ ಸಹಿತ ಹಲವು ಕೊಲ್ಲಿ ದೇಶಗಳಿಂದ ಮೇ 12ರಿಂದ ಜು. 22ರ ತನಕ ಸಾವಿರಾರು ಮಂದಿ ತಾಯ್ನಾಡಿಗೆ ವಾಪಾಸಾಗಿದ್ದಾರೆ. ಈ ರೀತಿ ವಿದೇಶದಿಂದ ಬಂದ ಈ ಪ್ರಯಾಣಿಕರ ಪೈಕಿ (ಜು. 16ರ ತನಕ) 435 ಮಂದಿಯ ವರದಿ ಕೋವಿಡ್ ಪಾಸಿಟಿವ್‌ ಬಂದಿದೆ. ಜು. 21, 22ರಂದು ಮಸ್ಕತ್‌ನಿಂದ ಆಗಮಿಸಿದ 2 ವಿಮಾನಗಳಲ್ಲಿ ಬಂದಿಳಿದ 286 ಪ್ರಯಾಣಿಕರ ವರದಿ ಇನ್ನಷ್ಟೇ ಬರಬೇಕಾಗಿದೆ.

ಮೇ 12ರಿಂದ ಜುಲೈ 22ರ ವರೆಗಿನ ಎರಡೂವರೆ ತಿಂಗಳುಗಳ ಅವಧಿಯಲ್ಲಿ ಮಂಗಳೂರಿಗೆ ದುಬಾೖ, ಸೌದಿ ಮತ್ತು ಮಸ್ಕತ್‌ಗಳಿಂದ ಗರಿಷ್ಠ ಸಂಖ್ಯೆಯ ಕನ್ನಡಿಗರು ತಾಯ್ನಾಡಿಗೆ ಮರಳಿ ಬಂದಿದ್ದಾರೆ. ದುಬಾೖಯಿಂದ 17 ವಿಮಾನಗಳು ಬಂದರೆ, ಸೌದಿ ಅರೇಬಿಯಾ, ಮಸ್ಕತ್‌ನಿಂದ ತಲಾ 7, ಕುವೈಟ್‌, ದೋಹಾ- ಕತಾರ್‌, ಶಾರ್ಜಾಗಳಿಂದ ತಲಾ 2, ಅಬುಧಾಬಿ, ದಮಾಮ್‌, ಬಹ್ರೈನ್‌ ದೇಶಗಳಿಂದ ತಲಾ 1 ವಿಮಾನ ಬಂದಿದೆ. ಈ ಎಲ್ಲ ವಿಮಾನಗಳಲ್ಲಿ ಬಂದ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಪ್ರಯಾಣಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ, ನೆರೆಯ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಕೇರಳದ ಕಾಸರಗೋಡಿನವರೂ ಇದ್ದರು. ಪ್ರಾರಂಭಿಕ ಹಂತದಲ್ಲಿ ಬೇರೆ ಜಿಲ್ಲೆಯವರನ್ನೂ ಮಂಗಳೂರಿನಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದ್ದರೂ ಕ್ರಮೇಣ ದಕ್ಷಿಣ ಕನ್ನಡದವರನ್ನು ಹೊರತುಪಡಿಸಿ ಇತರ ಜಿಲ್ಲೆಗಳ ಪ್ರಯಾಣಿಕರನ್ನು ಅವರವರ ಜಿಲ್ಲೆಗಳಲ್ಲಿಯೇ ಕ್ವಾರಂಟೈನ್‌ಗೆ ಕಳುಹಿಸಲಾಗಿತ್ತು. ವಿಮಾನದಿಂದ ಇಳಿಯುವಾಗಲೇ ಪಾಸಿಟಿವ್‌ ಬಂದವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.

2 ವಿಮಾನಗಳಲ್ಲಿ ಯಾರೂ ಪಾಸಿಟಿವ್‌ ಇಲ್ಲ
ದುಬಾೖಯಿಂದ ಮೇ 20ರಂದು ಬಂದ 63 ಜನರ ಪೈಕಿ ಮತ್ತು ಜೂನ್‌ 18ರಂದು ಬಂದ 9 ಮಂದಿಯ ಪೈಕಿ ಯಾರೊಬ್ಬರಲ್ಲೂ ಪಾಸಿಟಿವ್‌ ಲಕ್ಷಣಗಳಿರಲಿಲ್ಲ.  ಪ್ರಾರಂಭದಲ್ಲಿ ಜಿಲ್ಲೆಗೆ ವಿದೇಶದಿಂದ ಬಂದವರಲ್ಲಿ ಮಾತ್ರ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೂ ಕ್ರಮೇಣ ಮತ್ತು ಇತ್ತೀಚಿನ ದಿನಗಳಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಹಾಗೂ ಪ್ರಾಥಮಿಕ ಸಂಪರ್ಕದ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ. ಬಹಳಷ್ಟು ಪಾಸಿಟಿವ್‌ ಪ್ರಕರಣಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದ ಪರಿಸ್ಥಿತಿ ಇದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.