ಸಮುದಾಯ ಭವನ ಕಾಮಗಾರಿಗೆ ಕ್ರಮ
Team Udayavani, Jul 25, 2020, 7:40 AM IST
ಮದ್ದೂರು: ಮಾದನಾಯಕನಹಳ್ಳಿ ಶ್ರೀಸಿದ್ದರಾಮೇಶ್ವರ ದೇವಾಲಯದ ಸಮುದಾಯ ಭವನ, ಕೆ.ಹೊನ್ನಲಗೆರೆ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.
ತಾಲೂಕಿನ ಕೆ.ಹೊನ್ನಲಗೆರೆ, ಮಾದನಾಯಕನಹಳ್ಳಿ ಹಾಗೂ ಬ್ಯಾಡರಹಳ್ಳಿಯ ಸಮುದಾಯ ಭವನ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಬ್ಯಾಡರಹಳ್ಳಿಯ ಮಾರುತಿ ಸಮುದಾಯ ಭವನ ನಿರ್ಮಾಣ ಹಾಗೂ ಕೆ.ಹೊನ್ನಲಗೆರೆ, ಭೀಮನಕೆರೆ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವು, ಕೆರೆ ಅಭಿವೃದ್ಧಿ ಜತೆಗೆ ಪ್ರವಾಸಿತಾಣವನ್ನಾಗಿಸಲು 5 ಕೋಟಿ ರೂ. ಮಂಜೂರಾಗಿದೆ. ವಾಯುವಿಹಾರ, ದೀಪದ ವ್ಯವಸ್ಥೆ ಇತರೆ ಕಾಮಗಾರಿಗಳು ನೆರವೇರಲಿದೆ ಎಂದರು.
ಮಾಜಿ ಶಾಸಕ ಬಿ.ರಾಮಕೃಷ್ಣ ಮಾತನಾಡಿ, ತಾವು ವಿಧಾನಪರಿಷರ್ ಸದಸ್ಯರಾಗಿದ್ದ ವೇಳೆ ಕೆ.ಹೊನ್ನಲಗೆರೆ ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳಿಗೆ ಅಗತ್ಯ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿತ್ತು. ಶಾಸಕರ ಅನುದಾನ ಸೇರಿದಂತೆ ವೈಯಕ್ತಿಕವಾಗಿ 80 ಲಕ್ಷ ರೂ.ಗಳ ಕಾಮಗಾರಿ ಕೈಗೊಂಡಿದ್ದಾಗಿ ವಿವರಿಸಿದರು. ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕಾಡಪ್ಪ, ತಾಪಂ ಮಾಜಿ ಸದಸ್ಯ ರಾಜೇಂದ್ರ ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್, ಸದಸ್ಯ ಟಿ.ಆರ್.ಗಿರೀಶ್, ಮಾಜಿ ಸದಸ್ಯ ಕೆಂಗಲ್ಗೌಡ, ಪಿಕಾರ್ಡ್ಬ್ಯಾಂಕ್ ನಿರ್ದೇಶಕ ಅಪ್ಪಾಜೀಗೌಡ, ಮುಖಂಡರಾದ ರಾಜಣ್ಣ, ನಿಂಗೇಗೌಡ, ಪುಟ್ಟಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ