16 ಗ್ರಾಮಗಳಿಗೆ ಕೋವಿಡ್ ಎಂಟ್ರಿ; ಸೋಂಕಿತರು 62ಕ್ಕೇರಿಕೆ


Team Udayavani, Jul 25, 2020, 8:22 AM IST

16 ಗ್ರಾಮಗಳಿಗೆ ಕೋವಿಡ್ ಎಂಟ್ರಿ; ಸೋಂಕಿತರು 62ಕ್ಕೇರಿಕೆ

ಕಲಘಟಗಿ: ಕೋವಿಡ್ ಮಹಾಮಾರಿ ಪಟ್ಟಣವೂ ಸೇರಿದಂತೆ ಹದಿನಾರು ಗ್ರಾಮಗಳಲ್ಲಿ ವಕ್ಕರಿಸಿದ್ದು, ಶುಕ್ರವಾರ ನಾಲ್ವರಿಗೆ ಸೋಂಕು ದೃಢಪಟ್ಟಿರುವುದರಿಂದ ಸೋಂಕಿತರ ಸಂಖ್ಯೆ ತಾಲೂಕಿನಲ್ಲಿ 62ಕ್ಕೆ ಏರಿದಂತಾಗಿದೆ.

ಮಿಶ್ರಿಕೋಟಿ ಗ್ರಾಮದಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಹೊರಠಾಣೆ ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ ಜಾಡಗೇರಿ ಓಣಿಯಲ್ಲಿ ಮೂವರಿಗೆ ಹಾಗೂ ಹೂಲಿಯವರ ಓಣಿಯಲ್ಲಿ ಈರ್ವರಿಗೆ ಕೋವಿಡ್ ಪಾಸಿಟಿವ್‌ ಕಂಡು ಬಂದಿರುವುದರಿಂದ ಎರಡೂ ಓಣಿಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಗಳಗಿಹುಲಕೊಪ್ಪ ಗ್ರಾಮದಲ್ಲಿ ಕಲ್ಲೂರವ ಓಣಿ, ಜೋಡಳ್ಳಿಯವರ ಓಣಿ ಹಾಗೂ ವಡ್ಡರ ಓಣಿಯಲ್ಲಿಯೂ ಒಬ್ಬೊಬ್ಬರಿಗೆ ಸೋಂಕು ಕಂಡು ಬಂದಿರುವುದರಿಂದ ಆ ಎಲ್ಲಾ ಓಣಿಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಅಲ್ಲಿನ ಗ್ರಾಪಂ ಕಾರ್ಯಾಲಯ ಹಾಗೂ ಆವರಣದಾದ್ಯಂತ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗಿದ್ದು, ಗ್ರಾಮದಾದ್ಯಂತ ಕ್ರಿಮಿನಾಶಕ  ಸಿಂಪಡಣೆ ಮಾಡಲಾಗಿದೆ. ಪಟ್ಟಣದಲ್ಲಿ ಶುಕ್ರವಾರ ಓರ್ವನಿಗೆ ಸೋಂಕು ದೃಢಪಟ್ಟಿರುವುದು ಸೇರಿದಂತೆ ಒಟ್ಟೂ 8 ಜನ ಸೋಂಕಿತರಲ್ಲಿ ಪೊಲೀಸ್‌ ಸಿಬ್ಬಂದಿ, ಹೊಸೂರ ಓಣಿ, ಹುಲಿಕಟ್ಟಿ ಮತ್ತು ಗಾಂಧಿನಗರದ ಓರ್ವ ವ್ಯಕ್ತಿ ಸೇರಿದಂತೆ ನಾಲ್ವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಬಿ.ಗುಡಿಹಾಳ, ದೇವಿಕೊಪ್ಪ, ಮುತ್ತಗಿ, ಹಿರೇಹೊನ್ನಿಹಳ್ಳಿ, ಗಂಜೀಗಟ್ಟಿ, ದಾಸ್ತಿಕೊಪ್ಪ, ಲಿಂಗನಕೊಪ್ಪ, ಜುಂಜುನಬೈಲ್‌, ಕುರುವಿನಕೊಪ್ಪ, ಕಾಡನ ಕೊಪ್ಪ, ಬೇಗೂರ, ಗಳಗಿಹುಲಕೊಪ್ಪ, ಮಿಶ್ರಿಕೋಟಿ ಹಾಗೂ ಕಲಘಟಗಿ ಪಟ್ಟಣದಲ್ಲಿಯೂ ಕೋವಿಡ್‌-19 ಆಕ್ರಮಣ ಮಾಡಿದಂತಾಗಿದೆ.  ಮುಂಜಾಗ್ರತಾ ಕ್ರಮ ಪಾಲಿಸುವುದರಿಂದ ಸಮುದಾಯದತ್ತ ಹರಡುವುದನ್ನು ನಿಲ್ಲಿಸಬೇಕಾಗಿದೆ.

ಕಲಘಟಗಿ ಸೋಂಕಿತರ ಲೆಕ್ಕಾಚಾರ :  62 ಸೋಂಕಿತರಲ್ಲಿ ಗಳಗಿಹುಲಕೊಪ್ಪದ 60 ವರ್ಷದ ಪುರುಷ ಹಾಗೂ ಬಿ.ಹುಲಿಕಟ್ಟಿ ಗ್ರಾಮದ 49 ವರ್ಷದ ಮಹಿಳೆ ಈವರೆಗೆ ಮೃತಪಟ್ಟಿದ್ದಾರೆ. ಅಲ್ಲದೇ ಸೋಂಕಿತರಲ್ಲಿ ಈರ್ವರು ಹೊರ ಜಿಲ್ಲೆಯವರು ಹಾಗೂ ನಾಲ್ವರು ಹೊರ ತಾಲೂಕಿನವರಾಗಿದ್ದಾರೆ. ಈವರೆಗೆ 33 ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. 21 ಜನ ಸಕ್ರಿಯ ಸೋಂಕಿತರಿದ್ದು, ಅವರಲ್ಲಿ 15 ಜನರನ್ನು ಕೇರ್‌ ಸೆಂಟರ್‌ನಲ್ಲಿ ಇರಿಸಲಾಗಿದೆ. ನಾಲ್ವರು ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಹಾಗೂ ಈರ್ವರಿಗೆ ಕ್ಯಾನ್ಸರ್‌ ಆಸ್ಪತ್ರೆಯಲ್ಲಿನ ಕೋವಿಡ್‌ -19 ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಲೂಕಾಸ್ಪತ್ರೆಯಲ್ಲಿ ಇದುವರೆಗೂ ಕೋವಿಡ್‌-19ರ ಸ್ವಾ ಬ್‌ ಕಲೆಕ್ಷನ್‌ ಮಾಡಲಾಗುತ್ತಿತ್ತು. ಶುಕ್ರವಾರದಂದು ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ ಕೂಡಾ ಆರಂಭಿಸಲಾಗಿದ್ದು, ಪ್ರಥಮ ದಿನದಂದು ಐವರ ಟೆಸ್ಟ್‌ ಮಾಡಲಾಗಿದೆ. ಅದರಲ್ಲಿ ನಾಲ್ವರ ರಿಪೋರ್ಟ್‌ ನೆಗೆಟಿವ್‌ ಬಂದಿದೆ. ಆದರೆ ಓರ್ವ ವ್ಯಕ್ತಿಯ ರಿಪೋರ್ಟ್‌ ಪಾಸಿಟಿವ್‌ ಬಂದಿದ್ದು, ಸೋಂಕಿತ ವ್ಯಕ್ತಿಯನ್ನು ತಕ್ಷಣ ಅಂಚಟಗೇರಿಯಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಕಳುಹಿಸಲಾಗಿದೆ. – ಡಾ| ಬಸವರಾಜ ಬಾಸೂರ, ವೈದ್ಯಾಧಿಕಾರಿ

ಟಾಪ್ ನ್ಯೂಸ್

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.