ವೀರ ಯೋಧರಿಗೆ ಪರಿಸರ ಸ್ನೇಹಿರಾಖೀ, ಗ್ರೀಟಿಂಗ್ ಕಳಿಸಲು ಸಿದ್ಧತೆ
Team Udayavani, Jul 25, 2020, 9:48 AM IST
ವಿಜಯಪುರ: ದೇಶದ ಗಡಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಭಾರತದ ಹೆಮ್ಮೆಯ ಸೈನಿಕರಿಗೆ ಗ್ರೀಟಿಂಗ್ ಕಾರ್ಡ್ ಮತ್ತು ಪರಿಸರ ಸ್ನೇಹಿ ರಾಖೀ ಕಳಿಸಲು ಲೀಡರ್ಸ್ ಎಕ್ಸ್ಲ್ರೇಟಿಂಗ ಡೆವಲೆಪಮೆಂಟ್ ಪ್ರೋಗ್ರಾಂ ಅಡಿಯಲ್ಲಿ ವಿದ್ಯಾರ್ಥಿಗಳು ಬಣ್ಣ ಬಣ್ಣದ ಗ್ರೀಟಿಂಗ್ ಸಿದ್ಧತಾ ಅಭಿಯಾನಕ್ಕೆ ಮುಂದಾಗಿದ್ದಾರೆ.
ಜು. 26ರ ಕಾರ್ಗಿಲ್ ವಿಜಯೋತ್ಸವ ನಿಮಿತ್ತ ಭಾರತೀಯ ವೀರ ಯೋಧರಿಗೆ ಶುಭಾಶಯ ಕೋರುವ ಗ್ರೀಟಿಂಗ್ ಕಾರ್ಡ್ ಜೊತೆಗೆ ಭ್ರಾತೃತ್ವ ಸಾರುವ ರಕ್ಷಾಬಂಧನ ಪ್ರಯುಕ್ತ ಧಾನ್ಯಗಳು ಮತ್ತು ಹಣ್ಣಿನ ಬೀಜ ಬಳಸಿ ಪರಿಸರ ಸ್ನೇಹಿ ರಕ್ಷಾ ದಾರಗಳನ್ನು ರೂಪಿಸುವ ಕೆಲಸದಲ್ಲಿ ತೊಡಗಿದ್ದಾರೆ.
ಅಭಿಯಾನ ಸಂಚಾಲಕ ಪ್ರಮೋದ ಹುಕ್ಕೇರಿ ಮಾತನಾಡಿ, ನಾವು ಆಯೋಜಿಸಿರುವ ಅಭಿಯಾನಕ್ಕೆ ಈಗಾಗಲೇ 50ಕ್ಕೂ ವಿದ್ಯಾರ್ಥಿಗಳು ಮನೆಯಲ್ಲಿ ಇದ್ದುಕೊಂಡೇ ಜೋಳ, ಗೋಧಿ , ಹಣ್ಣಿನ ಬೀಜ ಬಳಸಿ 500ಕ್ಕೂ ಹೆಚ್ಚು ಪರಿಸರಸ್ನೇಹಿ ರಾಖೀ ರಕ್ಷೆ, ಶುಭಾಶಯ ಪತ್ರ ಸಿದ್ಧತೆ ಮಾಡುತ್ತಿದ್ದಾರೆ ಎಂದರು.
ಲೀಡ್ ಕಾರ್ಯಕ್ರಮ ಅಧಿಕಾರಿ ಸಂತೋಷ ಬಿರಾದಾರ ಮಾತನಾಡಿ, ಕೋವಿಡ್ ಲಾಕ್ಡೌನ್ ಸಮಯದಲ್ಲಿ ವಿದ್ಯಾರ್ಥಿಗಳು ಮನೆಯಲ್ಲೇ ಇದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಲೀಡ್ ಸಂಸ್ಥೆ ಕ್ರಿಯಾತ್ಮಕ ಚಟುವಟಿಕೆ ಹಮ್ಮಿಕೊಂಡಿದೆ. ಈ ವರ್ಷ ವಿದ್ಯಾರ್ಥಿಗಳು ತಾವೇ ಮನೆಯಲ್ಲಿದ್ದು ಸ್ವಯಂ ತಯಾರಿಸಿದ ರಾಖೀಯನ್ನು ಸೈನಿಕರಿಗೆ ಕಳುಹಿಸುವ ಯೋಜನೆ ರೂಪಿಸಲಾಗಿದೆ. ಇದು ನಮ್ಮ ಮಟ್ಟಿಗೆ ವಿಶಿಷ್ಟ ಅನುಭವ ನೀಡುತ್ತಿದೆ ಎಂದರು.
ಬಿಎಲ್ಡಿಇ ಎಂಜಿನಿಯರಿಂಗ್ ಮಹಾವಿದ್ಯಾಲಯದ ಉಪನ್ಯಾಸಕ ಗೋವಿಂದ ಮದಭಾವಿ ಹಾಗೂ ಬಿಎಲ್ಡಿಇ ಎಂಜನಿಯರಿಂಗ್ ಕಾಲೇಜು, ಶಾಂತವೀರ ಕಲಾ-ವಾಣಿಜ್ಯ ಕಾಲೇಜು, ಸಿದ್ದೇಶ್ವರ ಚಿತ್ರಕಲಾ ಮಹಾವಿದ್ಯಾಲಯ, ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ