ಆದೇಶ ಉಲ್ಲಂಘನೆ: ವಾಹನಗಳ ವಶ
Team Udayavani, Jul 25, 2020, 12:05 PM IST
ಶಿವಮೊಗ್ಗ: ಲಾಕ್ಡೌನ್ ಅವಧಿಯಲ್ಲಿ ಆದೇಶ ಉಲ್ಲಂಘಿಸಿದ 10,992 ವಾಹನಗಳ ವಿರುದ್ಧ ಐಎಂವಿ ಕಾಯಿದೆ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಹೇಳಿದರು.
ಶುಕ್ರವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಕ್ಕೆ 257 ಪ್ರಕರಣ ದಾಖಲಿಸಿದ್ದು, 656 ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಲಾಕ್ಡೌನ್ ಆದೇಶ ಉಲ್ಲಂಘನೆ ಬಗ್ಗೆ 89, ಕ್ವಾರಂಟೈನ್ ಉಲ್ಲಂಘಿಸಿದ್ದಕ್ಕೆ 11, ಜೂಜಾಟದ 93 ಹಾಗೂ ಅಕ್ರಮ ಮದ್ಯ ಮಾರಾಟದ 64 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಕ್ವಾರಂಟೈನ್ ಆದೇಶ ಉಲ್ಲಂಘಿಸಿದ 17 ಜನರು ಹಾಗೂ ನೈಟ್ ಕರ್ಫ್ಯೂ ಉಲ್ಲಂಘಿಸಿದ 41 ಜನರ ವಿರುದ್ಧ ಕಲಂ 51(ಬಿ) ಎನ್ಡಿಎಂಎ ಕಾಯಿದೆ ಅಡಿ ಪ್ರಕರಣಗಳನ್ನು ದಾಖಲಾಗಿದೆ. ಸೀಗೇಹಟ್ಟಿ, ಬಿಬಿ ಸ್ಟ್ರೀಟ್ನಲ್ಲಿ ಒಂದು ಆಟೋ ರಿûಾಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಮಿಳಘಟ್ಟದ ಸ್ಟೀಫನ್ (22), ಆಶ್ರಯ ಬಡಾವಣೆಯ ಮೆಹಬೂಬ್ (34), ಅಣ್ಣಾನಗರದ ಮುಬಾರಕ್ (27) ಅವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿ ನಿಲ್ಲಿಸಿದ ಎರಡು ದ್ವಿಚಕ್ರ ವಾಹನಗಳನ್ನು ಬೆಂಕಿ ಹಚ್ಚಿದ್ದ ಇಬ್ಬರು ಆರೋಪಿಗಳನ್ನು ಬಂ ಸಲಾಗಿದೆ. ತಿರುಪಯ್ಯನಬೀದಿಯ ಚೇತನ್ ಅಲಿಯಾಸ್ ಬ್ರಿಟೀಶ್ (30), ಗುರುರಾಜ್ (20) ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಎಎಸ್ಪಿ ಎಚ್.ಟಿ. ಶೇಖರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು