ನನ್ನ ವಿರುದ್ಧ ಕಾಣದ ಗುಂಪೊಂದು ಕೆಲಸ ಮಾಡುತ್ತಿವೆ : ಎ.ಆರ್‌.ರೆಹಮಾನ್‌ ಇಂಗಿತ


Team Udayavani, Jul 25, 2020, 9:56 PM IST

ನನ್ನ ವಿರುದ್ಧ ಕಾಣದ ಕೈಗಳು ಕೆಲಸ ಮಾಡುತ್ತಿವೆ : ಎ.ಆರ್‌.ರೆಹಮಾನ್‌ ಇಂಗಿತ

ಮುಂಬೈ: ಎಆರ್‌ ರೆಹಮಾನ್‌ ಅವರು ಸಂಗೀತ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕ. ಅಂತವರಿಗೇ ಅವಕಾಶಗಳ ಕೊರತೆಯಾಗುತ್ತಿದೆ ಎಂದರೆ ಆಶ್ಚರ್ಯವಲ್ಲವೆ. ಇತ್ತೀಚಿನ ಕೆಲವು ವರ್ಷಗಳಿಂದ ಈ ಸಂಗೀಯ ನಿರ್ದೇಶಕನಿಗೆ ಸಿಗುವ ಸಿನೇಮಾಗಳ ಸಂಖ್ಯೆಯಲ್ಲಿ ಭಾರೀ ಕುಸಿತವಾಗಿದೆ. ಇದಕ್ಕೆ ಅವರು ತನ್ನ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವ ಗ್ಯಾಂಗ್‌ ಇದೆ. ಆದ್ದರಿಂದ ತಮಗೆ ಅವಕಾಶಗಳ ಕೊರತೆಯಾಗುತ್ತದೆ ಎಂದು ದೂರಿದ್ದಾರೆ.

ರೇಡಿಯೊ ಮಿರ್ಚಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಹೀಗೆ ತಮ್ಮ ವಿಷಾದ ವ್ಯಕ್ತ ಪಡಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆ ಸಂಖ್ಯೆಯ ಬಾಲಿವುಡ್‌ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದೇನೆ. ಕೆಲವು ದಿನಗಳ ಹಿಂದೆ ಸುಶಾಂತ್‌ ಸಿಂಗ್‌ ರಜಪೂತ್‌ ಅವರ “ದಿಲ್‌ ಬೆಚರಾ’ ಚಿತ್ರದ ಹಂಸಗೀತೆಗೆ ನಾನು ಸಂಗೀತ ಸಂಯೋಜಿಸಿದ್ದೇನೆ. ನಾನು ಒಳ್ಳೆಯ ಚಲನಚಿತ್ರಗಳನ್ನು ಯಾವತ್ತೂ ತಿರಸ್ಕರಿಸಿಲ್ಲ, ಆದರೆ ಒಂದು ಗ್ಯಾಂಗ್‌ ಇದೆೆ, ಅದು ತಪ್ಪು ಗ್ರಹಿಕೆಯಿಂದಾಗಿ ಸುಳ್ಳು ವದಂತಿಗಳನ್ನು ಹರಡುತ್ತಿದೆ ಎಂದಿದ್ದಾರೆ.

ಮುಖೇಶ್‌ ಛಹಾಬ್ರಾ ನನ್ನ ಬಳಿಗೆ ಬಂದಾಗ, ನಾನು ಅವರಿಗೆ ಎರಡು ದಿನಗಳಲ್ಲಿ ನಾಲ್ಕು ಹಾಡುಗಳನ್ನು ನೀಡಿದೆ. ಆ ಸಂದರ್ಭದ ಮಾತುಕತೆಯಲ್ಲಿ “ಸರ್‌, ತುಂಬಾ ಜನರು ನಿಮ್ಮ ಬಳಿ ಹೋಗಬೇಡಿ ಅಂದಿದ್ದರು, ಆದರೂ ನಮ್ಮದೇ ಹಾಡು ಈ ಚಿತ್ರಕ್ಕೆ ಅಗತ್ಯವಾಗಿತ್ತು’ ಅಂದಿದ್ದರು. ಹೀಗಾಗಿ ನನಗೆ ಆಗ ಮನವರಿಕೆ ಆಯಿತು. ಯಾಕೆ ಚಿತ್ರಗಳು ನಮ್ಮ ಬಳಿಗೆ ಸಂಗೀತ ಸಂಯೋಜನೆಗಾಗಿ ಬರುತ್ತಿಲ್ಲವೆಂದು.

ಯಾಕಾಗಿ ಹೀಗೆ ಮಾಡುತ್ತಾರೋ ಗೊತ್ತಿಲ್ಲ. ನಾನು ಕೆಲಸವನ್ನು ನಂಬುತ್ತೇನೆ ಮತ್ತು ಎಲ್ಲವೂ ದೇವರಿಂದ ಬಂದಿದೆ ಎಂದು ನಾನು ನಂಬುತ್ತೇನೆ. ಉತ್ತಮ ಚಲನಚಿತ್ರಗಳಿಗೆ ಯಾವತ್ತೂ ನಿಮಗೆ ಸ್ವಾಗತ’ ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಕಾಣದ ಕೈಗಳು ಉತ್ತಮ ಪ್ರತಿಭೆಗೆ ಅಡ್ಡಗಾಲು ಹಾಕಿ, ಅವರನ್ನು ಕುಗ್ಗಿಸುವ ಕಾರ್ಯ ಬಾಲಿವುಡ್‌ನ‌ಲ್ಲಿ ನಡೆಯುತ್ತಲೇ ಇರುತ್ತದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹೀಗೆ ಮಾಡುವುದು ಯಾವತ್ತಿಗೂ ಶ್ರೇಯಸ್ಕರವಲ್ಲ. ಅದು ಭಾರತೀಯ ಚಿತ್ರರಂಗದ ಸಂಗೀತಕ್ಕೆ ಮಾಡುವ ನಷ್ಟವಾಗಿದೆ.

ಟಾಪ್ ನ್ಯೂಸ್

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.