ಕೋವಿಡ್ ಪ್ರಕರಣ ವೃದ್ಧಿಸುವ ಸಾಧ್ಯತೆ ಕಡಿಮೆ: ಹಾಲಪ್ಪ


Team Udayavani, Jul 26, 2020, 2:28 PM IST

ಕೋವಿಡ್ ಪ್ರಕರಣ ವೃದ್ಧಿಸುವ ಸಾಧ್ಯತೆ ಕಡಿಮೆ: ಹಾಲಪ್ಪ

ಸಾಗರ: ಕೋವಿಡ್ ಪ್ರಕರಣ ಹೆಚ್ಚುವ ಸಾಧ್ಯತೆ ಕಡಿಮೆ ಇದೆ. ಆದರೂ ನಮ್ಮ ಜಾಗ್ರತೆಯಲ್ಲಿ ನಾವಿರಬೇಕು. ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ತಿಳಿಸಿರುವ ಹಿನ್ನೆಲೆಯಲ್ಲಿ ಗೊಂದಲದ ಅಗತ್ಯವಿಲ್ಲ ಎಂದು ಶಾಸಕ ಎಚ್‌. ಹಾಲಪ್ಪ ಹರತಾಳು ತಿಳಿಸಿದರು.

ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್‌-19 ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ರಚನೆಯಾಗಿರುವ ಟಾಸ್ಕ್ ಫೋರ್ಸ್‌ಗಳು ಸಾಗರದಲ್ಲಿಯೂ ಉತ್ತಮ ಕೆಲಸ ಮಾಡುತ್ತಿವೆ. ಹಾಗಾಗಿ ತಾಲೂಕಿನಲ್ಲಿ ಕೋವಿಡ್ ಪ್ರಕರಣ ಕಡಿಮೆ ಇದೆ ಎಂದರು.

ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್‌ ತುರ್ತು ಚಿಕಿತ್ಸಾ ಘಟಕ ಸ್ಥಾಪನೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಗೀಸರ್‌ ಸೇರಿದಂತೆ ರೋಗಿಗಳಿಗೆ ಬೇಕಾದ ಸೌಲಭ್ಯಗಳನ್ನು ತಕ್ಷಣದಿಂದ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು. ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಇರುವವರ ಬೇಕು- ಬೇಡಗಳನ್ನು ಕಾಲ- ಕಾಲಕ್ಕೆ ಪರಿಶೀಲಿಸಿ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹಾಲಪ್ಪ ಸೂಚನೆ ನೀಡಿದರು.

ಸಾಗರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್‌ ಎಲ್‌. ಮಾತನಾಡಿ, ಕಂಟೈನ್ಮೆಂಟ್‌ ಝೋನ್‌ ಗಳಲ್ಲಿರುವವರನ್ನು ಕಾಲ- ಕಾಲಕ್ಕೆ ಗಮನಿಸಲು ತಹಶೀಲ್ದಾರ್‌, ಪೌರಾಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೋವಿಡ್‌ ಹೆಲ್ತ್‌ಕೇರ್‌ ಸೆಂಟರ್‌ ಪ್ರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಹುತೇಕ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಿನಲ್ಲಿ ವೈರಸ್‌ ಪ್ರಮಾಣ ಕುಗ್ಗುವ ಸಾಧ್ಯತೆ ಇದ್ದು, ಅಲ್ಲಿಯವರೆಗೆ ಸೋಂಕು ಸಮೂಹಕ್ಕೆ ಹರಡದಂತೆ ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಜೂಜಾಟ ಅಡ್ಡೆಯಾಗಿದೆ: ಇದೇ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಉಪವಿಭಾಗೀಯ ಆಸ್ಪತ್ರೆಯ ಒಂದು ಭಾಗದಲ್ಲಿ ಕೆಲವರು ಆಂಬ್ಯುಲೆನ್ಸ್‌ನಿಲ್ಲಿಸಿಕೊಂಡು ಮೊಬೈಲ್‌ ಜೂಜಾಟದಲ್ಲಿ ತೊಡಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಈ ಗುಂಪುಗಳ ನಡುವೆ ಮಾರಾಮಾರಿ ಸಹ ನಡೆದಿದೆ. ಈ ಬಗ್ಗೆ ಪೊಲೀಸ್‌ ಇಲಾಖೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ, ಡಿವೈಎಸ್‌ಪಿ ವಿನಾಯಕ್‌ ಎಸ್‌. ಶೆಟ್ಟಿಗಾರ್‌, ಪೌರಾಯುಕ್ತ ಎಚ್‌.ಕೆ. ನಾಗಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ. ಕಮ್ಮಾರ್‌, ಕ್ಷೇತ್ರ ಶಿಕ್ಷಣಾ ಧಿಕಾರಿ ಬಿಂಬ ಕೆ.ಆರ್‌., ಪ್ರಕಾಶ್‌ ಬೋಸ್ಲೆ, ಗ್ರಾಮಾಂತರ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಸುನೀಲಕುಮಾರ್‌, ನಗರ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ತುಕಾರಾಮ್‌ ಸಾಗರಕರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.