ಕೊವಾಕ್ಸಿನ್ ತಂದ ಭರವಸೆಯ ಫಲಿತಾಂಶ ; ಪ್ರಯೋಗದ ಮೊದಲ ಹಂತದ ಆರಂಭಿಕ ಭಾಗ ಪೂರ್ಣ
Team Udayavani, Jul 27, 2020, 8:18 AM IST
ಹೊಸದಿಲ್ಲಿ: ಮೊತ್ತಮೊದಲ ದೇಶೀಯ ಕೋವಿಡ್ ಲಸಿಕೆ ಕೊವಾಕ್ಸಿನ್ನನ್ನು ಮಾನವನ ಮೇಲೆ ಪ್ರಯೋಗಿಸುವ ಮೊದಲ ಹಂತದ ಆರಂಭಿಕ ಭಾಗವನ್ನು ಹರಿಯಾಣದ ರೋಹrಕ್ನ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ (ಪಿಜಿಐ)ಯು ಪೂರ್ಣ ಗೊಳಿಸಿದೆ. ಪರೀಕ್ಷೆ ಯಲ್ಲಿ ಭರವಸೆಯ ಮತ್ತು ಉತ್ತೇಜನಕಾರಿ ಫಲಿತಾಂಶ ದೊರೆ ತಿರುವು ದಾಗಿ ಸಂಸ್ಥೆ ಹೇಳಿಕೊಂಡಿದೆ.
ಕೊವಾಕ್ಸಿನ್ನ ಮೊದಲ ಮತ್ತು ಎರಡನೇ ಹಂತದ ಪ್ರಯೋಗ ಪೂರ್ಣಗೊಳ್ಳಲು ಒಂದು ವರ್ಷ ಮೂರು ತಿಂಗಳು ಬೇಕಾಗ ಬಹುದು ಎಂದು ಸಿಟಿಆರ್ಐ (ಕ್ಲಿನಿಕಲ್ ಟ್ರಯಲ್ಸ್ ರಿಜಿಸ್ಟ್ರಿ ಆಫ್ ಇಂಡಿಯಾ) ಹೇಳಿದೆ.
ಮೊದಲ ಹಂತದ ಪ್ರಯೋಗದ ಆರಂಭಿಕ ಭಾಗವನ್ನು ಜು. 17ರಂದು ಆರಂಭಿಸಲಾಗಿತ್ತು. 50 ಮಂದಿಯ ಮೇಲೆ ಲಸಿಕೆ ಯನ್ನು ಪ್ರಯೋಗಿಸಲಾಗಿತ್ತು. ಈಗ ಮೊದಲ ಹಂತದ ಎರಡನೇ ಭಾಗ ಆರಂಭವಾಗಿದ್ದು, 6 ಮಂದಿಯ ಮೇಲೆ ಪ್ರಯೋಗಿಸಲಾಗಿದೆ ಎಂದು ಲಸಿಕೆ ಪ್ರಯೋಗ ತಂಡದ ಪ್ರಧಾನ ತನಿಖಾಧಿಕಾರಿ ಡಾ| ಸವಿತಾ ವರ್ಮಾ ಹೇಳಿದ್ದಾರೆ. ಇತ್ತೀಚೆಗಷ್ಟೇ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ 30 ವರ್ಷದ ವ್ಯಕ್ತಿಯ ಮೇಲೆ ಕೊವಾಕ್ಸಿನ್ ಮೊದಲ ಡೋಸ್ ಪ್ರಯೋಗಿಸಲಾಗಿತ್ತು. 2 ವಾರಗಳ ಕಾಲ ಆ ವ್ಯಕ್ತಿಯ ಮೇಲೆ ನಿಗಾ ಇರಿಸಿ, ಅನಂತರ ಎರಡನೇ ಡೋಸ್ ಪ್ರಯೋಗಿಸಲಾಗುತ್ತದೆ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್) ಮತ್ತು ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ) ಜತೆ ಸೇರಿ ಕೊವಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ