ಮೀನುಗಾರಿಕೆಗೆ ವಿಫುಲ ಅವಕಾಶ
Team Udayavani, Jul 27, 2020, 8:46 AM IST
ಕೋಲಾರ: ಜಿಲ್ಲೆಯ ಕೆರೆಗಳಿಗೆ ಕೆ.ಸಿ. ವ್ಯಾಲಿ ನೀರು ಭರ್ತಿಯಾಗುತ್ತಿರುವುದರಿಂದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ ಎಂದು ಇಲಾಖೆಯ ನಿರ್ದೇಶಕ ಆರ್. ರಾಮಕೃಷ್ಣ ತಿಳಿಸಿದರು.
ಜುಲೈ ಅಂತ್ಯಕ್ಕೆ ಸೇವೆಯಿಂದ ನಿವೃತ್ತರಾಗುತ್ತಿರುವ ಕಾರಣ, ನಗರದ ಮೀನುಗಾರಿಕೆ ಇಲಾಖೆ ಆವರಣದಲ್ಲಿ ಸಿಬ್ಬಂದಿ ಹಾಗೂ ಮೀನು ಕೃಷಿಕರು ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕೃಷಿಯಲ್ಲಿ ಲಾಭಗಳಿಸಲು ಸೋತಿರುವ ರೈತರು, ಒಳನಾಡು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡು ಜೀವನೋಪಾಯ ಕಂಡುಕೊಳ್ಳಬಹುದಾಗಿದೆ. ಗ್ರಾಮೀಣ ನಿರುದ್ಯೋಗಿ ಗಳು, ರೈತರು ಮೀನುಗಾರಿಕೆ ಇಲಾಖೆಯ ಮಾರ್ಗ ದರ್ಶನ ಹಾಗೂ ಸೌಲಭ್ಯ ಪಡೆದು, ಮೀನು ಸಾಕಾಣಿಕೆ ಯಲ್ಲಿ ತೊಡಗಿಸಿಕೊಂಡು ಆರ್ಥಿಕ ವಾಗಿ ಸಬಲರಾಗುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಮೀನುಮರಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇತಮಂಗಲ ಹಾಗೂ ಮಾರ್ಕಂ ಡಯ್ಯ ಜಲಾಶಯದ ಮೀನುಮರಿ ಉತ್ಪಾದನಾ ಕೇಂದ್ರಗಳ ಅಭಿವೃದ್ಧಿ ಸೇರಿ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ಪ್ರಗತಿ ಕಾರ್ಯಗಳಿಗೆ 10 ಕೋಟಿ ರೂ. ಬಿಡು ಗಡೆ ಮಾಡಲಾಗಿದೆ ಎಂದು ನಿರ್ದೇಶಕ ತಿಳಿಸಿದರು.
ಬೆಂಗಳೂರು ವಿಭಾಗೀಯ ಮೀನುಗಾರರ ಸಹಕಾರ ಒಕ್ಕೂಟದ ಉಪಾಧ್ಯಕ್ಷರಾದ ಅ.ಮು.ಲಕ್ಷ್ಮೀನಾರಾಯಣ ಮಾತನಾಡಿದರು. ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಸಹಾಯಕ ನಿರ್ದೇಶಕ ಡಿ. ಶಿವ ಶಂಕರ್, ವಿ.ಸಿ.ಪೆದ್ದಣ್ಣ, ಮುನೆಯ್ಯ, ನಾಗೇಂದ್ರಬಾಬು, ಲೋಕೇಶ್, ಕೋಲಾರ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ನಂಜಪ್ಪ, ನಿರ್ದೇಶಕ ಕೋ.ನಾ.ಮಂಜು ನಾಥ್, ಇಲಾಖೆಯ ನೌಕರರಾದ ವಿಜಯಲಕ್ಷ್ಮೀ, ಆರ್. ಸುದೀಪ್, ಸಾರಥಿ, ಶಂಕರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು