ಲಾಕ್ಡೌನ್: ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧ
Team Udayavani, Jul 27, 2020, 10:31 AM IST
ಹಾವೇರಿ: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕರೆ ನೀಡಿರುವ ರವಿವಾರದ ಲಾಕ್ ಡೌನ್ಗೆ ಜಿಲ್ಲೆಯ ಜನತೆ ಬೆಂಬಲ ನೀಡಿದ್ದು, ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿತ್ತು.
ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರವಿವಾರ ಬೆಳಿಗ್ಗೆಯಿಂದಲೇ ಬಹುತೇಕ ಎಲ್ಲ ವ್ಯಾಪಾರ-ವ್ಯವಹಾರ ಬಂದ್ ಆಗಿತ್ತು. ರಸ್ತೆಯಲ್ಲಿ ಜನ ಸಂಚಾರ, ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರವೂ ಸಂಪೂರ್ಣ ಬಂದ್ ಆಗಿತ್ತು. ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಪೊಲೀಸರು ಕರ್ಫ್ಯೂ ನಿಯಮ ಪಾಲನೆಗಾಗಿ ನಿರತರಾಗಿದ್ದರು. ಹಾಲು, ತರಕಾರಿಯಂತಹ ಅವಶ್ಯಕ ವಸ್ತುಗಳ ಅಂಗಡಿಗಳು ಮಾತ್ರ ಬೆಳಿಗ್ಗೆ 9 ಗಂಟೆ ವರೆಗೆ ತೆರೆದಿದ್ದವು. ನಗರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿದ್ದರು. ಈ ನಡುವೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದರು.
ಜಿಲ್ಲೆಯ ಉಳಿದ ಕಡೆಗಳಲ್ಲಿ ಬೆಳಗ್ಗೆ 9 ಗಂಟೆ ವರೆಗೆ ಹಾಲು ಮಾರಾಟ ಕೇಂದ್ರ ಹಾಗೂ ಕೆಲ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಉಳಿದಂತೆ ಹೋಟೆಲ್, ಹಣ್ಣು-ತರಕಾರಿ ಮಾರುಕಟ್ಟೆ, ಹೂ ಮಾರಾಟ ಬಂದ್ ಆಗಿತ್ತು. ಬಸ್ ಸಂಚಾರ ಸಹ ಸ್ಥಗಿತವಾಗಿತ್ತು. ತರಕಾರಿ ಮಾರುಕಟ್ಟೆ, ಜನದಟ್ಟಣೆಯಿಂದ ಕೂಡಿರುತ್ತಿದ್ದ ರಸ್ತೆಗಳು, ನಗರದ ವಿವಿಧ ಪ್ರಮುಖ ವೃತ್ತಗಳು ಜನರಿಲ್ಲದೆ ಭಣಭಣ ಎನಿಸಿದವು. ಬಸ್, ಆಟೋ ಸೇರಿದಂತೆ ಯಾವುದೇ ಸಾರಿಗೆ ಸಂಚಾರವಿಲ್ಲದೇ ರಸ್ತೆಗಳು ಬಿಕೋ ಎಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್