ಶೀಘ್ರ ಐಸೋಲೇಷನ್‌ ವಾರ್ಡ್‌ ಕಾರ್ಯಾರಂಭ


Team Udayavani, Jul 28, 2020, 7:54 AM IST

ಶೀಘ್ರ ಐಸೋಲೇಷನ್‌ ವಾರ್ಡ್‌ ಕಾರ್ಯಾರಂಭ

ದೇವನಹಳ್ಳಿ: ಕೋವಿಡ್ ಸೋಂಕು ತಾಲೂಕು ಮತ್ತು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರ ಪಕ್ಕದ ಕೋವಿಡ್ ಪರೀಕ್ಷಾ ಕೇಂದ್ರದಲ್ಲಿ ನೂತನ ತೀವ್ರ ನಿಗಾ ಘಟಕ, ಐಸೋಲೇಷನ್‌ ವಾರ್ಡ್‌ ಘಟಕ ನಿರ್ಮಾ ಣದ ಕಾಮಗಾರಿ ಭರದಿಂದ ನಡೆಯುತ್ತಿದೆ. ಕೋವಿಡ್ ಪರೀಕ್ಷೆ ಸಕಾಲದಲ್ಲಿ ನಡೆಸಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು,

ಸೋಂಕಿತ ರಲ್ಲದವರನ್ನು ಕ್ವಾರಂಟೈನ್‌ನಿಂದ ಬಿಡುಗಡೆ ಮಾಡುವುದು ಅನಿವಾರ್ಯ. ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿ ರುವ ತಾಯಿ ಮಗು ಆಸ್ಪತ್ರೆಯಲ್ಲಿನ 4-6 ಕೊಠಡಿಗಳನ್ನು ಹೈಟೆಕ್‌ ಗಂಟಲು ದ್ರವ ಪರೀಕ್ಷಾ ಕೇಂದ್ರ, 80 ಹಾಸಿಗೆಯುಳ್ಳ ತುರ್ತು ನಿಗಾ ಘಟಕ ಕಾರ್ಯಾರಂಭಕ್ಕೆ ಸಿದ್ಧತೆ ನಡೆ ಯುತ್ತಿದೆ. ಈ ಮೂಲಕ ಒಂದು ವಾರದೊಳ ಗಾಗಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ತೀವ್ರ ನಿಗಾ ಘಟಕ ಮತ್ತು ಐಸೋ ಲೇಷನ್‌ ವಾರ್ಡ್‌ಗಳು ಜಿಲ್ಲೆ ಮತ್ತು ತಾಲೂಕಿನಲ್ಲಿ ಅತ್ಯವಶ್ಯಕ. ಕೋವಿಡ್ ಪಾಸಿಟಿವ್‌ ಪ್ರಕರಣ ಗಳಿಗೆ ಚಿಕಿತ್ಸೆ ನೀಡಲು ಸಹಕಾರಿ. ಕಳೆದ ಜೂನ್‌ನಲ್ಲಿ ಗಂಟಲು ದ್ರವ ಪರೀಕ್ಷೆಗಳ ವರದಿ ಬೆಂಗಳೂರಿಗೆ ಕಳುಹಿಸಿದರೂ ಸಾವಿರಾರು ಸೋಂಕಿತ ಜನರ ಪರೀಕ್ಷೆ ನಡೆಸುವುದು ಸವಾಲಾಗಿತ್ತು. ಇದನ್ನು ಮನ ಗಂಡ ಸರ್ಕಾರ ಕೇಂದ್ರ ವಿಪತ್ತು ನಿರ್ವಹಣಾ ಯೋಜನೆಯಡಿ ದೇವನಹಳ್ಳಿಯಲ್ಲಿ 10 ತುರ್ತು ನಿಗಾ ಘಟಕದ ಬೆಡ್‌ಗಳ ಜತೆಗೆ ಪ್ರತಿ ಬೆಡ್‌ಗೆ ಒಂದೊಂದು ವೆಂಟಿಲೇಟರ್‌ ಉಳ್ಳ ಹೈಟೆಕ್‌ ಕೇಂದ್ರ ಮತ್ತು 60 ಹಾಸಿಗೆಗಳ ಸುಸಜ್ಜಿತ ಚಿಕಿತ್ಸಾ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರತ್ಯೇಕಿತ ಗಂಟಲು ದ್ರವ ಪಡೆ ಯಲು ಕೊಠಡಿ ವ್ಯವಸ್ಥೆಯ ಸಿದ್ಧತೆ ನಡೆದಿದೆ. ಕೋವಿಡ್ ಆಸ್ಪತ್ರೆ ಪ್ರಾರಂಭವಾಗುತ್ತಿರುವುದರಿಂದ ತ್ವರಿತವಾಗಿ ಗಂಟಲು ದ್ರವ ಪರೀಕ್ಷೆ ನಡೆಸಿ, ಗರಿಷ್ಠ ಮೂರು ತಾಸಿನಲ್ಲಿ ಸ್ಥಳದಲ್ಲಿಯೇ ವರದಿ ಸಿಗುವುದರಿಂದ ಸೋಂಕಿತರಿಗೆ ತ್ವರಿತ ಚಿಕಿತ್ಸೆ, ನೆಗೆಟಿವ್‌ ಬಂದಂ ತಹವರಿಗೆ ಕ್ವಾರಂಟೈನ್‌ನಿಂದ ಬಿಡುಗಡೆ ಮಾಡಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಆರೋಗ್ಯಾಧಿಕಾರಿಗಳು ಹೇಳುತ್ತಾರೆ.

ಇತ್ತೀಚಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪರೀಕ್ಷಾ ವರದಿ ಕೈಸೇರುತ್ತಿರುವುದು ತಡವಾಗುತ್ತಿದೆ. ಅದಕ್ಕಾಗಿ ಕೋವಿಡ್ ಸೋಂಕಿತರಿಗಾಗಿ ಪರೀಕ್ಷಾ ಘಟಕ ಪ್ರಾರಂಭಿಸಲಾಗುತ್ತಿದೆ. ಡಾ.ಮಂಜುಳಾದೇವಿ, ಜಿಲ್ಲಾ ಆರೋಗ್ಯಾಧಿಕಾರಿ

ಸಕಾಲದಲ್ಲಿ ಸೋಂಕು ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದು. ಸೋಂಕಿತರಲ್ಲದವರನ್ನು ಕ್ವಾರಂಟೈನ್‌ ನಿಂದ ಬಿಡುಗಡೆಗೊಳಿಸಬೇಕು. ಸೋಂಕಿನ ಪರೀಕ್ಷಾ ಘಟಕ ಪ್ರಾರಂಭಿಸುತ್ತಿರುವುದು ಉತ್ತಮ ಕಾರ್ಯ.   ಎಚ್‌.ಕೆ.ವೆಂಕಟೇಶಪ್ಪ, ಜಿಲ್ಲಾ ಡಿಎಸ್‌ಎಸ್‌ ಕಾರ್ಯಕಾರಿ ಸಮಿತಿ ಸದಸ್ಯ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.