ಕೋವಿಡ್‌ ಕರ್ತವ್ಯ ನಿರ್ವಹಣೆಗೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ಸಿದ್ಧ


Team Udayavani, Jul 28, 2020, 8:59 AM IST

ಕೋವಿಡ್‌ ಕರ್ತವ್ಯ ನಿರ್ವಹಣೆಗೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ಸಿದ್ಧ

ಧಾರವಾಡ: ಕೋವಿಡ್‌ ಸೋಂಕಿತರ ಚಿಕಿತ್ಸೆ, ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಕೌನ್ಸೆಲಿಂಗ್‌, ಸೀಲ್‌ಡೌನ್‌ ಪ್ರದೇಶಗಳ ನಿರ್ವಹಣೆ, ಜನದಟ್ಟಣೆ ಕಡಿಮೆ ಮಾಡಲು ಮಾರುಕಟ್ಟೆಗಳ ಸ್ಥಳಾಂತರಿಸಲು ಅಗತ್ಯವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮಾನವ ಸಂಪನ್ಮೂಲ ಒದಗಿಸಲಾಗುವುದು. ಹೀಗಾಗಿ ಹು-ಧಾ ಮಹಾ ನಗರ ಪಾಲಿಕೆಯು ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಡಿಸಿ ನಿತೇಶ್‌ ಪಾಟೀಲ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ 19 ನಿಯಂತ್ರಣಕ್ಕಾಗಿ ರಚಿಸಿರುವ ಕಣ್ಗಾವಲು ತಂಡಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ ನಿರ್ವಹಣೆ ಎಲ್ಲಾ ಇಲಾಖೆಗಳ ಅಧಿ ಕಾರಿಗಳು, ಇಂಜನಿಯರ್‌ಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ನಿರ್ವಹಣೆಗೆ ನಗರ ಸ್ಥಳೀಯ ಸಂಸ್ಥೆಗಳು ಪ್ರತ್ಯೇಕ ಏಜೆನ್ಸಿ ಗುರುತಿಸಿ ಕಟ್ಟಿಗೆ, ಮಾನವ ಸಂಪನ್ಮೂಲ, ವಾಹನ ಮತ್ತಿತರ ಅಗತ್ಯ ಸೇವೆಗಳು 24¥7 ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ನಿಯಮಗಳ ಪಾಲನೆ ಪರಿಶೀಲಿಸಲು ಪೊಲೀಸ್‌ ಇಲಾಖೆ ಸಹಕಾರ ಪಡೆಯಬೇಕೆಂದು ಸೂಚಿಸಿದರು.

ಮಹಾನಗರ ಪಾಲಿಕೆಯು ಜನಜಾಗೃತಿಗೆ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮನೆಗಳಲ್ಲಿ ಪ್ರತ್ಯೇಕವಾಗಿ ಇರುವಿಕೆ ಕುರಿತು ವ್ಯಂಗ್ಯಚಿತ್ರ, ಕಲೆ, ಫೋಟೋಗಳನ್ನು ಬಳಸಿ ಹೆದ್ದಾರಿ ಫಲಕಗಳನ್ನು ಅವಳಿನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕೆಂದು ಸೂಚನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಮಾತನಾಡಿ, ಜಾಗೃತಿ ಮೂಡಿಸಲು ಚಿಕ್ಕಮಕ್ಕಳಿಂದ ಆನ್‌ ಲೈನ್‌ ಮೂಲಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ, ಉತ್ತಮ ಕಲಾಕೃತಿ ನೀಡಿದ ಮಕ್ಕಳನ್ನು ಜಿಲ್ಲಾ ಧಿಕಾರಿಗಳೊಂದಿಗೆ ಉಪಹಾರಕ್ಕೆ ಆಹ್ವಾನಿಸಿ, ಪ್ರೋತ್ಸಾಹಿಸಬೇಕೆಂಬ ಸಲಹೆ ನೀಡಿದಾಗ ಜಿಲ್ಲಾಧಿಕಾರಿಗಳು ಒಪ್ಪಿಗೆ ಸೂಚಿಸಿ, ಚಿತ್ರಕಲೆ,ಲೇಖನ, ಘೋಷವಾಕ್ಯ ರಚನೆ ಹೀಗೆ ವೈವಿಧ್ಯಮಯ ಸ್ಪರ್ಧೆ ಏರ್ಪಡಿಸಲು ಸೂಚಿಸಿದರು.

ಜಿಪಂ ಸಿಇಒ ಡಾ| ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪ್ರಕರಣಗಳ ದಾಖಲೀಕರಣ ಮತ್ತು ಡಿಸ್‌ ಚಾರ್ಜ್‌ ವರದಿಗಳ ಕ್ರೋಢೀಕರಣ ಸರಳಗೊಳಿಸಲು ಗೂಗಲ್‌ ಸ್ಪ್ರೆಡ್‌ ಶೀಟ್‌ ರಚಿಸಿ ಆ ಮೂಲಕ ಅಪ್‌ಡೇಟ್‌ ಮಾಡುವ ಸೌಕರ್ಯ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಕಲ್ಪಿಸಬೇಕು ಎಂದರು.

ಹು-ಧಾ ಉಪ ಪೊಲೀಸ್‌ ಆಯುಕ್ತ ಕೃಷ್ಣಕಾಂತ್‌, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಡಿಮ್ಹಾನ್ಸ್‌ ಮುಖ್ಯ ಆಡಳಿತಾಧಿಕಾರಿ ಡಾ| ಷಣ್ಮುಖ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ್‌ ಇದ್ದರು.

ಟಾಪ್ ನ್ಯೂಸ್

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.