ಮೂರಾಜೆ ಕೊಪ್ಪ ಶಾಲಾ ಕಟ್ಟಡ ನಿರ್ಮಾಣಕ್ಕೆ ತೊಡಕು; ಬಿಇಒ ಭೇಟಿ; ಸಮಸ್ಯೆ ಬಗೆಹರಿಸುವ ಭರವಸೆ


Team Udayavani, Jul 29, 2020, 12:57 PM IST

ಮೂರಾಜೆ ಕೊಪ್ಪ ಶಾಲಾ ಕಟ್ಟಡ ನಿರ್ಮಾಣಕ್ಕೆ ತೊಡಕು; ಬಿಇಒ ಭೇಟಿ; ಸಮಸ್ಯೆ ಬಗೆಹರಿಸುವ ಭರವಸೆ

ಕೊಪ್ಪ ಸರಕಾರಿ ಕಿ.ಪ್ರಾ. ಶಾಲೆಗೆ ಬಿಇಒ ಲೋಕೇಶ್‌ ಭೇಟಿ ನೀಡಿದರು.

ಕಡಬ: ಕೋಡಿಂಬಾಳ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿ.ಪ್ರಾ. ಶಾಲೆಯ ಕಟ್ಟಡ ಶಿಥಿಲ ಗೊಂಡಿದ್ದು, ಜಾಗದ ತೊಡಕಿ ನಿಂದಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದ ಅನುದಾನ ಲಭಿಸದ ಕುರಿತು ಉದಯವಾಣಿ ಸುದಿನ ಜು. 16ರ ಸಂಚಿಕೆಯಲ್ಲಿ “ನೆಲೆ ಕಳೆದುಕೊಂಡ ಮೂರಾಜೆ ಕೊಪ್ಪ ಶಾಲೆ; ಮಕ್ಕಳು ಅತಂತ್ರ’ ಎನ್ನುವ ಸಚಿತ್ರ ವರದಿಗೆ ಅಧಿಕಾರಿಗಳಿಂದ ಪೂರಕ ಸ್ಪಂದನೆ ಲಭಿಸಿದೆ.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ, ಕಡಬ ಕಂದಾಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದಾರೆ. ಸುಮಾರು 40 ಮಕ್ಕಳು ಕಲಿಯುತ್ತಿರುವ ಮೂರಾಜೆ ಕೊಪ್ಪ ಶಾಲಾ ಕಟ್ಟಡದ ಗೋಡೆ ಹಾಗೂ ಛಾವಣಿಯಲ್ಲಿ ಬಿರುಕು ಕಂಡುಬಂದಿರುವ ಕಾರಣದಿಂದಾಗಿ ಅದನ್ನು ತೆರವುಗೊಳಿಸಲು ಸರಕಾರ ಆದೇಶಿಸಿದೆ. ಆದರೆ ಶಾಲಾ ಕಟ್ಟಡ ಇರುವ ಜಾಗ ಭಾಗಶಃ ಅರಣ್ಯ ಪ್ರದೇಶದಲ್ಲಿದೆ ಎನ್ನುವ ಕಾರಣದಿಂದಾಗಿ ಇದುವರೆಗೆ ಶಾಲೆಯ ಹೆಸರಿನಲ್ಲಿ ಪಹಣಿ ಪತ್ರ ಲಭಿಸಿರಲಿಲ್ಲ. ಅದರಿಂದಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಇರಿಸಲು ತಾಂತ್ರಿಕ ತೊಡಕು ಎದುರಾಗಿದೆ. ಈಗಿನ ಕಟ್ಟಡ ಶಿಥಿಲಗೊಂಡ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ಪಕ್ಕದ ಭಜನ ಮಂದಿರದ ಜಗಲಿ ಹಾಗೂ ತಾತ್ಕಾಲಿಕ ಶೆಡ್‌ನ‌ಲ್ಲಿ ತರಗತಿ ನಡೆಸಲಾಗುತ್ತಿತ್ತು.

ಕಡಬ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಕುಮಾರ್‌ ಕೆ.ಜೆ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಗುಣವತಿ ದೊಡ್ಡಕೊಪ್ಪ, ಉಪಾ ಧ್ಯಕ್ಷೆ ಬೇಬಿ ಉಪಸ್ಥಿತರಿದ್ದರು.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಮಂಗಳವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಬಳಿಕ ಕಡಬ ಕಂದಾಯ ಕಚೇರಿಗೆ ಭೇಟಿ ನೀಡಿ ಶಾಲೆಯ ಜಮೀ ನಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಬಳಿಕ ಪತ್ರಿಕೆ ಯೊಂದಿಗೆ ಮಾತನಾಡಿ, ಈಗಾಗಲೇ ಶಾಲೆಯ ಜಮೀನಿನ ಸಮಸ್ಯೆ ಕುರಿತು ಕ್ಷೇತ್ರದ ಶಾಸಕರೊಂದಿಗೆ ಸಮಾ ಲೋಚನೆ ನಡೆಸಲಾಗಿದೆ. ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಸ್ಪಂದಿಸಿದ್ದಾರೆ. ಕಡಬದ ಕಂದಾಯ ಅಧಿಕಾರಿ ಗಳು ಹಾಗೂ ಅರಣ್ಯ ಇಲಾಖೆಯ ಸಿಬಂದಿ ಭೇಟಿ ನೀಡಿ ಜಮೀನಿನ ಅಳತೆ ನಡೆಸಿ 34 ಸೆಂಟ್ಸ್‌ ಜಾಗವನ್ನು ಶಾಲೆಗಾಗಿ ಗುರುತಿಸಿದ್ದಾರೆ. ಈ ಬಗ್ಗೆ ಅವರು ಸಹಾ ಯಕ ಆಯುಕ್ತರಿಗೆ ವರದಿ ಸಲ್ಲಿಸು ವುದಾಗಿ ತಿಳಿಸಿದ್ದು, ಶಾಲೆ ಪುನರಾರಂಭಗೊಳ್ಳುವ ಮೊದಲು ಜಮೀನಿನ ಸಮಸ್ಯೆ ಬಗೆಹರಿಯುವ ಭರವಸೆ ಹೊಂದಲಾಗಿದೆ ಎಂದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.