ಬೆಳಗಾವಿಯಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಐವರು ಪೋಲೀಸರ ಬಲೆಗೆ
Team Udayavani, Jul 29, 2020, 9:58 PM IST
ಬೆಳಗಾವಿ: ಮಹಿಳೆಯರನ್ನು ಇಟ್ಟುಕೊಂಡು ವ್ಯಕ್ತಿಯನ್ನು ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟು ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಥಣಿಯ ಸದಾಶಿವ ಚಿಪ್ಪಲಕಟ್ಟಿ, ಬೆಳಗಾವಿಯ ನೆಹರು ನಗರದ ರಘುನಾಥ ಧುಮಾಳೆ, ಸವದತ್ತಿಯ ಗೌರಿ ಲಮಾಣಿ, ಮಂಜುಳಾ ಜತ್ತೆನ್ನವರ ಹಾಗೂ ಸವದತ್ತಿ ತಾಲೂಕಿನ ಉಗರಗೋಳದ ಸಂಗೀತಾ ಕಣಕಿಕೊಪ್ಪ ಎಂಬುವರನ್ನು ಬಂಧಿಸಲಾಗಿದೆ.
ಜಮಖಂಡಿ ಮೂಲದ ವ್ಯಕ್ತಿಯನ್ನು ಪರಿಚಯ ಮಾಡಿಕೊಂಡ ಈ ಮಹಿಳೆಯರು ಲಾಡ್ಜ್ ಗೆ ಕರೆಯಿಸಿಕೊಂಡಿದ್ದಾರೆ. ನಗರದ ಲಾಡ್ಜ್ ಗೆ ಕರೆಯಿಸಿ ಮಾತುಕತೆ ನಡೆಸಿದ್ದಾರೆ. ವ್ಯಕ್ತಿಯೊಂದಿಗೆ ಸಲುಗೆ ಬೆಳೆಸಿಕೊಂಡ ಈ ಮಹಿಳೆಯರು ಹನಿಟ್ರ್ಯಾಪ್ ಜಾಲ ಬೀಸಿದ್ದಾರೆ. ಅಷ್ಟರೊಳಗೆ ಪ್ರೈಮ್ ನ್ಯೂಸ್ ಯೂಟ್ಯುಬ್ ಚಾನೆಲ್ ಎಂದು ಹೇಳಿಕೊಂಡು ಲಾಡ್ಜ್ ಗೆ ಬಂದಿದ್ದಾರೆ. ಮಹಿಳೆಯರೊಂದಿಗೆ ಕುಳಿತಿದ್ದ ವ್ಯಕ್ತಿಯ ವಿಡಿಯೋ ಮಾಡಿಕೊಂಡಿದ್ದಾರೆ. ಜತೆಗೆ ಸಂಭಾಷಣೆಯ ಆಡಿಯೋ ಇಟ್ಟುಕೊಂಡು ಹೆದರಿಸಿದ್ದಾರೆ.
ಈ ವಿಡಿಯೋ ಹಾಗೂ ಸಂಬಾಷಣೆಯ ಆಡಿಯೋ ಚಾನೆಲ್ನಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ನಂತರ 5 ಲಕ್ಷ ರೂ.ಗೆ ವ್ಯವಹಾರ ಕುದಿರಿಸಿದ್ದಾರೆ. ಬಳಿಕ ಜಮಖಂಡಿಯ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಐವರನ್ನು ಲಾಡ್ಜ್ ನಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಹನಿಟ್ರ್ಯಾಪ್ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರಿಂದ ಪ್ರೈಮ್ನ್ಯೂಸ್ ಎಂಬ ಚಾನೆಲ್ ನ ಗುರುತಿನ ಚೀಟಿ, ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ, ಮಾಳಮಾರುತಿ ಇನ್ಸಪೆಕ್ಟರ್ ಬಿ.ಆರ್. ಗಡ್ಡೇಕರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಹನಿಟ್ರ್ಯಾಪ್ ಜಾಲವನ್ನು ಭೇದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ