ಮೂರುವರ್ಷ ಯಡಿಯೂರಪ್ಪ ಅವರೇ ಸಿಎಂ: ಸವದಿ, ರವಿ, ಜೊಲ್ಲೆ ಅವರಿಂದ ಗೊಂದಲಕ್ಕೆ ತೆರೆ ಯತ್ನ


Team Udayavani, Jul 30, 2020, 6:25 AM IST

ಮೂರುವರ್ಷ ಯಡಿಯೂರಪ್ಪ ಅವರೇ ಸಿಎಂ: ಸವದಿ, ರವಿ, ಜೊಲ್ಲೆ ಅವರಿಂದ ಗೊಂದಲಕ್ಕೆ ತೆರೆ ಯತ್ನ

ಬೆಂಗಳೂರು: ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ದಿಲ್ಲಿಗೆ ಭೇಟಿ ನೀಡಿ ಕುತೂಹಲಕ್ಕೆ ಕಾರಣರಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ದಿಲ್ಲಿ ಭೇಟಿ ಪೂರ್ವಯೋಜಿತವಾಗಿದ್ದು, ರಾಜಕೀಯ ಲೆಕ್ಕಾಚಾರ ಇಲ್ಲವೇ ಗೊಂದಲ ಮೂಡಿಸುವ ಅಗತ್ಯವಿಲ್ಲ ಎಂದು ಅವರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ನಾನು ಯಾವುದಕ್ಕೂ ಆಸೆ ಪಟ್ಟವನಲ್ಲ. ಯಡಿಯೂರಪ್ಪ ಇರುವವರೆಗೆ ಯಾರೂ ಪ್ರಶ್ನೆ ಮಾಡುವಂತಿಲ್ಲ.

ಮುಂದೆ ಅವರ ನೇತೃತ್ವದಲ್ಲೇ ಚುನಾವಣೆ ಗೆಲ್ಲಲು ಸಂಕಲ್ಪ ಮಾಡುತ್ತೇವೆ. ಉಪಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ದಿಲ್ಲಿಗೆ ತೆರಳಿದ್ದು ಎಂಬುದೂ ಸುಳ್ಳು ಎಂದರು.

ಬುಧವಾರ ಬೆಂಗಳೂರಿಗೆ ಆಗಮಿಸಿದ ಲಕ್ಷ್ಮಣ ಸವದಿ, ಇಲಾಖೆ ಕೆಲಸಕ್ಕೆ ದಿಲ್ಲಿಗೆ ತೆರಳಿದ್ದೆ. ಕಾಕತಾಳೀಯ ಎಂಬಂತೆ ರಾಜ್ಯಪಾಲರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ದಿಲ್ಲಿಗೆ ತೆರಳಿದ್ದರಿಂದ ಹಲವು ವದಂತಿ ಹರಡಿದಾಡಿವೆ ಎಂದರು.

ಎಲ್ಲವೂ ಊಹಾಪೋಹ: ರವಿ
ಸವದಿಯವರ ದಿಲ್ಲಿ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಈ ಹಂತದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಎಂಬ ವಿಚಾರ ಸತ್ಯಕ್ಕೆ ದೂರವಾದುದು ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರ ಯಾಕೆ ಬಂತು ಎಂಬುದೇ ಗೊತ್ತಿಲ್ಲ ಎಂದರು.

ಯಾವುದೇ ಬೆಳವಣಿಗೆ ನಡೆದಿಲ್ಲ: ಜೊಲ್ಲೆ
ನಾನು ಇಲಾಖೆ ಕಾರ್ಯದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋಗಿದ್ದೆ. ಅದನ್ನು ಸಚಿವ ಸ್ಥಾನ ಉಳಿಸಿಕೊಳ್ಳಲು ದಿಲ್ಲಿಗೆ ತೆರಳಿದ್ದಾರೆ ಎಂಬಂತೆ ಬಿಂಬಿಸಲಾಗಿದೆ. ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಜನ ಹೊಡೆದಾರು: ಪ್ರಮೋದ್‌ ಮುತಾಲಿಕ್‌

ಈಗ ಸಿಎಂ ಬದಲಾಯಿಸಿದರೆ ಜನ ಬೆನ್ನು ಹತ್ತಿ ಹೊಡೆಯುತ್ತಾರೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

ಅಧ್ಯಕ್ಷರನ್ನು ಭೇಟಿಯಾಗಿದ್ದೆ
ದಿಲ್ಲಿಯಲ್ಲೂ ಬುಧವಾರ ಬೆಳಗ್ಗೆ ಪ್ರತಿಕ್ರಿಯಿಸಿ ಲಕ್ಷ್ಮಣ ಸವದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿದ್ದೆ. ಕೇಂದ್ರ ಸರಕಾರ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಿಹಿ ನೀಡಿ ಶುಭ ಕೋರಿದ್ದೇನೆ. ಅವರೊಂದಿಗೆ ರಾಜಕೀಯ ಚರ್ಚಿಸಿಲ್ಲ. ಅಮಿತ್‌ ಶಾ ಭೇಟಿಗೆ ಅವಕಾಶ ಸಿಕ್ಕಿಲ್ಲ ಎಂದು ತಿಳಿಸಿದರು.

ಎಲೆಕ್ಟ್ರಿಕ್‌ ಬಸ್‌
ಎಲೆಕ್ಟ್ರಿಕ್‌ ಬಸ್‌ ಕುರಿತಂತೆ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಜತೆ ಚರ್ಚಿಸಿದ್ದೇನೆ. ಬೆಂಗಳೂರಿಗೆ 300 ಹಾಗೂ ಹುಬ್ಬಳ್ಳಿ- ಧಾರವಾಡಕ್ಕೆ 50 ಎಲೆಕ್ಟ್ರಿಕ್‌ ಬಸ್‌ ಕುರಿತಂತೆ ಮಾತುಕತೆ ನಡೆಸಲಾಗಿದೆ ಎಂದರು ಸವದಿ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.