ಇಂದು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗೆ ಸೋಂಕು ದೃಢ: ಪ್ರತ್ಯೇಕ ವ್ಯವಸ್ಥೆ
Team Udayavani, Jul 30, 2020, 10:27 AM IST
ಚಿಕ್ಕಮಗಳೂರು: ಇಂದು ನಡೆಯಲಿರುವ ಸಿ.ಇ.ಟಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಯೊಬ್ಬರಲ್ಲಿ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದ್ದು, ಆದರೂ ಪರೀಕ್ಷೆ ಬರೆಯಲು ವಿಶೇಷವಾದ ವ್ಯವಸ್ಥೆ ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಖಾಸಗಿ ಶಾಲೆಯ ವಿದ್ಯಾರ್ಥಿಗೆ ಕೆಲ ದಿನಗಳಿಂದ ಅನಾರೋಗ್ಯಕಾಣಿಸಿಕೊಂಡಿದ್ದು, ಮಂಗಳವಾರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ವರದಿ ಪಾಸಿಟಿವ್ ಬಂದಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ.
ವಿದ್ಯಾರ್ಥಿಯ ಭ್ಯವಿಷದ ಕಾರಣದಿಂದ ಪರೀಕ್ಷೆಗೆ ತೊಂದರೆ ಆಗಬಾರದು ಎಂದು ನಗರದ ಮಧುವನ ಲೇಔಟ್ ನಲ್ಲಿನ ಕೋವಿಡ್ ಆಸ್ಪತ್ರೆಯ ವಿಶೇಷ ಕೇರ್ ಸೇಂಟರನಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಆರೋಗ್ಯ, ಶಿಕ್ಷಣ ಇಲಾಖಾದಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.