ಸಾವಯವ ಕೃಷಿಯನ್ನು ಬ್ರ್ಯಾಂಡ್‌ ಆಗಿಸಿದ ಪ್ರಾಧ್ಯಾಪಕ

 ಲಾಕ್‌ಡೌನ್‌ ಸಮಯ ಬಳಕೆ; ವಿವಿಧ ತರಕಾರಿ ಬೆಳೆಗೆ ತಂತ್ರಜ್ಞಾನ ಸ್ಪರ್ಶ

Team Udayavani, Jul 30, 2020, 2:31 PM IST

ಸಾವಯವ ಕೃಷಿಯನ್ನು ಬ್ರ್ಯಾಂಡ್‌ ಆಗಿಸಿದ ಪ್ರಾಧ್ಯಾಪಕ

ಡಾ| ಸತ್ಯನಾರಾಯಣ ಭಟ್‌ ಅವರ ತೋಟದಲ್ಲಿ ಬೆಳೆದ ತರಕಾರಿ.

ಬೆಳ್ತಂಗಡಿ: ಎಂಜಿನಿಯರಿಂಗ್‌ ಪ್ರಾಧ್ಯಾಪಕರೊಬ್ಬರು ತರಕಾರಿ ಬೆಳೆಸಿರುವ ಬಗೆ ಹೇಗೆ, ಯಾರು ಬೆಳೆಸಿದ್ದು (ಬೆಳೆಸಿದವರನ್ನು ತಿಳಿದು ಕೋ) ಎಂಬ ಪರಿಕಲ್ಪನೆಯಡಿಯಲ್ಲಿ ಕೃಷಿಗೆ ಆಧುನಿಕತೆ ಮತ್ತು ತಂತ್ರಜ್ಞಾನದ ಸ್ಪರ್ಶ ನೀಡುವ ಮೂಲಕ ವಿವಿಧ ರೀತಿಯ ತರಕಾರಿ, ಹಣ್ಣು ಹಂಪಲುಗಳನ್ನು ಪರಿಚಯಿಸಿದ್ದಾರೆ
ಉಜಿರೆ ಎಸ್‌ಡಿಎಂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಿಕ್‌ ಎಂಜಿನಿಯರ್‌ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ| ಸತ್ಯನಾರಾಯಣ ಭಟ್‌ ಅವರ ಕೃಷಿಪ್ರೇಮ ಯುವ ಸಮೂಹಕ್ಕೆ ಪ್ರೇರಣೆಯಾಗಿದೆ.

ಉಜಿರೆ ಸನಿಹ ಗುರಿಪಳ್ಳ ಎಂಬ ಗ್ರಾಮೀಣ ಪ್ರದೇಶದ ಒಂದು ಎಕ್ರೆ ಕೃಷಿಭೂಮಿಯಲ್ಲಿ ಲಾಕ್‌ಡೌನ್‌ನಿಂದಾಗಿ ಪೂರ್ಣ ಪ್ರಮಾಣದ ಕೃಷಿಕರಾಗಿದ್ದಾರೆ. ಮನೆ ಉಪಯೋಗಕ್ಕೆಂದು ತರಕಾರಿಗಳನ್ನು ಬೆಳೆಸಿದವರು, ಅದನ್ನೇ ಗಂಭೀರವಾಗಿ ಪರಿಗಣಿಸಿ ಸಾವಯವ ಕೃಷಿ ಮೂಲಕ ಮಾರುಕಟ್ಟೆಗೆ ತಮ್ಮದೇ ಬ್ರ್ಯಾಂಡ್‌ ಪರಿಚಯಿಸಿದ್ದಾರೆ.

ನಾವೇಕೆ ನಮ್ಮದೇ ಬ್ರ್ಯಾಂಡ್‌ ಪರಿಚಯಿಸ ಬಾರದು ಎಂಬುದನ್ನು ಮನದಲ್ಲಿಟ್ಟು ಕುಂಬಳಕಾಯಿ, ಮಟ್ಟುಗುಳ್ಳ, ಸೌತೇಕಾಯಿ ಆಧುನಿಕ ಶೈಲಿಯ ಮಾರಾಟದ ಕಲ್ಪನೆಯನ್ನು ಸಾಕಾರಗೊಳಿಸಿದರು. “ನಂದನ’ ಬ್ರ್ಯಾಂಡ್‌ನೊಂದಿಗೆ ಕಳೆದ ಎರಡು ವಾರಗಳ ಅವಧಿಯಲ್ಲಿ ಉಜಿರೆಯ ಸ್ಟೋರ್‌ ಒಂದಕ್ಕೆ 1.25 ಕ್ವಿಂ. ಸೌತೆಕಾಯಿ ಮಾರಾಟ ಮಾಡಿದ್ದಾರೆ.

ತರಕಾರಿಗಳನ್ನು ಸಾಂಪ್ರದಾಯಿಕ ವಿಧಾನಗಳಲ್ಲಿ ಸಾವಯವ, ಡಿ ಕಾಂಪೋಸ್ಟ್‌ ಗೊಬ್ಬರವನ್ನೇ ಬಳಸಿ ಬೆಳೆಸುತ್ತಿದ್ದಾರೆ. ಕೀಟ ನಾಶಕಗಳ ಬದಲಿಗೆ ಗೋಮೂತ್ರ ಸಿಂಪಡಣೆ, ಇನ್ನಿತರ ವಿಧಾನಗಳನ್ನು ನೆಚ್ಚಿಕೊಂಡಿದ್ದಾರೆ. ಐಟಿ, ಬಿಟಿಗಳಲ್ಲಿ ಉದ್ಯೋಗ ಕಳೆದುಕೊಂಡು ನಿರುತ್ಸಾಹಿಗಳಾಗಿ ಬದುಕುವುದಕ್ಕಿಂತ ಇರುವ ಕೃಷಿಭೂಮಿಯಲ್ಲಿ ಸಾವಯವ ಕೃಷಿಯೊಂದಿಗೆ ಜೀವನ ನಡೆಸಿ ಎಂಬ ಸಂದೇಶ ನೀಡಿದ್ದಾರೆ ಎಂಜಿನಿಯರ್‌ ಪ್ರಾಧ್ಯಾಪಕ ಡಾ| ಭಟ್‌.

 ಕ್ಯೂಆರ್‌ ಕೋಡ್‌
ಮುಂದಿನ ದಿನಗಳಲ್ಲಿ “ನಂದನ’ಕ್ಕೆ ಕ್ಯೂಆರ್‌ ಕೋಡ್‌ ಅಳವಡಿಸುವ ನಿರ್ಧಾರ ಮಾಡಿದ್ದೇನೆ. ಗ್ರಾಹಕರು ಆ ಕೋಡ್‌ ಅನ್ನು ಸ್ಕ್ಯಾನ್‌ ಮಾಡಿ ನಮ್ಮ ಫೇಸ್‌ಬುಕ್‌ ಪುಟಗಳ ಮೂಲಕ ಖರೀದಿಸಿದ ತರಕಾರಿಯ ಪೂರ್ಣ ಮಾಹಿತಿ ಪಡೆಯಬಹುದಾಗಿದೆ. ಇದು ಜನರಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ. ಈಗಾಗಲೇ ತರಕಾರಿ ಖರೀದಿಸಿದ ಗ್ರಾಹಕರು ದೂರವಾಣಿ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
– ಡಾ| ಸತ್ಯನಾರಾಯಣ ಭಟ್‌, ಕೃಷಿ ಪ್ರೇಮಿ, ಸಹಾಯಕ ಪ್ರಾಧ್ಯಾಪಕರು

 

ಟಾಪ್ ನ್ಯೂಸ್

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.