ಚಿಕಿತ್ಸೆ ಸಿಗದೆ ಸಾವು: ಡಿಸಿ ಕಚೇರಿಗೆ ಮೃತದೇಹ ತಂದ ಕುಟುಂಬಸ್ಥರು!


Team Udayavani, Jul 30, 2020, 9:03 PM IST

ಚಿಕಿತ್ಸೆ ಸಿಗದೆ ಸಾವು: ಡಿಸಿ ಕಚೇರಿಗೆ ಮೃತದೇಹ ತಂದ ಕುಟುಂಬಸ್ಥರು!

ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕಿತರ ಸಂಖ್ಯೆ ಕ್ಷಿಪ್ರವಾಗಿ ಏರುಗತಿಯಲ್ಲಿ ಸಾಗುತ್ತಿದೆ.

ಮತ್ತೊಂದೆಡೆ ಸಾಮಾನ್ಯ ರೋಗಿಗಳು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿರುವ ಆತಂಕಕಾರಿ ಬೆಳವಣಿಗೆ ನಡೆಯುತ್ತಿದೆ.

ಹಾಸಿಗೆಗಳು ಖಾಲಿ ಇಲ್ಲವೆಂದು ಆಸ್ಪತ್ರೆಯವರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ರೋಗಿಯನ್ನು ಕುಟುಂಬಸ್ಥರು ಸಾಗಿಸಿದ್ದು, ಕಚೇರಿಗೆ ತಲಪುವಷ್ಟರಲ್ಲಿ ಆ ವ್ಯಕ್ತಿ ಕೊನೆಯುಸಿರೆಳೆದಿರುವ ಘಟನೆ ಗುರುವಾರ ನಡೆದಿದೆ.

ಇಲ್ಲಿನ ಮೋಮಿನಪುರದ ನಿವಾಸಿ, 38 ವರ್ಷದ ವ್ಯಕ್ತಿ ಮೊಹಮ್ಮದ್ ಆಯೂಬ್ ಎಂಬವರೇ ಚಿಕಿತ್ಸೆ ಸಿಗದೆ ಮೃತಪಟ್ಟ ದುರ್ದೈವಿ. ಬುಧವಾರ ರಾತ್ರಿ ಇವರಿಗೆ ಜ್ವರ ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಜಿಮ್ಸ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದಾರೆ. ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಮ್ಸ್ ಆಸ್ಪತ್ರೆಯಲ್ಲಿ ಆ್ಯಂಟಿಜನ್ ರ್ಯಾಪಿಡ್ ಪರೀಕ್ಷೆ ಮಾಡಲಾಗಿದೆ.

ಆಯೂಬ್‍ನ ವರದಿ ಕೋವಿಡ್ ನೆಗೆಟಿವ್ ಎಂದು ಬಂದಿದೆ. ಆದರೂ, ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಬೇಕೆಂದು ರಸೀದಿ ಬರೆದು ಕೊಟ್ಟಿದ್ದಾರೆ. ಅಲ್ಲದೇ, ನಮ್ಮಲ್ಲಿ ಹಾಸಿಗೆಗಳು ಲಭ್ಯವಿಲ್ಲ ಎಂದೂ ರಸೀದಿ ಬರೆದು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರ್ಕಾರಿ ಜಿಮ್ಸ್ ಆಸ್ಪತ್ರೆಯಲ್ಲೇ ಹಾಸಿಗೆ ಇಲ್ಲವೆಂದು ಹೇಳಿದ್ದರಿಂದ ರೋಗಿಯನ್ನು ಆಟೋದಲ್ಲಿ ಇಎಸ್ಐ ಆಸ್ಪತ್ರೆ ಸೇರಿ ಐದು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರೂ ಯಾವುದೇ ಆಸ್ಪತ್ರೆಯವರು ದಾಖಲಿಸಿಕೊಳ್ಳದ ಕಾರಣ ಕೊನೆಗೆ ದಿಕ್ಕು ತೋಚದೆ ಜಿಲ್ಲಾಧಿಕಾರಿ ಕಚೇರಿಯತ್ತ ರೋಗಿಯನ್ನು ಆಟೋದಲ್ಲಿ ಕರೆದುಕೊಂಡು ಬಂದಿದ್ದೇವು ಎಂದು ಕುಟುಂಬದವರು ದೂರಿದಿದ್ದಾರೆ.

ಆದರೆ ದುರದೃಷ್ಟವಶಾತ್ ಜಿಲ್ಲಾಧಿಕಾರಿ ಕಚೇರಿಗೆ ಬರುವಷ್ಟರಲ್ಲೇ ಆಯೂಬ್ ಮೃತಪಟ್ಟಿದ್ದಾರೆ. ಮೃತ ದೇಹದನ್ನು ಆಟೋದಲ್ಲೇ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದ ಕುಟುಂಬಸ್ಥರು, ಆಸ್ಪತ್ರೆಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕಿದರು.

ರೋಗಿಯನ್ನು ನಾವೇ ಸ್ಟ್ರೆಚರ್ ಮೇಲೆ ಹಾಕಿಕೊಂಡು ಆಸ್ಪತ್ರೆಯೊಳಗೆ ತೆಗೆದುಕೊಂಡು ಹೋದೆವು. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಇದ್ದರೂ, ರೋಗಿಯನ್ನು ನೋಡಲಿಲ್ಲ. ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಎಂದು ಕೇಳಿಕೊಂಡರೂ ಸ್ಪಂದಿಸಲಿಲ್ಲ. ಇವರ ಸಾವಿಗೆ ಜಿಲ್ಲಾಧಿಕಾರಿಗಳು ಉತ್ತರ ಕೊಡಬೇಕೆಂದು ಮೃತ ಸಹೋದರ ಆಗ್ರಹಿಸಿದರು.

ಆಯೂಬ್ ಶವ ಇರುವ ವಿಷಯ ತಿಳಿದು ಆಟೋ ಸುತ್ತ ಜನರು ಸೇರುತ್ತಿದ್ದಂತೆ ಪೊಲೀಸರು ಬಂದು ಕುಟುಂಬದವರನ್ನು ಮೃತ ದೇಹ ತೆಗೆದುಕೊಂಡು ಹೋಗುವಂತೆ ಗದರಿಸಿದ್ದಾರೆ. ಇದರಿಂದ ಏನು ತೋಚದೆ ಮೃತ ದೇಹವನ್ನು ಕುಟುಂಬಸ್ಥರು ಮನೆಗೆ ತೆಗೆದುಕೊಂಡಿದ್ದಾರೆ. ಈತನ ಸಾವಿಗೆ ಕಾರಣರಾದವರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟಗಾರ ಮೊಹಮ್ಮದ್ ರಿಯಾಜುದ್ದೀನ್ ಒತ್ತಾಯಿಸಿದ್ದಾರೆ.

ಈ ಕುರಿತು ‘ಉದಯವಾಣಿ’ಗೆ ಪ್ರತಿಕ್ರಿಯಿಸಿದ ಡಿಸಿ ಶರತ್ ಬಿ., ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೆಲವು ದಿನಗಳ ಹಿಂದೆಯಷ್ಟೇ ವೆಂಟೇಲೆಟರ್ ಸಿಗದ ಕಾರಣ ಆಶಾ ಕಾರ್ಯಕರ್ತೆ ಸೇರಿ ನಾಲ್ವರು ಸಾವನ್ನಪ್ಪಿರುವ ಆರೋಪಿಗಳು ಕೇಳಿ ಬಂದಿದ್ದವು. ಈ ಘಟನೆಗಳು ಮಾಸುವ ಮುನ್ನವೇ ಇಂತಹುದೇ ಇನ್ನೊಂದು ಘಟನೆ ನಡೆದಿರುವುದು ಕಳವಳಕಾರಿಯಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.