ಒಂದೇ ದಿನ ಹೆಚ್ಚು ಸೋಂಕಿತರು, ಹೆಚ್ಚು ಗುಣಮುಖ!


Team Udayavani, Jul 31, 2020, 6:05 AM IST

ಒಂದೇ ದಿನ ಹೆಚ್ಚು ಸೋಂಕಿತರು, ಹೆಚ್ಚು ಗುಣಮುಖ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಇದುವರೆಗಿನ ದಾಖಲೆ ಸಂಖ್ಯೆಯ, ಅಂದರೆ  6,128 ಮಂದಿಗೆ ಸೋಂಕು ತಗುಲಿದ್ದು, 83 ಮಂದಿ ಮೃತಪಟ್ಟಿದ್ದಾರೆ

ಜತೆಗೆ 3,793 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಇದು ಕೂಡ ಹೊಸ ದಾಖಲೆಯಾಗಿದೆ.

ಈ ಮೂಲಕ ಸೋಂಕು ಪ್ರಕರಣಗಳು 1,18,632ಕ್ಕೆ, ಸೋಂಕಿನಿಂದ ಮೃತಪಟ್ಟವರು 2,230ಕ್ಕೆ, ಹಾಗೂ ಚೇತರಿಸಿಕೊಂಡವರ ಸಂಖ್ಯೆ 46,694ಕ್ಕೆ ಏರಿಕೆಯಾಗಿದೆ.

ಸದ್ಯ 69,700 ಸೋಂಕಿತರು ಚಿಕಿತ್ಸೆಯಲ್ಲಿದ್ದಾರೆ. ಈ ಪೈಕಿ 620 ಮಂದಿ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ.

38,095 ಸೋಂಕು ಪರೀಕ್ಷೆ
ಗುರುವಾರ 20 ಸಾವಿರ Rapid ಆ್ಯಂಟಿಜನ್‌, 17 ಸಾವಿರ ಆರ್‌ಟಿಪಿಸಿಆರ್‌ ಸೇರಿ ಒಟ್ಟು 38,095 ಸೋಂಕು ಪರೀಕ್ಷೆಗಳು ನಡೆದಿವೆ. ಈ ಪೈಕಿ 6,128 ಪಾಸಿಟಿವ್‌ ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.16 ಇದೆ. ಅಂದರೆ, ಪರೀಕ್ಷೆಗೊಳಪಟ್ಟ 100 ಮಂದಿಯಲ್ಲಿ 16 ಮಂದಿಗೆ ಸೋಂಕು ದೃಢಪಟ್ಟಿದೆ.

ಒಂದು ವಾರದಿಂದ 5,000 ಆಸುಪಾಸಿನಲ್ಲಿದ್ದ ಸೋಂಕು  ಇದೇ ಮೊದಲ ಬಾರಿ 6,000ದ ಗಡಿ ದಾಟಿವೆ. ಬೆಂಗಳೂರಿನಲ್ಲಿ 2,233 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮೈಸೂರು 430, ಬಳ್ಳಾರಿ 343, ಉಡುಪಿ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬೆಳಗಾವಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ 200ಕ್ಕೂ ಹೆಚ್ಚು, ದಕ್ಷಿಣ ಕನ್ನಡ, ಧಾರವಾಡ, ರಾಯಚೂರು, ಶಿವಮೊಗ್ಗ, ಬಾಗಲಕೋಟೆ, ಚಿಕ್ಕಮಗಳೂರು, ವಿಜಯಪುರ ಹಾಗೂ ಉತ್ತರ ಕನ್ನಡ ಸೇರಿ ಎಂಟು ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಜ್ಯದ 82 ಸೋಂಕಿತರ ಸಾವಿನಲ್ಲಿ ಅತಿ ಹೆಚ್ಚು ಬೆಂಗಳೂರಿನಲ್ಲಿ 22 ಮಂದಿ, ಮೈಸೂರಿನಲ್ಲಿ 9, ಧಾರವಾಡ, ದಕ್ಷಿಣ ಕನ್ನಡದಲ್ಲಿ 8 ಮತ್ತು ಕಲಬುರಗಿಯಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲಾವಾರು ಒಟ್ಟಾರೆ ಪ್ರಕರಣಗಳಲ್ಲಿ ಮೈಸೂರು ಮತ್ತು ಉಡುಪಿ ತಲಾ 4,000, ಬಳ್ಳಾರಿ 6,000, ಕಲಬುರಗಿ 5,000, ಬೆಳಗಾವಿ 3,000, ಉತ್ತರ ಕನ್ನಡ 2,000, ಕೊಪ್ಪಳ 1,000ದ ಗಡಿ ದಾಟಿವೆ.

1000 ಗಡಿ ದಾಟಿದ ಬೆಂಗಳೂರು ಸಾವು
ರಾಜಧಾನಿಯಲ್ಲಿ ಬುಧವಾರ ಒಟ್ಟಾರೆ ಪ್ರಕರಣಗಳು 50 ಸಾವಿರ ಗಡಿ ದಾಟಿದ್ದು, ಗುರುವಾರ ನಗರದ ಒಟ್ಟಾರೆ ಸಾವು 1,000ದ ಗಡಿದಾಟಿದೆ. ಈವರೆಗೂ 1,009 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ 914 ಮಂದಿ ಜುಲೈಯಲ್ಲೇ ಮೃತಪಟ್ಟಿದ್ದಾರೆ. ಅಂದರೆ ಒಂದು ತಿಂಗಳಿಂದ ನಿತ್ಯ ಸರಾಸರಿ 30 ಸಾವಾಗಿವೆ. ಸದ್ಯ ಒಟ್ಟಾರೆ ಪ್ರಕರಣಗಳು 53,324ಕ್ಕೆ ತಲುಪಿದ್ದು, 15,791 ಮಂದಿ ಗುಣಮುಖರಾಗಿದ್ದು, 36,000 ಮಂದಿ ಚಿಕಿತ್ಸೆಯಲ್ಲಿದ್ದಾರೆ.

ದಾಖಲೆಯ ಗುಣಮುಖ
ಗುಣಮುಖರಾಗುತ್ತಿರುವ ಸಂಖ್ಯೆ ರಾಜ್ಯದಲ್ಲಿ ಮೊದಲ ಬಾರಿ ಮೂರು ಸಾವಿರ ಗಡಿದಾಟಿದೆ. ಈ ಹಿಂದೆ 2800 ಮಂದಿ ಗುಣಮುಖರಾಗಿದ್ದರು. ಗುರುವಾರ ಅತಿ ಹೆಚ್ಚು 3,793 ಮಂದಿ ಚೇತರಿಸಿಕೊಂಡಿದ್ದಾರೆ.  ರಾಜ್ಯದ ಗುಣಮುಖ ದರವೂ ಹೆಚ್ಚಳವಾ ಗಿದ್ದು, ಸದ್ಯ ಶೇ.39ರಷ್ಟಿದೆ.  ಜುಲೈಯಲ್ಲಿ 103,390 ಮಂದಿ ಸೋಂಕಿತರಾಗಿದ್ದು, 38,776 ಮಂದಿ ಗುಣಮುಖರಾಗಿದ್ದಾರೆ.

ಕಲಬುರಗಿ ಗ್ರಾಮೀಣ ಶಾಸಕರಿಗೆ ಕೋವಿಡ್ 19 ಸೋಂಕು
ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೂ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಬುಧವಾರದಿಂದಲೇ ಹೋಂ ಐಸೊಲೇಷನ್‌ಗೆ ಒಳಗಾಗಿದ್ದಾರೆ.

“ನಾನು ಆರೋಗ್ಯವಾಗಿದ್ದೇನೆ. ಕೋವಿಡ್ 19 ರೋಗ ಲಕ್ಷಣಗಳು ಕಂಡು ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಸ್ವಯಂ ಕ್ವಾರಂಟೈನ್‌ ಆಗಿ ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.